ಕೊರೊನಾ ಬಂದ್‌: ಜನರಿಲ್ಲದೇ ಭಣಗುಟ್ಟಿದ ರಾಜಧಾನಿ


Team Udayavani, Mar 15, 2020, 3:10 AM IST

corona-day

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಶನಿವಾರ ರಾಜಧಾನಿ ಅಕ್ಷರಶಃ ಸ್ತಬ್ಧ ಗೊಂಡಿತ್ತು. ಮಾಲ್‌ಗ‌ಳು ಮುಚ್ಚಿದ್ದವು. ಬಸ್‌, ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.

ಬೆಂಗಳೂರು: ಕೊರೊನಾ ಭೀತಿಯಿಂದ ಸರ್ಕಾರ ಒಂದು ವಾರ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಶನಿವಾರ ರಾಜ್ಯ ರಾಜಧಾನಿ ವಾರಾಂತ್ಯದ ಜೋಶ್‌ ಕಳೆದುಕೊಂಡಿತ್ತು. ರಾಜ್ಯ ಸರ್ಕಾರ ಒಂದು ವಾರ ನಗರದ ಎಲ್ಲ ಮಾಲ್‌ಗ‌ಳು, ಚಿತ್ರಮಂದಿರಗಳು, ನೈಟ್‌ಕ್ಲಬ್‌, ಪಬ್‌, ಪಾರ್ಕ್‌, ಈಜುಕೊಳ, ಬೇಸಿಗೆ ಶಿಬಿರ ಸೇರಿದಂತೆ ಜನ ಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಬಂದ್‌ ಘೋಷಿಸಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಜನರಿಂದ ತುಂಬಿ ತುಳುಕುತ್ತಿದ್ದ ಮಾಲ್‌ಗ‌ಳು, ಚಿತ್ರಮಂದಿರಗಳು,ಪಾರ್ಕ್‌ ಗಳು ಬಣಗುಡುತ್ತಿದ್ದವು.

ವಾರಾಂತ್ಯದಲ್ಲಿಯೇ ಹೆಚ್ಚು ಆದಾಯ ಗಳಿಸುತ್ತಿದ್ದ ಹಾಗೂ ಈ ನಿಟ್ಟಿನಲ್ಲಿ ಪೂರ್ವತಯಾರಿಗಳನ್ನೂ ಮಾಡಿಕೊಂಡಿದ್ದ ಮಾಲ್‌ಗ‌ಳ ಫ‌ುಡ್‌ಜಂಕ್ಷನ್‌ಗಳು ಮತ್ತು ಆಹಾರ ಮಾರಾಟ ಉದ್ದಿಮೆಗಳಿಗೆ ದಿಢೀರ್‌ ಕೊರೊನಾ ಬಂದ್‌ ಪೆಟ್ಟು ನೀಡಿದ್ದು, ಕೆಲವು ಮಾಲ್‌ಗ‌ಳು ಈ ಸಮಯವನ್ನು ಸ್ವಚ್ಛತಾ ಕಾರ್ಯಕ್ಕೆ ಬಳಸಿಕೊಳ್ಳಲು ಹಾಗೂ ದುರಸ್ತಿ ಕಾಮಗಾರಿಗಳಿಗೆ ಬಳಸಿಕೊಳ್ಳಲು ಯೋಜನೆ ರೂಪಿಸಿಕೊಂಡಿದ್ದು ಕಂಡುಬಂತು. ವಾಹನ ಸಂಚಾರ, ಬಸ್‌ ಪ್ರಯಾಣಿಕರ ಸಂಖ್ಯೆಯಲ್ಲೂ ವಾರಾಂತ್ಯದ ಜೋಶ್‌ ಕಂಡು ಬರಲಿಲ್ಲ. ಇನ್ನು ನಮ್ಮ ಮೆಟ್ರೋ, ಕೆಎಸ್‌ಆರ್‌ಟಿಸಿ ಹಾಗೂ ವಿಮಾನ ನಿಲ್ದಾಣ ಮಾರ್ಗದ ಬಸ್‌ಗಳಲ್ಲೂ ಸಾರ್ವಜನಿಕರ ಸಂಖ್ಯೆ ಎಂದಿಗಿಂತ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿತ್ತು.

