ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಛಾಯೆ


Team Udayavani, Mar 11, 2020, 3:10 AM IST

sarvajanika

ಬೆಂಗಳೂರು: ಜಗತ್ತನ್ನೇ ಆತಂಕಕ್ಕೀಡು ಮಾಡಿರುವ ಮಹಾಮಾರಿ ಕೊರೊನಾ ಬೆಂಗಳೂರಿನ ಜನರಲ್ಲೂ ಭೀತಿ ಹುಟ್ಟಿಸಿದ್ದು, ಬಹುತೇಕ ಎಲ್ಲಾ ವ್ಯಾಪಾರ ವಾಣಿಜ್ಯೋದ್ಯಮ, ಬಸ್‌, ಮಾಲ್‌ಗ‌ಳ ಮೇಲೂ ಕೊರೊನಾ ಕರಿಛಾಯೆ ಆವರಿಸಿದೆ. ಬೆಂಗಳೂರಿನ ನಾಲ್ವರಲ್ಲಿ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆ ಜನರು ರಸ್ತೆಗಿಳಿಯುವುದಕ್ಕೆ ಯೋಚಿಸುತ್ತಿದ್ದು, ಇದರ ನೇರ ಪರಿಣಾಮ ವ್ಯಾಪಾರಸ್ಥರು, ಆಟೋ ಚಾಲಕರು, ವಾಣಿಜ್ಯೋದ್ಯಮಿಗಳ ಮೇಲೆ ಬಿದ್ದಿದೆ.

ಮಾಲ್‌ಗ‌ಳಿಗೆ ಜನ ಬರಲು ಹಿಂದೇಟು ಹಾಕುತ್ತಿದ್ದು, ಮಂಗಳವಾರ ಮಾಲ್‌ಗ‌ಳು, ಚಲನಚಿತ್ರ ಮಂದಿರಗಳಲ್ಲಿ ಜನಸಂಖ್ಯೆ ಇಳಿಮುಖವಾಗಿರುವುದು ಕಂಡು ಬಂತು. ಯಶವಂತಪುರದಲ್ಲಿರುವ ಗೋವರ್ಧನ, ಮೆಜೆಸ್ಟಿಕ್‌ನಲ್ಲಿರುವ ಚಲನಚಿತ್ರ ಮಂದಿರಗಳಲ್ಲಿ ಡಾ.ಶಿವರಾಜ್‌ ಕುಮಾರ್‌ ಅಭಿನಯದ ದ್ರೋಣ ಚಿತ್ರ ಪ್ರದರ್ಶನವಾಗುತ್ತಿದ್ದು, ಚಲನಚಿತ್ರ ವೀಕ್ಷಿಸಲು ಕಡಿಮೆ ಜನರು ಬರುತ್ತಿದ್ದಾರೆ,

ಈ ಬಗ್ಗೆ ಸಿಬ್ಬಂದಿಗಳನ್ನು ಕೇಳಿದಾಗ “ಚಲನಚಿತ್ರ ಮಂದಿರದಲ್ಲಿ ನೆಗಡಿ, ಕೆಮ್ಮು, ಶೀತ ಇರುವ ಜನ ಬರುವುದರಿಂದ ಸೊಂಕು ಹರಡುವ ಅವಕಾಶಗಳು ಹೆಚ್ಚಿದೆ. ಹಾಗಾಗಿ ಜನರು ಗಣನೀಯವಾಗಿ ಕಡಿಮೆ ಇದ್ದಾರೆ’ ಎಂದು ತಿಳಿಸಿದರು. ಜಗತ್ತಿನಲ್ಲಿಯೇ ವಾಹನ ದಟ್ಟಣೆಯಲ್ಲಿ ಮೊದಲ ಸ್ಥಾನ ಪಡೆದಿರುವ ರಾಜಧಾನಿಯ ರೋಡ್‌ಗಳಲ್ಲಿ ಮಂಗಳವಾರ ವಾಹನ ಸಂಚಾರ ವಿರಳವಾಗಿತ್ತು. ಮೈಸೂರು ರಸ್ತೆ, ವಿಜಯನಗರ, ಜಯನಗರ, ಕೆ.ಆರ್‌. ರಸ್ತೆ ಸೇರಿದಂತೆ ಹಲವು ರಸ್ತೆಗಳು ಖಾಲಿ ಹೊಡೆಯುತ್ತಿದ್ದವು.

