ಟ್ರಾಫಿಕ್ ಗೂ ತಟ್ಟಿದ ಕೊರೊನಾ ಬಿಸಿ!


Team Udayavani, Mar 7, 2020, 10:36 AM IST

ಟ್ರಾಫಿಕ್ ಗೂ ತಟ್ಟಿದ ಕೊರೊನಾ ಬಿಸಿ!

ಬೆಂಗಳೂರು: ಚೀನಾದ ಕೊರೊನಾ ವೈರಸ್‌ಗೂ ಬೆಂಗಳೂರಿನ ಟ್ರಾಫಿಕ್ ಗೂ ಸಂಬಂಧ ಇದೆಯಾ? ಅಲ್ಲಿಯ ವೈರಸ್‌ಗಳು ಇಲ್ಲಿನ ಸಂಚಾರ ದಟ್ಟಣೆಯನ್ನೂನಿಯಂತ್ರಿಸುತ್ತಿವೆಯಾ? ಎತ್ತಣ ಮಾಮರ ಎತ್ತಣ ಕೋಗಿಲೆ ಎಂದು ನೀವು ಕೇಳಬಹುದು. ಆದರೆ, ಸಾರಿಗೆ ಸಂಸ್ಥೆಗಳು ನೀಡುವ ಅಂಕಿ-ಅಂಶಗಳು ಇವೆರಡರ ನಡುವೆ ನಿಕಟ ಸಂಬಂಧ ಇದೆ ಎನ್ನುತ್ತಿವೆ!

ಹೌದು, ಕೊರೊನಾ ವೈರಸ್‌ ಪರಿಣಾಮ ಸಮೂಹ ಸಾರಿಗೆಗಳು ಪ್ರಯಾಣಿಕರ ಕೊರತೆ ಎದುರಿಸುತ್ತಿವೆ. ಮೂರ್‍ನಾಲ್ಕು ದಿನಗಳಿಂದ ಸಾರಿಗೆ ಸಂಸ್ಥೆಗಳ ಆದಾಯದಲ್ಲಿ ಖೋತಾ ಆಗಿದೆ. ಆ್ಯಪ್‌ ಆಧಾರಿತ ಟ್ಯಾಕ್ಸಿಗಳಿಗೆ ಅದರಲ್ಲೂ ವಿಶೇಷವಾಗಿ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಗ್ರಾಹಕರು ಬರುತ್ತಿಲ್ಲ. ಇನ್ನು ಕೆಲವು ರಸ್ತೆಗಳಲ್ಲಿ ಚಿತ್ರಣ ತದ್ವಿರುದ್ಧವಾಗಿದ್ದು, ಖಾಸಗಿ ವಾಹನಗಳ ದಟ್ಟಣೆ ದಿಢೀರ್‌ ಹೆಚ್ಚಳವಾಗಿದೆ. ಅಂದರೆ ಒಟ್ಟಾರೆ ನಗರದ ಎಂದಿನ ಸಂಚಾರ ವ್ಯವಸ್ಥೆಯನ್ನು ಈ ವೈರಸ್‌ ತಕ್ಕಮಟ್ಟಿಗೆ ಏರುಪೇರು ಮಾಡಿವೆ.

ಬೆಂಗಳೂರು ಮೂಲಕವೇ ಹೈದರಾಬಾದ್‌ಗೆ ಈ ಕೊರೊನಾ ವೈರಸ್‌ ಹಾದುಹೋಗಿರುವುದು ದೃಢಪಟ್ಟ ನಂತರದಿಂದ ಈ ಬದಲಾವಣೆ ಕಂಡುಬಂದಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವೋಲ್ವೊ ಬಸ್‌ಗಳಲ್ಲಿ ಮೂರ್‍ನಾಲ್ಕು ದಿನಗಳಿಂದ ನಿತ್ಯ ಶೇ.10ರಿಂದ 15ರಷ್ಟು ಆದಾಯದಲ್ಲಿ ಕುಸಿತ ಕಂಡಿದೆ. ಅದರಲ್ಲೂ ವಿಶೇಷವಾಗಿ ವಿಮಾನ ನಿಲ್ದಾಣ ಮತ್ತು ಐಟಿ-ಬಿಟಿ ಕಂಪನಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಈ ಪರಿಣಾಮ ಕಾಣಬಹುದು ಎಂದು ಸಂಚಾರ ವಿಭಾಗದ ವಿವಿಧ ಘಟಕಗಳ ವ್ಯವಸ್ಥಾಪಕರು ತಿಳಿಸುತ್ತಾರೆ.