ಸಣ್ಣ ಹೋಟೆಲ್‌ಗೆ ಬೀಗ; ಕೂಲಿ ಕಾರ್ಮಿಕರ ಪರದಾಟ: ಕೊರೊನಾ ನೇರವಾಗಿ ಬಡ ಮತ್ತು ಸಣ್ಣ ಕೂಲಿ ಕಾರ್ಮಿಕರ ಮೇಲೆ ಪರಿಣಾಮ ಬೀರಿದೆ. “ಬಂದ್‌ ಹಿನ್ನೆಲೆಯಲ್ಲಿ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ. ಆದರೆ, ರಜೆ ಸಹಿತ ವೇತನ ನೀಡುತ್ತಾರೆಯೇ ಇಲ್ಲವೇ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಮಾಲ್‌ನ ಒಳಗೆ ಸ್ವಚ್ಛತಾ ಕೆಲಸ ಮಾಡುವುದಕ್ಕೆ ಹಾಗೂ ಶುಕ್ರವಾರ ಉತ್ಪತ್ತಿಯಾಗಿರುವ ಕಸ ವಿಲೇವಾರಿ ಮಾಡುವುದಕ್ಕೆ ಬರುವಂತೆ ಸೂಚನೆ ನೀಡಿದ್ದರು.

ಅದರಂತೆ ಬಂದಿದ್ದೇವೆ” ಎಂದು ಮಾಲ್‌ವೊಂದರ ಕಾರ್ಮಿಕರಾದ ಮೊಹಮ್ಮದ್‌ ಹೇಳಿದರು. ದಿನಗೂಲಿ ಆದಾಯದ ಮೇಲೆ ಅವಲಂಬಿರಾಗಿರುವ ಟ್ಯಾಕ್ಸಿ, ಆಟೋ ಚಾಲಕರು ಪ್ರಯಾಣಿಕರೇ ಇಲ್ಲದಂತಾಗಿದ್ದಾರೆ ಎಂದು ಅಸಹಾಯಕತೆ ತೋಡಿಕೊಂಡರು. ಆಟೋ ಚಾಲಕ ಹನುಮಂತಯ್ಯ ಮಾತನಾಡಿ, ವಾರಾಂತ್ಯವಾದರೆ ಬಿಡುವಿಲ್ಲದ ಟ್ರಿಪ್‌ಗ್ಳು ಬರುತ್ತಿದ್ದವು. ಆದರೆ, ಈಗ ಪ್ರಯಾಣಿಕರೇ ಇಲ್ಲ ಎಂದರು.

ನಗರದಲ್ಲಿ ಕಾಲರಾ ಹರಡುವ ಆತಂಕವೂ ಇರುವುದರಿಂದ ಪಾಲಿಕೆ ರಸ್ತೆ ಬದಿ ಆಹಾರ ಮಾರಾಟ ನಿಷೇಧಿಸಿದೆ. ಅಲ್ಲದೆ, ಬಂದ್‌ ಹಿನ್ನೆಲೆಯಲ್ಲಿ ಶನಿವಾರ ನಗರದ ಹಲವು ಸಣ್ಣ ಹೋಟೆಲ್‌ಗ‌ಳು ಮುಚ್ಚಲ್ಪಟ್ಟಿದ್ದವು. ಇದು ದಿನಗೂಲಿ ಕಾರ್ಮಿಕರ ಮೇಲೆ ನೇರ ಪರಿಣಾಮ ಬೀರಿದ್ದು, ಈ ವರ್ಗದ ಜನ ಊಟ ಮಾಡುವುದಕ್ಕೆ ಅತ್ತ ಪ್ರತಿಷ್ಠಿತ ಹೋಟೆಲ್‌ಗ‌ಳತ್ತಲೂ ಹೋಗಲಾ ಗದೆ, ಇತ್ತ ಸಣ್ಣ ಹೋಟೆಲ್‌ಗ‌ಳು ಬಾಗಿಲು ತೆರೆ ಯದೇ ಪರದಾಡುವ ಸ್ಥಿತಿ ಶೋಚನೀಯವಾಗಿತ್ತು.