ಹೋಳಿ ಹಬ್ಬಕ್ಕೆ ಬ್ರೇಕ್‌: ರಾಜ್ಯಾದ್ಯಂತ ಹೋಳಿ ಹಬ್ಬ ಆಚರಿಸುತ್ತಿದ್ದರೆ, ಬೆಂಗಳೂರಿನಲ್ಲಿ ಈ ಸಂಭ್ರಮಕ್ಕೂ ಕೊರೊನಾ ಬ್ರೇಕ್‌ ಹಾಕಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಬೇಡಿ, ಜನರ ಗುಂಪಿನಲ್ಲಿ ಯಾರಿಗಾದರೂ ಈ ವೈರಸ್‌ ಇದ್ದರೆ ಅದು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ಕೊಟ್ಟಿದ್ದರಿಂದ ವೈರಸ್‌ ಭೀತಿ ಹೋಳಿ ಹಬ್ಬಕ್ಕೂ ತಟ್ಟಿತು. ಪ್ರತಿವರ್ಷವೂ ಸ್ಟಾರ್‌ ಹೋಟೆಲ್‌ಗ‌ಳು ಹೋಳಿ ಹಬ್ಬವನ್ನು ಆಯೋಜನೆ ಮಾಡುತ್ತಿದ್ದವು.

ಆದರೆ, ಈ ಬಾರಿ ಕೆಲವೇ ಹೋಟೆಲ್‌ಗ‌ಳಲ್ಲಿ ಆಚರಣೆ ಮಾಡಲಾಗಿದೆ. ಬಣ್ಣದ ವ್ಯಾಪಾರಿಗಳು ಮಾತ್ರ ಹಾಕಿದ ಬಂಡವಾಳವೇ ಸಿಗುತ್ತಿಲ್ಲ. ಈ ಬಾರಿ ತಂದಿದ್ದ ಬಣ್ಣಗಳು ಮಾರಾಟವಾಗುತ್ತಿಲ್ಲ ಎಂದು ಅಲವತ್ತುಕೊಂಡರು. ಕೊರೊನಾ ಭೀತಿಯಿಂದ ಜನರು ಬೀದಿಗಿಳಿಯಲು ಹಿಂಜರಿಯುತ್ತಿ ದ್ದಾರೆ. ಸರ್ಕಾರ ಸೂಚಿಸಿದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡರೆ ಯಾವುದೇ ತೊಂದರೆಯಾಗುವುದಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿ ಮನೋಜ್‌ ತಿಳಿಸಿದ್ದಾರೆ.

