ಫ‌ಲಿತಾಂಶ ತಿಳಿಯಲು ಕ್ಷಣಗಣನೆ


Team Udayavani, May 15, 2018, 12:22 PM IST

palitamsha.jpg

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ 26 ವಿಧಾನಸಭಾ ಕ್ಷೇತ್ರಗಳ ಮತ ಏಣಿಕೆ ಕೇಂದ್ರಗಳಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದ್ದು, ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಮತ ಏಣಿಕೆ ಆರಂಭವಾಗಲಿದೆ. 

ಜಯನಗರ ಹಾಗೂ ರಾಜರಾಜೇಶ್ವರಿ ನಗರ ಹೊರತುಪಡಿಸಿ 26 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಮತದಾನ ಪ್ರಕ್ರಿಯೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮಂಗಳವಾರ ನಿರ್ಧಾರವಾಗಲಿದೆ. ಮತ ಏಣಿಕೆಯು ಬಸವನಗುಡಿಯ ಬಿಎಂಎಸ್‌ ಮಹಿಳಾ ಕಾಲೇಜು, ವಸಂತನಗರದ ಮೌಂಟ್‌ ಕಾರ್ಮಲ್‌ ಕಾಲೇಜು, ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜು ಹಾಗೂ ಶೇಷಾದ್ರಿ ರಸ್ತೆಯ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜುಗಳನ್ನು ಗುರುತಿಸಲಾಗಿದೆ. 

ಮತ ಎಣಿಕೆ ಪ್ರಕ್ರಿಯೆ ಹೇಗೆ?: ಮತ ಏಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಆರಂಭವಾಗಿ ಮೊದಲಿಗೆ ಅಂಚೆ ಮತಗಳ ಏಣಿಕೆಯಾಗಲಿದ್ದು, ಬೆಳಗ್ಗೆ 8.30ಕ್ಕೆ ಇವಿಎಂಗಳ ಮತ ಏಣಿಕೆಯಾಗಲಿದೆ. ಅದಕ್ಕೂ ಮೊದಲು ಎಲ್ಲ ರಾಜಕೀಯ ಪಕ್ಷಗಳ ಏಜೆಂಟರ ಸಮ್ಮುಖದಲ್ಲಿ ಇವಿಎಂಗಳಿಗೆ ಹಾಕಲಾಗಿರುವ ಮೊಹರು ತೆಗೆಯದಿರುವುದು ಖಚಿತಪಡಿಸಿಕೊಳ್ಳಲಾಗುತ್ತದೆ. ನಂತರದಲ್ಲಿ ಪ್ರತಿಯೊಂದು ವಿಧಾನಸಭೆಗೆ ನಿಗದಿಪಡಿಸಿರುವ 14 ಟೇಬಲ್‌ಗ‌ಳಲ್ಲಿ ಇವಿಎಂಗಳು ಪೂರೈಕೆಯಾಗಲಿದ್ದು, ಮತ ಏಣಿಕೆ ಪ್ರಕ್ರಿಯೆ ಆರಂಭವಾಗಲಿದೆ. 

ಚುನಾವಣಾಧಿಕಾರಿಗಳು ಮೊದಲಿಗೆ ಇವಿಎಂಗಳಲ್ಲಿ ದಾಖಲಾಗಿರುವ ಒಟ್ಟು ಮತಗಳನ್ನು ಪಡೆಯಲಿದ್ದು, ನಂತರದಲ್ಲಿ ಅಭ್ಯರ್ಥಿವಾರು ದಾಖಲಾಗಿರುವ ಮತಗಳ ವಿವರವನ್ನು ಬರೆದುಕೊಳ್ಳಲಿದ್ದಾರೆ. ಅಂತಿಮ ಸುತ್ತಿನ ನಂತರದಲ್ಲಿ ಯಾವುದೇ ದೋಷವಿಲ್ಲ ಎಂದು ಕಂಡಬಂದಾಗ ಚುನಾವಣಾಧಿಕಾರಿಗಳು ಅಭ್ಯರ್ಥಿಗಳು ಪಡೆದ ಮತಗಳ ಮಾಹಿತಿ ನೀಡಲಿದ್ದಾರೆ. 

ಸಿಬ್ಬಂದಿಗೆ ಕೊನೆಯ ಹಂತದ ತರಬೇತಿ: ಮತ ಏಣಿಕೆ ಪಕ್ರಿಯೆಗೆ ಆಯ್ಕೆಯಾಗಿರುವ ಸಿಬ್ಬಂದಿಗೆ ಈಗಾಗಲೇ ಎರಡು ಬಾರಿ ತರಬೇತಿ ನೀಡಲಾಗಿದ್ದು, ಸೋಮವಾರ ಸಂಜೆಯೂ ನಗರದ ವಿವಿಧ ಭಾಗಗಳಲ್ಲಿ ತರಬೇತಿ ಏರ್ಪಡಿಸಲಾಗಿತ್ತು. ನೂರಾರು ಸಿಬ್ಬಂದಿ ತರಬೇತಿ ಪಡೆಯಲು ಬಂದರೂ ತರಬೇತಿ ನೀಡಬೇಕಾದ ಚುನಾವಣಾಧಿಕಾರಿಗಳು ಬರದ ಹಿನ್ನೆಲೆಯಲ್ಲಿ ಸಿಬ್ಬಂದಿಯಲ್ಲಿ ಗೊಂದಲ ಉಂಟಾಗಿತ್ತು ಎಂದು ಕೆಲವರು ದೂರಿದ್ದಾರೆ. 
 
ಯಾವ ಕ್ಷೇತ್ರದ ಮತ ಏಣಿಕೆ ಎಲ್ಲಿ?: ಬಿಎಂಎಸ್‌ ಮಹಿಳಾ ಕಾಲೇಜು, ಬಸವನಗುಡಿ ಶಿವಾಜಿನಗರ, ಶಾಂತಿನಗರ, ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ 

ಮೌಂಟ್‌ ಕಾರ್ಮೆಲ್‌ ಕಾಲೇಜು, ವಸಂತನಗರ: ಕೆ.ಆರ್‌.ಪುರ, ಮಹಾಲಕ್ಷ್ಮಿ ಬಡಾವಣೆ, ಮಲ್ಲೇಶ್ವರ, ಹೆಬ್ಟಾಳ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ.ರಾಮನ್‌ ನಗರ

ಎಸ್‌ಎಸ್‌ಎಂಆರ್‌ವಿ ಕಾಲೇಜು, ಜಯನಗರ: ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ, ಬಿ.ಟಿ.ಎಂ.ಬಡಾವಣೆ, ಬೊಮ್ಮನಹಳ್ಳಿ

ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು, ಶೇಷಾದ್ರಿ ರಸ್ತೆ: ಯಲಹಂಕ, ಯಶವಂತಪುರ, ಟಿ.ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ, ಆನೇಕಲ್‌

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.