ದುರಸ್ತಿಯತ್ತ ಮಾಲೀಕರು: ಬಂದ್‌ ಅನ್ನು ಸದುಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಮಾಲ್‌, ಚಿತ್ರಮಂದಿರಗಳಲ್ಲಿನ ದುರಸ್ತಿ ಕೆಲಸ ಪೂರ್ಣಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮಾಲ್‌ ಹಾಗೂ ಮಂದಿರಗಳ ಸಿಬ್ಬಂದಿ ತಿಳಿಸಿದರು. ಆದರೆ, ಇದಕ್ಕೆ ಪೊಲೀಸ್‌ ಸಿಬ್ಬಂದಿ ಅವಕಾಶ ನೀಡಲಿಲ್ಲ. ಮಲ್ಲೇಶ್ವರದ ಮಾಲ್‌ವೊಂದರ ಒಳಗಿದ್ದ ಕೆಲವು ಸಿಬ್ಬಂದಿಗಳನ್ನು ಪೊಲೀಸರು ಹೊರಕ್ಕೆ ಕರೆದುಕೊಂಡು ಬಂದರು. ಅಲ್ಲದೆ, ಮಾಲ್‌ನ ಒಳಗೆ ಯಾರನ್ನು ಬಿಡದಂತೆ ಸೂಚನೆ ನೀಡುತ್ತಿದ್ದ ದೃಶ್ಯಗಳು ನಗರದ ಹಲವು ಭಾಗದಲ್ಲಿ ಕಂಡುಬಂತು.

ಟ್ರಾಫಿಕ್‌ ಕಿರಿಕಿರಿಗೆ ಬ್ರೇಕ್‌: ವಾರಾಂತ್ಯದಲ್ಲಿ ಸದಾ ಸಂಚಾರ ದಟ್ಟಣೆಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್‌, ಕೃಷ್ಣರಾಜೇಂದ್ರ ಮಾರುಕಟ್ಟೆ, ಜಯನಗರ, ಶಿವಾಜಿನಗರ, ಬ್ರಿಗೇಡ್‌ ರಸ್ತೆ, ಎಂ.ಜಿ ರಸ್ತೆ ಹಾಗೂ ರೇಸ್‌ಕೋರ್ಸ್‌ ಸೇರಿದಂತೆ ನಗರದ ಹಲವು ರಸ್ತೆಗಳು ಶನಿವಾರ ಬಣಗುಡುತ್ತಿದ್ದವು. ಹೀಗಾಗಿ, ಉಳಿದ ದಿನ 20ರಿಂದ 25 ನಿಮಿಷಕ್ಕೆ ತಲುಪಬಹುದಾದ ಸ್ಥಳಗಳನ್ನು 10ರಿಂದ 15ನಿಮಿಷದಲ್ಲಿ ತಲುಪುವಷ್ಟು ಸುಗಮ ಸಂಚಾರದ ವಾತಾವರಣ ನಿರ್ಮಾಣವಾಗಿತ್ತು.

ಗ್ಲಾಸ್‌ಬೇಡ… ಕಪ್‌ಕೊಡಿ: ಕೊರೊನಾ ಭೀತಿ ಸಾರ್ವಜನಿಕರನ್ನು ಎಷ್ಟರ ಮಟ್ಟಿಗೆ ಕಾಡುತ್ತಿದೆ ಎನ್ನುವುದಕ್ಕೆ ಇದೊಂದು ಸಣ್ಣ ಉದಾಹರಣೆ. ಸಾರ್ವಜನಿಕರು ನಿತ್ಯ ಕುಡಿಯುವ ಕಾಫಿ, ಟೀ, ನಿಂಬೆಹಣ್ಣು ಹಾಗೂ ಕಬ್ಬಿನಜ್ಯೂಸ್‌ನ ಗ್ಲಾಸ್‌ಗಳಿಗೆ ಬದಲಾಗಿ ಪೇಪರ್‌ ಕಪ್‌ನಲ್ಲೇ ಟೀ, ಜ್ಯೂಸ್‌ ನೀಡುವಂತೆ ಒತ್ತಾಯ ಮಾಡುತ್ತಿರುವ ದೃಶ್ಯಗಳು ಸಾಮಾನ್ಯವಾಗಿದ್ದವು.