ಬಸ್‌ ಪ್ರಯಾಣಿಕರ ಸಂಖ್ಯೆ ಶೇ.20 ಕುಸಿತ: ಕೊರೊನಾ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಐಷಾರಾಮಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.20ರಷ್ಟು ಕಡಿಮೆ ಆಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಐರಾವತ, ಫ್ಲೈಬಸ್‌ ಮುಂತಾದ ಐಷಾರಾಮಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ ಕಂಡಿದೆ. ಅಲ್ಲದೆ, ವಿದೇಶಿಯರು ಒಳಗೊಡಂತೆ ಭಾರತದ ವಿವಿಧ ರಾಜ್ಯಗಳಿಂದ ಮತ್ತು ರಾಜ್ಯದ ವಿವಿಧ ಸ್ಥಳಗಳಿಂದ ಪ್ರಯಾಣಿಕರು ಸಂಚರಿಸುತ್ತಿದ್ದು, ಪ್ರಯಾಣಿಕರು ಮತ್ತು ನಿಗಮದ ಸಿಬ್ಬಂದಿಯ ಆರೋಗ್ಯದ ದೃಷ್ಟಿಯಿಂದ ಸೋಂಕು ಹರಡದಂತೆ ಕೆಲವೊಂದು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಬಸ್‌ನ ಒಳ ಮತ್ತು ಹೊರ ಭಾಗವನ್ನು ಸ್ವಚ್ಛವಾಗಿಡುವುದರ ಜತೆಗೆ ಬಸ್‌ಗಳ ಒಳಗೆ ಪ್ರಯಾಣಿಕರು ಬಳಸುವ ವಸ್ತುಗಳನ್ನು ಸೋಂಕು ನಿವಾರಣಾ ದ್ರಾವಣಗಳಿಂದ ಶುಚಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಐರಾವತ, ಫ್ಲೈಬಸ್‌ ಮುಂತಾದ ಪ್ರತಿಷ್ಠಿತ ಸಾರಿಗೆಗಳಲ್ಲಿ “ಆಂಟಿ ಬ್ಯಾಕ್ಟಿರಿಯಲ್‌ ಸಲ್ಯೂಷನ್‌’ ಗಳನ್ನು ಬಳಸಿ ಸಿಂಪರಣೆ (ಪ್ಯೂಮಿಗೇಷನ್‌) ಮಾಡಲಾಗುತ್ತಿದೆ. ದೂರ ಮಾರ್ಗದ ಐರಾವತ ಸಾರಿಗೆಗಳಲ್ಲಿ ಚಾಲನಾ ಸಿಬ್ಬಂದಿಗೆ ಮಾಸ್ಕ್ಗಳನ್ನು ವಿತರಿಸಲಾಗಿದೆ. ಬಸ್‌ ನಿಲ್ದಾಣಗಳನ್ನು ಆಗಿಂದಾಗ್ಗೆ ಶುಚಿಗೊಳಿಸಲಾಗುತ್ತಿದೆ. ನಿಗಮದ ಬಸ್‌ ನಿಲ್ದಾಣಗಳಲ್ಲಿ ಜಿಂಗಲ್ಸ್‌ಗಳ ಮೂಲಕ ಕೊರೊನಾ ವೈರಸ್‌ ಸೋಂಕಿನ ಕುರಿತು ಪ್ರಯಾಣಿಕರ ಮಾಹಿತಿಗೆ ಪ್ರಚಾರ ನೀಡಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಡ್ರಂಕ್‌ ಆ್ಯಂಡ್‌ ಡ್ರೈವ್‌ ಕೊರೊನಾಗಿಂತ ಅಪಾಯಕಾರಿ
ಬೆಂಗಳೂರು: ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಕೆಲವರು ಡ್ರಂಕ್‌ ಆ್ಯಂಡ್‌ ಡ್ರೈವ್‌ ತಪಾಸಣೆ ಮುಂದೂಡುವಂತೆ ಮನವಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅದು ಸಾಧ್ಯವಿಲ್ಲ. ಕೊರೊನಾಗಿಂತ ಕುಡಿದು ವಾಹನ ಚಾಲನೆ ಮಾಡುವುದು ಅಪಾಯಕಾರಿ ಎಂದು ನಗರ ಪೊಲೀಸ್‌ ಆಯುಕ್ತ ಹೇಳಿದರು.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಡ್ರಂಕ್‌ ಆ್ಯಂಡ್‌ ಡ್ರೈವ್‌ ತಪಾಸಣೆ ಕಾರ್ಯ ಮೊದಲಿಗಿಂತಲೂ ಹೆಚ್ಚು ಪರಿಣಾಮಕಾರಿಯಾಗಿ ನಡೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪೊಲೀಸ್‌ ಸಿಬ್ಬಂದಿಗೆ ಎಚ್ಚರಿಕೆ: ಕೊರೊನಾ ವೈರಸ್‌ ಕುರಿತು ಪೊಲೀಸ್‌ ಸಿಬ್ಬಂದಿ ಎಚ್ಚರಿಕೆ ವಹಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸಭೆ ನಡೆಸಿದ್ದಾರೆ. ಹೀಗಾಗಿ ವಿಭಾಗದ ಆತಂರಿಕಾ ಸಭೆ ನಡೆಸಿ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಸೂಚಿಸಲಾಗಿದೆ. ಪೊಲೀಸರು ಜನರೊಂದಿಗೆ ಸದಾ ಬೆರೆಯುತ್ತಿರುತ್ತಾರೆ. ಹೀಗಾಗಿ ಪೊಲೀಸರು ಜನರೊಂದಿಗೆ ಮಾತನಾಡುವಾಗ ಮಾಸ್ಕ್ ಧರಿಸುವುದರ ಜತೆಗೆ ಅಂತರ ಕಾಯ್ದುಕೊಳ್ಳಬೇಕು. ಠಾಣೆಯಲ್ಲಿ ಶುಚಿತ್ವ ಕಾಪಾಡಲು ಪೊಲೀಸರಿಗೆ ಅಗತ್ಯ ವಸ್ತುಗಳನ್ನು ಠಾಣಾ ವೆಚ್ಚದಲ್ಲಿಯೇ ಒದಗಿಸಲಾಗುತ್ತದೆ. ಪೊಲೀಸರು ಕೊರೋನಾ ಪತ್ತೆ ಅಥವಾ ಅನಾರೋಗ್ಯ ಕ್ಕೊಳಗಾದರೆ ಅಂತಹವರಿಗೆ ರಜೆ ಕೊಡಲಾಗುತ್ತದೆ. ಅಲ್ಲದೆ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೈತೊಳೆಯುವ ದ್ರಾವಣ ಬಳಸಬೇಕು ಎಂದು ಹೇಳಿದರು.

