ಭ್ರಷ್ಟಾಚಾರ: ಮೂವರು ಅಧಿಕಾರಿಗಳ ಬಂಧನ
Team Udayavani, Aug 29, 2020, 1:30 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು, ನಿಗಮದ ಮೂವರು ಅಧಿಕಾರಿಗಳನ್ನು ಶುಕ್ರವಾರಬಂಧಿಸಿದ್ದಾರೆ.
ನಿಗಮದ ಪ್ರಧಾನ ವ್ಯವಸ್ಥಾಪಕ ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಮತ್ತು ವ್ಯವಸ್ಥಾಪಕ ಸುಬ್ಬಯ್ಯ ಬಂಧಿತರು. ಬಡ ಪ.ಪಂಗಡದ ಭೂರಹಿತ ರೈತರಿಗೆ ಸರ್ಕಾರದಿಂದಭೂಮಿ ಖರೀದಿಸಿ ನೀಡುವ ಯೋಜನೆಯನ್ನು ವಾಲ್ಮೀಕಿ ನಿಗಮವು ಭೂ ಒಡೆತನ ಯೋಜನೆ ಮೂಲಕ ಮಾಡುತ್ತಿದೆ. ಈ ಯೋಜನೆಯಲ್ಲಿ ಅಕ್ರಮ ನಡೆಯುತ್ತಿದ್ದು, ಕಡಿಮೆ ಗುಣಮಟ್ಟ ಮತ್ತು ಕಡಿಮೆ ಬೆಲೆಯ ಭೂಮಿಯನ್ನು ಹೆಚ್ಚಿನ ಬೆಲೆಗೆ ಖಾಸಗಿ ಭೂ ಮಾಲೀಕರಿಂದ ಪ್ರತಿ ಎಕರೆಗೆ 4 ರಿಂದ 5 ಲಕ್ಷ ರೂ. ಬೆಲೆಗೆ ಖರೀದಿಸುತ್ತಿರುವ ಮಾಹಿತಿ ಇತ್ತು. ಈ ಮೂಲಕ ಬರುತ್ತಿದ್ದ ಹೆಚ್ಚುವರಿ ಹಣವನ್ನು ಮಧ್ಯವರ್ತಿಗಳು ಮತ್ತು ಅಧಿಕಾರಿಗಳುಹಂಚಿಕೊಳ್ಳುತ್ತಿದ್ದಾರೆ. ಈ ರೀತಿಯ ಭೂ ಒಡೆತನ ಯೋಜನೆಯ ಒಂದು ಪ್ರಕರಣದಲ್ಲಿ ಮಾರ್ಚ್ ತಿಂಗಳ ದಿನಾಂಕ ಉಲ್ಲೇಖೀಸಿ ಕೆಲವು ಜಿಲ್ಲೆಗಳಿಗೆ ಹಣವನ್ನು ಬಿಡುಗಡೆ ಮಾಡಲು ಕಡತ ಸಿದ್ಧವಾಗಿತ್ತು. ಬಿಡುಗಡೆಯಾಗುವ ಮೊತ್ತದಲ್ಲಿ ಲಂಚದ ಹಣವನ್ನು ಕಚೇರಿಯ ವ್ಯವಸ್ಥಾಪಕ ಸುಬ್ಬಯ್ಯ ಪಡೆದುಕೊಂಡು, ಬಳಿಕ ಪ್ರಧಾನ ವ್ಯವಸ್ಥಾಪಕ ನಾಗೇಶ್ ಗೆ ತಲುಪಿಸಿದ್ದರು.
ಈ ಹಿನ್ನೆಲೆಯಲ್ಲಿ ಕಚೇರಿಯ ಮೇಲೆ ಆ.27 ರಂದು ದಾಳಿ ನಡೆಸಲಾಗಿತ್ತು. ಈ ವೇಳೆ ಲೆಕ್ಕವಿಲ್ಲದ 22 ಲಕ್ಷ ರೂ. ನಗದು ಪತ್ತೆಯಾಗಿದೆ. ನಂತರ ನಾಗೇಶ್ ಅವರ ಮನೆಯನ್ನು ಶೋಧಿಸಿದಾಗ 32,50 ಲಕ್ಷ ರೂ. ನಗದು ಹಣ ಮತ್ತು ಸುಬ್ಬಯ್ಯ ಮನೆಯಲ್ಲಿ 27,50 ಲಕ್ಷ ರೂ. ಪತ್ತೆಯಾಗಿದೆ. ಒಟ್ಟು 82, 65 ಲಕ್ಷ ರೂ. ಲಂಚದ ಹಣ ವಶಕ್ಕೆ ಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