ಅಧಿಕಾರಿಗಳಿಂದ ಸರ್ಕಾರಕ್ಕೆ 500 ಕೋಟಿ ನಷ್ಟ


Team Udayavani, Mar 1, 2022, 12:30 PM IST

 ಅಧಿಕಾರಿಗಳಿಂದ ಸರ್ಕಾರಕ್ಕೆ 500 ಕೋಟಿ ನಷ್ಟ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಕಂದಾಯ ವಿಭಾಗದ ಅಧಿಕಾರಿಗಳು ಹಲವು ವರ್ಷಗಳಿಂದ ಬಹುರಾಷ್ಟ್ರೀಯ ಕಂಪನಿಗಳು, ಮಾಲ್‌ಗಳು, ಅಪಾರ್ಟ್‌ಮೆಂಟ್‌ ಗಳಿಂದ ತೆರಿಗೆ ಸಂಗ್ರಹಿಸದೆ, ಕಾಮಗಾರಿ ನಡೆಸದೆ ಬಿಲ್ಲುಗಳನ್ನು ಮಂಜೂರು ಸೇರಿ ಹಲವು ಮಾರ್ಗಗಳ ಮೂಲಕ ಸರ್ಕಾರಕ್ಕೆ ಬರೋಬರಿ 500 ಕೋಟಿ ರೂ.ನಷ್ಟ ಉಂಟು ಮಾಡಿರುವುದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಅಧಿಕಾರಿಗಳ ದಾಳಿಯಲ್ಲಿ ಬಯಲಾಗಿದೆ. ಅಲ್ಲದೆ, ನಕಲಿ ದಾಖಲೆಗಳ ಮೂಲಕ ಅಭಿವೃದ್ಧಿ ಹಕ್ಕು ಪ್ರಮಾಣ ಪತ್ರಗಳ(ಟಿಡಿಆರ್‌)ನ್ನು ವಿತರಣೆ ಮಾಡಿರುವುದು ಬೆಳಕಿಗೆ ಬಂದಿದೆ.

ಬಿಬಿಎಂಪಿಯ ಕಂದಾಯ ಕಚೇರಿಗಳು ಹಾಗೂಇತರೆ ಕಚೇರಿಗಳಲ್ಲಿ ಬೃಹತ್‌ ಭ್ರಷ್ಟಾಚಾರ ನಡೆಯುತ್ತಿರುವ ದೂರುಗಳ ಮೇರೆಗೆ ಎಸಿಬಿಯ 250 ಮಂದಿ ಅಧಿಕಾರಿಗಳ ತಂಡ ಬಿಬಿಎಂಪಿ ಕೇಂದ್ರ ಕಚೇರಿ ಸೇರಿ ನಗರದ ವಿವಿಧ ವಲಯ ಕಚೇರಿಗಳ 27 ಕಚೇರಿಗಳಿಗೆ ಸಂಬಂಧಿಸಿ 11 ಕಡೆಗಳಲ್ಲಿ 250ಕ್ಕೂ ಅಧಿಕ ಮಂದಿ ಅಧಿಕಾರಿಗಳ ತಂಡ ಶುಕ್ರವಾರದಿಂದ ಸೋಮವಾರದವರೆಗೆ ನಿರಂತರ ದಾಳಿ ನಡೆಸಿತ್ತು.

ಕಂದಾಯ ವಿಭಾಗ, ಎಂಜಿನಿಯರಿಂಗ್‌ ವಿಭಾಗ,ಟಿಡಿಆರ್‌ ವಿಭಾಗ ಸೇರಿ ಹಲವು ವಿಭಾಗಳಲ್ಲಿ ದಾಖಲೆಗಳ ಶೋಧ ನಡೆಸಲಾಗಿದ್ದು, ಈ ವೇಳೆ ಸಾಲು-ಸಾಲುಅಕ್ರಮಗಳು ನಡೆದಿರುವುದು ಪತ್ತೆಯಾಗಿದೆ. ಜತೆಗೆ ಹಲವಾರು ವರ್ಷಗಳಿಂದ ಬಿಬಿಎಂಪಿ ಅಧಿಕಾರಿಗಳುನಿರ್ದಿಷ್ಟ ಕಂಪನಿಗಳು, ಮಾಲ್‌ಗಳು, ಅಪಾರ್ಟ್‌ಮೆಂಟ್‌ಗಳಿಂದ ಕಂದಾಯ ಸಂಗ್ರಹಿಸದೆ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ.