ಬಟ್ಟೆ, ಕೈಗವಸುಗಳೇ ಮಾಸ್ಕ್ಗಳಾಗಿವೆ: ನಗರದಲ್ಲಿ ಜನ ಮಾಸ್ಕ್ ಹಾಕಿಕೊಂಡೇ ಹೊರ ಬರುವುದು ಕಡ್ಡಾಯ ಎನ್ನುವಂತಹ ವಾತಾವರಣ ನಗರದಲ್ಲಿ ನಿರ್ಮಾಣವಾಗಿದ್ದು, ಬಹುತೇಕರು ಮಾಸ್ಕ್ ಮೊರೆ ಹೋಗಿದ್ದಾರೆ. ಇನ್ನು ಕೆಲವರು ಸುರಕ್ಷತೆ ದೃಷ್ಟಿಯಿಂದ ಕೈಗವಸು ಮತ್ತು ಬಟ್ಟೆಗಳನ್ನೇ ಮಾಸ್ಕ್ ರೀತಿ ಮುಖಕ್ಕೆ ಮುಚ್ಚಿಕೊಂಡು ರಕ್ಷಣೆ ಪಡೆದುಕೊಳ್ಳುತ್ತಿರುವ ದೃಶ್ಯಗಳು ನಗರದಲ್ಲಿ ಕಾಣಸಿಗುತ್ತಿತ್ತು.

ಕೋರ್ಟ್‌ ಕಲಾಪ: ಇಂದು ನಿರ್ಧಾರ: “ಕೊರೊನಾ ವೈರಸ್‌’ ಭೀತಿ ಹಿನ್ನೆಲೆಯಲ್ಲಿ ಕೋರ್ಟ್‌ ಕಲಾಪಗಳನ್ನು ನಡೆಸಬೇಕೋ- ಬೇಡವೋ ಎಂಬ ಬಗ್ಗೆ ಭಾನುವಾರ ನಡೆಯುಲಿರುವ ಹಿರಿಯ ನ್ಯಾಯಮೂರ್ತಿಗಳ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಈ ಕುರಿತು ಬೆಂಗಳೂರು ವಕೀಲ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್‌ ಅವರ ಮನವಿಗೆ ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಕೋರ್ಟ್‌ ಕಲಾಪಗಳ ಬಗ್ಗೆ ಹಿರಿಯ ನ್ಯಾಯಮೂರ್ತಿಗಳ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಭರಸೆ ನೀಡಿದ್ದಾರೆ ಎನ್ನಲಾಗಿದೆ.

ವಸ್ತುಸ್ಥಿತಿಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ಮನವರಿಕೆ ಮಾಡಿಕೊಡ ಲಾಗಿದೆ.ಅವರೂ ಸಹ ಸರ್ಕಾರದಿಂದ ಸಲಹೆ ಕೇಳಿ ಪತ್ರ ಬರೆದಿದ್ದಾರೆ. ಎಲ್ಲಾ ಅಂಶಗಳನ್ನು ಪರಿಗಣಿಸಿ ಭಾನುವಾರ ಹಿರಿಯ ನ್ಯಾಯಮೂರ್ತಿಗಳ ಸಭೆ ಕರೆಯಲಾಗಿದ್ದು, ಅದರಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಎ.ಪಿ. ರಂಗನಾಥ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ನಾಟಕ ಪ್ರದರ್ಶನಕ್ಕೆ ತಡೆ: ನೆರವಿಗೆ ಮನವಿ
ಬೆಂಗಳೂರು: ಕೊರೊನಾ ವೈರಸ್‌ ತಡೆಯುವ ಉದ್ದೇಶದಿಂದ ಸರ್ಕಾರ ಒಂದುವಾರ ರಂಗಭೂಮಿ ಪ್ರದರ್ಶನಕ್ಕೂ ತಡೆ ನೀಡಿರುವ ಹಿನ್ನೆಲೆಯಲ್ಲಿ ರಂಗಭೂಮಿ ಪ್ರೇಕ್ಷಕರು ಸಹಕಾರ ನೀಡಬೇಕು ಎಂದು “ವಿಮೂವ್‌’ ರಂಗತಂಡದ ಸಂಸ್ಥಾಪಕ ಅಭಿಷೇಕ್‌ ಅಯ್ಯಂಗಾರ್‌ ಅವರು ಮನವಿ ಮಾಡಿದ್ದಾರೆ. ಈ ವಾರ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕ್‌ ಮಾಡಿರುವ ರಂಗಭೂಮಿ ಪ್ರೇಕ್ಷಕರು ಈ ಟಿಕೆಟ್‌ ದರವನ್ನು ಮರಳಿ ಕೇಳದೆ, ದೇಣಿಗೆ ರೂಪದಲ್ಲಿ ನೀಡುವ ಮೂಲಕ ಸಹಕಾರ ನೀಡಬೇಕು ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.