ಸಮೂಹ ಸಾರಿಗೆಗಳಲ್ಲಿ ಈ ಕೊರೊನಾ ವೈರಸ್‌ ಸೋಂಕಿತರು ಸಂಚರಿಸಿದ್ದರೆ, ಅವರಿಂದ ಉಳಿದವರಿಗೂ ಹಬ್ಬುವ ಸಾಧ್ಯತೆ ಇದೆ ಎಂಬ ಭೀತಿಯಿಂದ ಪ್ರಯಾಣಿಕರು ಸಾಧ್ಯವಾದಷ್ಟು ಸಮೂಹ ಸಾರಿಗೆಯಿಂದ ವಿಮುಖವಾಗುತ್ತಿದ್ದಾರೆ. ಇದರಲ್ಲಿ ಕೆಲವರು ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದರೆ, ಇನ್ನು ಹಲವರು “ರಿಸ್ಕ್ ಯಾಕೆ ಅಂತ ಸ್ವಂತ ವಾಹನಗಳೊಂದಿಗೆ ರಸ್ತೆಗಿಳಿಯುತ್ತಿದ್ದಾರೆ. ಇದರಿಂದ ಕೆಲವೆಡೆ ಸಂಚಾರದಟ್ಟಣೆಯೂ ಆಗುತ್ತಿದೆ. ಇದೆಲ್ಲದರ ಪರಿಣಾಮ ಬಿಎಂಟಿಸಿಯ ಆರು ವೋಲ್ವೊ ಡಿಪೋಗಳಲ್ಲಿ ನಿತ್ಯ ತಲಾ 50 ಸಾವಿರದಿಂದ ಒಂದು ಲಕ್ಷ ರೂ.ವರೆಗೆ ಆದಾಯ ಇಳಿಕೆ ಆಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಉದಾಹರಣೆಗೆ ಎಚ್‌ಎಸ್‌ಆರ್‌ ಲೇಔಟ್‌ನಿಂದ ಪ್ರತಿದಿನ 145 ಶೆಡ್ಯುಲ್‌ಗ‌ಳಿಂದ 155 ಟ್ರಿಪ್‌ಗ್ಳು ಕಾರ್ಯಾಚರಣೆ ಮಾಡುತ್ತವೆ. ಇದರಿಂದ 19-20 ಲಕ್ಷ ರೂ. ಆದಾಯ ಬರುತ್ತಿತ್ತು. ಈಗ 18 ಲಕ್ಷ ರೂ.ಗೆ ಕುಸಿದಿದೆ. ಈ ಡಿಪೋದಿಂದ ಬನಶಂಕರಿ-ಐಟಿಪಿಎಲ್‌, ಮೆಜೆಸ್ಟಿಕ್‌-ಕಾಡುಗೋಡಿ, ಹೆಬ್ಟಾಳ, ಎಚ್‌ಎಸ್‌ಆರ್‌ ಲೇಔಟ್‌, ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್‌ ಸಿಟಿ ಮತ್ತಿತರ ಕಡೆ ಕಾರ್ಯಾಚರಣೆ ಆಗುತ್ತದೆ. ಅದೇ ರೀತಿ, ಹೆಬ್ಟಾಳ ಡಿಪೋದಲ್ಲೂ 144 ಶೆಡ್ಯುಲ್‌ಗ‌ಳಿದ್ದು, 1,100 ಟ್ರಿಪ್‌ಗ್ಳು ಕಾರ್ಯಾಚರಣೆ ಮಾಡುತ್ತವೆ. ಇದರಿಂದ 15 ಲಕ್ಷ ಆದಾಯ ಬರುತ್ತಿತ್ತು. ಮೂರ್‍ನಾಲ್ಕು ದಿನಗಳಿಂದ ನಿತ್ಯ 14 ಲಕ್ಷ ಬರುತ್ತಿದೆ. ಐಟಿಪಿಎಲ್‌ ಘಟಕ ಕೂಡ ಇದಕ್ಕಿಂತ ಭಿನ್ನವಾಗಿಲ್ಲ ಎಂದು ಅಧಿಕಾರಿಗಳು ವಿವರಿಸುತ್ತಾರೆ.