ಕಂದಾಯ ವಿಭಾಗ: ನಗರದಲ್ಲಿರುವ ವಿವಿಧ ಕಂದಾಯ ವಿಭಾಗದ ಕಚೇರಿಗಳ ಮೇಲೆ ದಾಳಿ ನಡೆಸಿದಾಗಹಲವಾರು ವರ್ಷಗಳಿಂದ ಬಹು ರಾಷ್ಟ್ರೀಯ ಕಂಪನಿ ಗಳು, ಮಾಲ್‌ಗ‌ಳು, ಅಪಾರ್ಟ್‌ಮೆಂಟ್‌ಗಳಿಂದ ತೆರಿಗೆ ಸಂಹ್ರಹಿಸದೆ ಸರ್ಕಾರದ ಬೊಕ್ಕಸಕ್ಕೆ 500 ಕೋಟಿ ರೂ. ನಷ್ಟ ಉಂಟು ಮಾಡಿದ್ದಾರೆ. ಸರ್ಕಾರದ ಮಾನದಂಡಗಳನ್ನು ಪಾಲಿಸದೆ ಕಡಿಮೆ ತೆರಿಗೆ ಸಂಗ್ರಹಿಸಿರುವುದು ಪತ್ತೆಯಾಗಿದೆ. ಅಲ್ಲದೆ, ಬಹು ರಾಷ್ಟ್ರೀಯ ಕಂಪನಿಗಳು,ಮಾಲ್‌, ಅಪಾರ್ಟ್‌ ಮೆಂಟ್‌ ಕಾನೂನು ಬಾಹಿರವಾಗಿ ಜಾಗ ಸ್ವಾಧೀನಪಡಿಸಿಕೊಳ್ಳಲು ಪ್ರಮಾಣಪತ್ರ ನೀಡಿ ಸರ್ಕಾರಕ್ಕೆ ನೂರಾರು ಕೋಟಿ ನಷ್ಟ ಉಂಟು ಮಾಡಿದ್ದಾರೆ.

ಎಂಜಿನಿಯರಿಂಗ್‌ ವಿಭಾಗ: ಈ ವಿಭಾಗಲ್ಲಿ ಒಂದೇ ಕಾಮಗಾರಿಗೆ ಹಲವಾರು ಬಿಲ್ಲುಗಳನ್ನು ಮಂಜೂರಾತಿಆಗಿರುವುದು ಕಂಡು ಬಂದಿದೆ. ಕೆಲವು ಕಡೆಗಳಲ್ಲಿ ಕಾಮಗಾರಿಗಳು ನಡೆಸದೆಯೇ ನಡೆದಿರುವುದಾಗಿ ಬಿಂಬಿಸಿ ಬಿಲ್ಲುಗಳನ್ನು ಮಂಜೂರು ಮಾಡಿಕೊಂಡಿದ್ದಾರೆ. ಸರ್ಕಾರ ನಿಗದಿಪಡಿಸಿದ ಟೆಂಡರ್‌ ಮಾನದಂಡ ಅನುಸರಿಸದೇಕಳಪೆ ಕಾಮಗಾರಿ ನಿರ್ವಹಿಸಿ ಹೆಚ್ಚಿನ ಮೊತ್ತದ ಬಿಲ್ಲುಗಳನ್ನು ಮಂಜೂರಾತಿ ಮಾಡಿಕೊಂಡಿರುವುದು ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ ಎಂದು ಎಸಿಬಿ ತಿಳಿಸಿದೆ.

ಟಿಡಿಆರ್‌ ವಿಭಾಗ: ಇನ್ನು ಟಿಡಿಆರ್‌ ಹಗರಣ ಮತ್ತೆ ಬೆಳಕಿಗೆ ಬಂದಿದ್ದು, ಈ ವಿಭಾಗದಲ್ಲಿ ಒಂದು ಮಹಡಿ ಇರುವ ಕಟ್ಟಡವನ್ನು 2 ಅಥವಾ 3 ಮಹಡಿಗಳೆಂದು ನಮೂದಿಸಿ ಹೆಚ್ಚು ಮೌಲ್ಯವನ್ನು ನಿಗದಿಪಡಿಸಿಅಕ್ರಮವಾಗಿ ಹೆಚ್ಚು ವಿಸ್ತೀರ್ಣದ ಡಿಆರ್‌ಸಿಗಳನ್ನು ನೀಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು, ಬಹುರಾಷ್ಟ್ರೀಯ ಕಂಪನಿಗಳೊಂದಿಗೆ, ಮದ್ಯವರ್ತಿಗಳೊಂದಿಗೆ,ಭೂಮಾಲೀಕರೊಂದಿಗೆ ಸೇರಿಕೊಂಡು ಕಾನೂನು ಬಾಹಿರವಾಗಿ ನಿಯಮಗಳನ್ನು ಉಲ್ಲಂಘಿಸಿ ಅಳತೆಗಿಂತಲೂ ಹೆಚ್ಚಿನ ಅಳತೆಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಹೆಚ್ಚು ಅಳತೆ ಹೊಂದಿರುವ ಟಿಡಿಆರ್‌ ನೀಡಲಾಗಿದೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.