ಪ್ರತಿಭಟನೆ ಮುಂದೂಡಿಕೆ: ಕೊರೊನಾ ಹರಡುತ್ತಿರುವುದರಿಂದ ಪ್ರತಿಭಟನೆ ನಡೆಸುವ ಸಂಘಟನೆ ಗಳು ಕೆಲ ದಿನಗಳ ಮಟ್ಟಿಗೆ ತಮ್ಮ ಹೋರಾಟವನ್ನು ಮುಂದೂಡುವಂತೆ ನಗರ ಪೊಲೀಸ್‌ ಆಯುಕ್ತರು ಮನವಿ ಮಾಡಿದ್ದಾರೆ. ಈ ಮೂಲಕ ಪ್ರತಿಭಟನೆ ಹತ್ತಿಕ್ಕುತ್ತಿಲ್ಲ ಅಥವಾ ಕಡೆಗಣಿಸುತ್ತಿಲ್ಲ. ಪ್ರತಿಭಟನೆ ಸಂದರ್ಭದಲ್ಲಿ ನೂರಾರು ಮಂದಿ ಸೇರುವುದರಿಂದ ಕೊರೋನಾ ಹರಡುವ ಸಾಧ್ಯತೆ ಇದೆ. ಹೀಗಾಗಿ ಪ್ರತಿಭಟನಾಕಾರರು ಸದ್ಯಕ್ಕೆ ಪ್ರತಿಭಟನೆಗಳನ್ನು ಮಾಡಬಾರದು ಎಂದು ಮನವಿ ಮಾಡಿದರು. ಹಾಗೆಯೇ ಕೊರೊನಾ ವೈರಸ್‌ ಬಗ್ಗೆ ನಕಲಿ ಸಂದೇಶಗಳನ್ನು ಹರುಡುವ ವ್ಯಕ್ಕಿಗಳ ಮೇಲೆ ನಿಗಾವಹಿಸುವಂತೆ ಸಾಮಾಜಿಕ ಜಾಲತಾಣ ನಿರ್ವಾಹಣಾ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.

2,666 ಮಂದಿ ಶಂಕಿತರ ಗುರುತು: ಸೋಂಕು ದೃಢಪಟ್ಟ ಟೆಕ್ಕಿ ಕುಟುಂಬದೊಂದಿಗೆ ನೇರ ಸಂಪರ್ಕ ಹೊಂದಿದ್ದ 2,666 ಮಂದಿಯನ್ನು ಶಂಕಿತರು ಎಂದು ಆರೋಗ್ಯ ಇಲಾಖೆ ಗುರುತಿಸಿದೆ. ಇದರಲ್ಲಿ ಶಾಲಾ ಮಕ್ಕಳು, ಶಿಕ್ಷಕರು, ಟೆಕ್ಕಿ ಆಫೀಸ್‌ ಸಿಬ್ಬಂದಿ, ನೆರೆಹೊರೆ ಸೇರಿದಂತೆ ಎಲ್ಲರನ್ನು ಇದ್ದು, ಮನೆಯಲ್ಲಿಯೇ ಪ್ರತ್ಯೇಕ ನಿಗಾವಹಿಸಿ ತಪಾಸಣೆ ಮಾಡಲಾಗುತ್ತಿದೆ. ಈ ಪೈಕಿ ನೂರಕ್ಕೂ ಹೆಚ್ಚು ಮಂದಿ ಪ್ರಾಥಮಿಕ ಪರೀಕ್ಷೆ ಮಂಗಳವಾರ ಮಾಡಲಾಗಿದೆ. ಟೆಕ್ಕಿ ಕುಟುಂಬ ವಾಸವಾಗಿದ್ದು, ಮನೆ, ಆಫೀಸ್‌ ಸ್ವಚ್ಛತೆ ಮಾಡಲಾಗಿದೆ. ಬಾಕಿ ಉಳಿದ ಶಂಕಿತರ ತಪಾಸಣೆ ಬುಧವಾರ ಮುಂದುವರಿಯಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಟೋ ಚಾಲಕರ ಅತಂತ್ರ ಸ್ಥಿತಿ: ಕೊರೊನಾ ವೈಸರ್‌ ಭೀತಿಯಿಂದ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಈ ಮೊದಲು ಪ್ರತಿದಿನ 1500 ರೂ. ಗೂ ಅಧಿಕ ಹಣ ಸಂಪಾದಿಸುತ್ತಿದ್ದೆ. ಆದರೀಗ ಕೇವಲ 300 ರೂ. ಮಾತ್ರ ಸಂಪಾದನೆಯಾಗುತ್ತಿದೆ. ಪ್ರಯಾಣಿಕರ ಸಂಖ್ಯೆ ತೀವ್ರಗತಿಯಲ್ಲಿ ಕಡಿಮೆಯಾಗಿದೆ. ಇದೇ ರೀತಿ ಮುಂದುವರಿದರೆ ಬಹಳಷ್ಟು ತೊಂದರೆಯಾಗಲಿದೆ. ಈ ಬಗ್ಗೆ ಸರ್ಕಾರ ಜಾಗೃತಿ ಮೂಡಿಸಬೇಕು. ಕೊರೊನಾ ವೈರಸ್‌ಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದರೆ ನಮ್ಮ ಜೀವನ ಅತಂತ್ರವಾಗಲಿದೆ ಎಂದು ಆಟೋ ಚಾಲಿಕ ಎಂ.ರಾಜು ತಿಳಿಸಿದರು.