ಶೌಚಾಲಯಗಳಲ್ಲಿ ಸ್ವಚ್ಛತೆ ಮರಿಚೀಕೆ: ನಗರದ ಸಾರ್ವಜನಿಕ ಶೌಚಾಲಯಗಳು ಸೇರಿದಂತೆ, ಪೆಟ್ರೋಲ್‌ಬಂಕ್‌ ಹಾಗೂ ಜನ ಹೆಚ್ಚು ಸೇರುವ ಪ್ರದೇಶಗಳ ಶೌಚಾಲಯಗಳಲ್ಲಿ ಯಾವುದೇ ಬ್ರ್ಯಾಂಡ್‌ ಸಾಬೂನು ಅಥವಾ ದ್ರಾವಣವನ್ನು ಕಡ್ಡಾಯವಾಗಿ ಇಡಬೇಕು ಎಂದು ಬಿಬಿಎಂಪಿ ಆಯುಕ್ತರಾದ ಬಿ.ಎಚ್‌.ಅನಿಲ್‌ಕುಮಾರ್‌ ಆದೇಶ ಮಾಡಿದ್ದಾರೆ. ಆದರೆ, ನಗರದ ಬಹುತೇಕ ಶೌಚಾಲಯಗಳು ದುರ್ನಾತ ಬೀರುತ್ತಿದ್ದು, ಸಾಬೂನು, ಲಿಕ್ವಿಡ್‌ನ‌ಂತಹ ಯಾವುದೇ ಸ್ಯಾನಿಟೈಸರ್‌ ಕಾಣಿಸಲಿಲ್ಲ.

ಮದುವೆಗೆ ಬೆರಳೆಣಿಕೆ ಜನ: ನಗರದ ವೆಸ್ಟ್‌ ಆಫ್ ಕಾರ್ಡ್‌ ರಸ್ತೆಯಲ್ಲಿರುವ ಶುಭರಾಮ್‌ ಕಲ್ಯಾಣ ಮಂಟಪದಲ್ಲಿ ಶನಿವಾರ ಸತ್ಯನಾರಾಯಣ್‌ ಕುಟುಂಬದ ಮದುವೆ ಸಮಾರಂಭ ನಡೆಯಿತು. ಮದುವೆಗೆ ಅಂದಾಜು 500ರಿಂದ 600ಜನ ಬರಬಹುದು ಎಂಬ ನಿರೀಕ್ಷೆಯಲ್ಲಿ ವಧು-ವರನ ಕುಟುಂಬಸ್ಥರು ಊಟ, ತಿಂಡಿಯ ವ್ಯವಸ್ಥೆ ಮಾಡಿಕೊಂಡಿದ್ದರು. ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮದುವೆ ಕೇವಲ 70-80 ಮಂದಿ ಮಾತ್ರ ಆಗಮಿಸಿದರು.

ಇದಕ್ಕೆ ವಧು-ವರನ ಕುಟುಂಬಸ್ಥರು ಕಣ್ಣೀರು ಸುರಿಸಿದ ಘಟನೆಗೆ ಕಾರಣವಾಯಿತು. ಮದುವೆಗೆ 2018ರಲ್ಲಿ ಕಲ್ಯಾಣ ಮಂಟಪ ಬುಕ್‌ ಮಾಡಲಾಗಿತ್ತು. ಆದರೆ, ವರನ ತಂದೆ ಮೃತಪಟ್ಟಿದರಿಂದ ಮದುವೆ ಮುಂದೂಡಲಾಗಿತ್ತು. ಶನಿವಾರ ಮದುವೆಗೆ ನಿರ್ಧರಿಸಲಾಗಿತ್ತು. ಎರಡು ವರ್ಷದಿಂದ ಕಾದು ನಡೆಸಿದ ಮದುವೆಗೆ ಬೆರಳೆಣಿಕೆಯ ಮಂದಿ ಬಂದದಕ್ಕೆ ಮದುವೆಯ ಕಳೆಯೇ ಇಲ್ಲದಂತಾಗಿತ್ತು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.