ಫ್ಲೈಬಸ್‌ ನಿತ್ಯ ಒಂದೂವರೆ ಲಕ್ಷ ಕುಸಿತ: ನಗರದ ದಟ್ಟಣೆ ಹಿನ್ನೆಲೆಯಲ್ಲಿ ನೇರವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೇ ವಿವಿಧ ಊರುಗಳಿಗೆ ಸಂಪರ್ಕ ಕಲ್ಪಿಸುವ ಫ್ಲೈಬಸ್‌ ಪರಿಚಯಿಸಲಾಗಿದ್ದು, ಅಲ್ಲಿಯೂ ಪ್ರಯಾಣಿಕರ ಕೊರತೆ ಕಾಡುತ್ತಿದೆ. ನಿತ್ಯ ವಿಮಾನ ನಿಲ್ದಾಣದಿಂದ ಮೈಸೂರು, ಮಡಿಕೇರಿ, ಕುಂದಾಪುರಕ್ಕೆ 15 ಶೆಡ್ನೂಲ್‌ ಗಳಿಂದ ಸುಮಾರು 25 ಸುತ್ತುವಳಿಗಳ ವ್ಯವಸ್ಥೆ ಇದೆ. ಇಲ್ಲಿ ನಿತ್ಯ 8-8.50 ಲಕ್ಷ ರೂ. ಆದಾಯ ಬರುತ್ತಿತ್ತು. ಆದರೆ, ವಿಮಾನ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದರ ಪರಿಣಾಮ ಆದಾಯ 7 ಲಕ್ಷ ರೂ. ಗೆ ಇಳಿಕೆಯಾಗಿದೆ ಎಂದು ವಿಭಾಗೀಯ ಸಂಚಾರ ಅಧಿಕಾರಿಗಳು ಮಾಹಿತಿ ನೀಡಿದರು.

ಟ್ಯಾಕ್ಸಿ ಬುಕಿಂಗ್‌ ಶೇ.50 ಕುಸಿತ: ಕೊರೊನಾ ವೈರಸ್‌ ಸೋಂಕಿತ ವ್ಯಕ್ತಿಯೊಬ್ಬ ವಿಮಾನ ನಿಲ್ದಾಣದಲ್ಲಿ ಇಳಿದು, ನಗರದಲ್ಲಿ ವಾಸ್ತವ್ಯ ಹೂಡಿ ಹೈದರಾಬಾದ್‌ಗೆ ತೆರಳಿದ್ದಾರೆ ಎಂಬುದು ಖಾತ್ರಿಯಾದ ದಿನದಿಂದ ವಿಮಾನ ನಿಲ್ದಾಣ ಮಾರ್ಗಗಳಿಗೆ ಆ್ಯಪ್‌ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಶೇ. 50ರಷ್ಟು ಕುಸಿದಿದೆ. ಇದರಲ್ಲಿ ಪ್ರಯಾಣಿಕರ ಕೊರತೆ ಮಾತ್ರವಲ್ಲ; ಕೆಲ ಚಾಲಕರು ಸ್ವಯಂಪ್ರೇರಿತವಾಗಿ ಆ ಮಾರ್ಗದಲ್ಲಿ ಬುಕಿಂಗ್‌ ತೆಗೆದುಕೊಳ್ಳುತ್ತಿಲ್ಲ ಎಂದು ಓಲಾ, ಟ್ಯಾಕ್ಸಿ ಫಾರ್‌ ಶ್ಯೂರ್‌ ಮತ್ತು ಉಬರ್‌ ಟ್ಯಾಕ್ಸಿ ಮಾಲಿಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಅಶೋಕ್‌ ಕುಮಾರ್‌ ಹೇಳಿದರು.

ನಗರದಿಂದ ವಿಮಾನ ನಿಲ್ದಾಣಕ್ಕೆ ಪ್ರತಿ ದಿನ ಕನಿಷ್ಠ ನಾಲ್ಕು ಟ್ರಿಪ್‌ಗ್ಳನ್ನು ಪೂರ್ಣಗೊಳಿಸುತ್ತಿದ್ದೆವು. ಒಂದು ಟ್ರಿಪ್‌ಗೆ ಕನಿಷ್ಠ 500 ರೂ. ಆದಾಯ ಬರುತ್ತಿತ್ತು. ಆದರೆ, ಮೂರ್‍ನಾಲ್ಕು ದಿನಗಳಿಂದ ಈ ಟ್ರಿಪ್‌ ಸಂಖ್ಯೆ ಎರಡಕ್ಕೆ ಇಳಿಕೆಯಾಗಿದೆ. ಅದೂ ಹೋಗಿ-ಬರುವ ಟ್ರಿಪ್‌ ಖಾತ್ರಿ ಮಾಡಿಕೊಂಡು ಕಾರ್ಯಾಚರಣೆ ಮಾಡಲಾಗುತ್ತಿದೆ. ಪರಿಚಿತ ಪ್ರಯಾಣಿಕರಿದ್ದರೆ ಅಂತಹವರಿಗೆ ಆದ್ಯತೆ ನೀಡಲಾಗುತ್ತಿದೆ. ಯಾಕೆಂದರೆ, ಯಾರು ಎಲ್ಲಿಂದ ಬಂದು ಟ್ಯಾಕ್ಸಿ ಏರುತ್ತಾರೆ ಎಂಬುದು ಯಾರಿಗೆ ಗೊತ್ತು. ಈ ಭೀತಿಯಿಂದ ಚಾಲಕರು ಬುಕಿಂಗ್‌ಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ತಿಳಿಸಿದರು.