ಗಂಟೆಗೊಮ್ಮೆ ಮೆಟ್ರೋ ಸ್ವಚ್ಛ!: ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಗಂಟೆಗೊಮ್ಮೆ ಮೆಟ್ರೋ ನಿಲ್ದಾಣ ಹಾಗೂ ರೈಲು ಬೋಗಿಗಳನ್ನು ಸ್ವಚ್ಛ ಮಾಡಲಾಗುತ್ತಿದೆ. ಎಸ್ಕಲೇಟರ್‌ ಬದಿಯ ಹ್ಯಾಂಡಲ್‌, ಲಿಫ್ಟ್ಗಳ ಬಟನ್‌, ಗ್ರಿಲ್‌, ಎಎಫ್ಸಿ ಗೇಟ್‌, ಟಿಕೆಟ್‌ ಕೌಂಟರ್‌ಗಳನ್ನು ಶುದ್ಧಗೊಳಿಸುವ ಕಾರ್ಯ ನಡೆಯುತ್ತಿದೆ. ಈ ಕೆಲಸಗಳಿಗಾಗಿ ಪ್ರತ್ಯೇಕ ಸ್ವಚ್ಛತಾ ಸಿಬ್ಬಂದಿಗಳನ್ನು ನಮ್ಮ ಮೆಟ್ರೋ ನಿಗಮ ಆಯೋಜಿಸಿದ್ದು, ಪ್ರಯಾಣಿಕರನ್ನು ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಸೋಂಕು ಮುಕ್ತ ಕಾರ್ಯ ಸಮರ್ಪಕವಾಗಿ ನಡೆಯು ತ್ತದೆಯೋ ಇಲ್ಲವೇ ಎಂಬುದನ್ನು ಪರಿಶೀಲಿಸಲು ಪ್ರತಿ ವಿಭಾಗಕ್ಕೆ ಒಬ್ಬ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಂಟಿಸಿ ಬಸ್‌ಗಳಲ್ಲೂ ಪ್ರಯಾಣಿಕರ ಕೊರತೆ: ಬಿಎಂಟಿಸಿ ಬಸ್‌ಗಳಲ್ಲಿ ಪ್ರತಿದಿನ 35 ಲಕ್ಷಕ್ಕೂ ಅಧಿಕ ಜನರು ಪ್ರಯಾಣ ನಡೆಸುತ್ತಿದ್ದು, ಕೊರೊನಾ ವೈರಸ್‌ ಸೋಂಕಿನ ಭಯದ ಹಿನ್ನೆಲೆ ಅಲ್ಪ ಪ್ರಮಾಣದಲ್ಲಿ ಇಳಿಮುಖ ಕಂಡಿದೆ. ಈಗಾಗಲೇ ಬಿಎಂಟಿಸಿ ಜಾಗೃತಿ ಫ‌ಲಕಗಳು ಅಳವಡಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಆದರೂ, ಜನರಲ್ಲಿ ಆತಂಕ ಕಡಿಮೆಯಾದಂತಿಲ್ಲ. ಮಂಗಳವಾರ ಮೆಜಸ್ಟಿಕ್‌, ಶಾಂತಿನಗರ ಸೇರಿದಂತೆ ವಿವಿಧ ಬಸ್‌ ನಿಲ್ದಾಣಗಳಲ್ಲಿ ಜನರ ಓಡಾಟ ವಿರಳವಾಗಿತ್ತು. ಕೆಲ ಬಿಎಂಟಿಸಿ ಬಸ್‌ ಚಾಲಕರು ಮತ್ತು ನಿರ್ವಾಹಕರು ಮಾತ್ರ ಮಾಸ್ಕ್ ಧರಿಸುತ್ತಿರುವುದು ಕಂಡು ಬಂದಿತು.

* ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.