ಮೆಟ್ರೋಗೂ ತಟ್ಟಿದ ಬಿಸಿ? :  ನಮ್ಮ ಮೆಟ್ರೋ‘ಗೂ ಪ್ರಯಾಣಿಕರ ಕೊರತೆ ಬಿಸಿ ತಟ್ಟಿದಂತೆ ಕಂಡುಬರುತ್ತಿದೆ. ಪೀಕ್‌ ಅವರ್‌ನಲ್ಲಿ ಮೂರ್‍ನಾಲ್ಕು ದಿನಗಳಿಂದ ಜನ ಸಂಚಾರ ತುಸು ಕಡಿಮೆ ಆಗಿದೆ ಎಂದು ಹೇಳ ಲಾಗುತ್ತಿದೆ. ಮೆಟ್ರೋ ಬಿಟ್ಟು, ತಾತ್ಕಾಲಿಕವಾಗಿ ಕೆಲ ಪ್ರಯಾಣಿಕರು ಸ್ವಂತ ವಾಹನಗಳಲ್ಲಿ ಕಚೇರಿಗಳು ಅಥವಾ ಕಂಪೆನಿಗಳಿಗೆ ತೆರಳುತ್ತಿದ್ದಾರೆ. ಹಾಗಾಗಿ, ಕೆಲವೆಡೆ ವಾಹನ ದಟ್ಟಣೆ ಕಂಡುಬರುತ್ತಿದೆ. ಸಾಮಾನ್ಯವಾಗಿ ದಿನಕ್ಕೆ “ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಕರ ಸಂಖ್ಯೆ 4.20ರಿಂದ 4.30 ಲಕ್ಷ ಇರುತ್ತಿತ್ತು. ಆದರೆ, ಕಳೆದೆರಡು ದಿನಗಳು ಕ್ರಮವಾಗಿ 4.18 ಮತ್ತು 4.10 ಲಕ್ಷ ದಾಖಲಾಗಿದೆ. ಶೇ. 2-3ರಷ್ಟು ಇಳಿಕೆಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಆದರೆ, ಇದನ್ನು ಮೆಟ್ರೋ ಅಧಿಕಾರಿಗಳು ತಳ್ಳಿಹಾಕಿದ್ದಾರೆ. ಬೋಗಿಗಳ ಸಂಖ್ಯೆ 3ರಿಂದ 6ಕ್ಕೆ ಏರಿಕೆಯಾಗಿದೆ. ಪೀಕ್‌ ಅವರ್‌ನಲ್ಲಿ ಫ್ರಿ ಕ್ವೆನ್ಸಿ 4.5 ನಿಮಿಷ ಇದ್ದದ್ದು, 3 ನಿಮಿಷಕ್ಕೆ ಏರಿಕೆಯಾಗಿದೆ. ಅದರ ಪರಿಣಾಮ ಅಷ್ಟಾಗಿ ನೂಕುನುಗ್ಗಲು ಕಾಣುತ್ತಿಲ್ಲ ಅಷ್ಟೇ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದರು.

ವೋಲ್ವೊ ಬಸ್‌ಗಳ ಆದಾಯದಲ್ಲಿ ಕಳೆದೆರಡು ದಿನಗಳಿಂದ ನಿತ್ಯ ಒಂದೂವರೆಯಿಂದ ಎರಡು ಲಕ್ಷ ರೂ. ಖೋತಾ ಆಗುತ್ತಿದೆ. ವೋಲ್ವೊದಿಂದ ವಿಮುಖರಾದ ಜನ, ಮನೆಯಲ್ಲಿದ್ದು ಕೆಲಸ ಮಾಡುತ್ತಿರಬಹುದು ಅಥವಾ ಸ್ವಂತ ವಾಹನದಲ್ಲಿ ರಸ್ತೆಗಿಳಿಯುತ್ತಿರಬಹುದು. ಬಿ.ಎಸ್‌.ನಾಗರಾಜ ಮೂರ್ತಿ, ಬಿಎಂಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ (ವೋಲ್ವೊ )

 

-ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.