ನಕಲಿ ದಾಖಲೆ: ಬಾಂಗ್ಲಾದೇಶ ಪ್ರಜೆಗೆ ಹುಡುಕಾಟ


Team Udayavani, Jul 22, 2019, 3:00 AM IST

Udayavani Kannada Newspaper

ಬೆಂಗಳೂರು: ಬಾಂಗ್ಲಾದೇಶ ಮೂಲದ ಯುವಕನೊಬ್ಬ ತಾನು ಅಸ್ಸಾಂ ರಾಜ್ಯದ ನಿವಾಸಿ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್‌ ಪಡೆಯಲು ಅರ್ಜಿ ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದೆ.

ಈ ಸಂಬಂಧ ಬಾಂಗ್ಲಾದೇಶದ ಸಮೀರ್‌ ಉದೀನ್‌ ರೋಫಿ (26) ಹಾಗೂ ಆತನಿಗೆ ಪಾಸ್‌ಪೋರ್ಟ್‌ ಪಡೆಯಲು ಸಹಾಯ ಮಾಡಿದ ಬೌರಿಂಗ್‌ ಇನ್‌ಸ್ಟಿಟ್ಯೂಟ್‌ನ ಸಹರಾ ಫ‌ುಡ್‌ ಸಲ್ಯೂಷನ್‌ ಕ್ಯಾಂಟಿನ್‌ ಮಾಲೀಕ ರಾಮಕೃಷ್ಣಶೆಟ್ಟಿ (40) ಎಂಬವರ ವಿರುದ್ಧ ವಿದೇಶಿಗರ ಕಾಯ್ದೆ ಮತ್ತು ಪಾಸ್‌ಪೋರ್ಟ್‌ ಕಾಯ್ದೆ ಹಾಗೂ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿ, ರಾಮಕೃಷ್ಣ ಶೆಟ್ಟಿಯನ್ನು ಬಂಧಿಸಲಾಗಿದೆ.

ಹಾಗೇ ತಲೆಮರೆಸಿಕೊಂಡಿರುವ ಸಮೀರ್‌ಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಕಬ್ಬನ್‌ಪಾರ್ಕ್‌ ಪೊಲೀಸರು ಹೇಳಿದರು. ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸಮೀರ್‌ ಉದೀನ್‌ ರೋಫಿ, ನಗರದಲ್ಲಿ ಉದ್ಯೋಗ ಕೊಡಿಸುವ ಮಧ್ಯವರ್ತಿಗಳ ಮೂಲಕ 2018ರಲ್ಲಿ ಬೌರಿಂಗ್‌ ಇನ್‌ಸ್ಟಿಟ್ಯೂಟ್‌ನಲ್ಲಿರುವ ಸಹರಾ ಫ‌ುಡ್‌ ಸಲ್ಯೂಷನ್‌ ಕ್ಯಾಂಟಿನ್‌ನಲ್ಲಿ ಕೆಲಸ ಕೊಡುವಂತೆ ಮಾಲೀಕರಿಗೆ ಮನವಿ ಮಾಡಿಕೊಂಡಿದ್ದ.

ಅಸ್ಸಾಂ ರಾಜ್ಯದ ಆಧಾರ್‌ ಕಾರ್ಡ್‌, ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ತೋರಿಸಿದ್ದರಿಂದ ಕ್ಯಾಂಟೀನ್‌ ಮಾಲೀಕರು ಆತನ ಪೂರ್ವಾಪರ ಪರಿಶೀಲಿಸದೆ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಜನವರಿ 2019ರಲ್ಲಿ ಸಮೀರ್‌ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ರಾಮಕೃಷ್ಣ ಶೆಟ್ಟಿ ಸಹ ತಮ್ಮ ಕ್ಯಾಂಟಿನಲ್ಲೇ ಕಳೆದ 3-4 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದಾನೆ ಎಂದು ಶಿಫಾರಸು ಪತ್ರ ನೀಡಿದ್ದರು.

ನಂತರ ಪಾಸ್‌ಪೋರ್ಟ್‌ ಕಚೇರಿಯಿಂದ ಅರ್ಜಿದಾರರ ಅಪರಾಧ ಹಿನ್ನೆಲೆ ಪರಿಶೀಲಿಸುವಂತೆ ಫೆಬ್ರವರಿಯಲ್ಲಿ ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಗೆ ಆರೋಪಿಯ ಅರ್ಜಿ ಬಂದಿತ್ತು. ಅನಂತರ ಠಾಣೆಯ ಸಿಬ್ಬಂದಿ ಸಹಾರ ಫ‌ುಡ್‌ ಸಲ್ಯೂಷನ್‌ನಲ್ಲಿ ವಿಚಾರಿಸಿದಾಗ ಸಮೀರ್‌ ಅಸ್ಸಾಂ ರಾಜ್ಯದವನು ಎಂದು ತಿಳಿದು ಬಂದಿದೆ. ಆದರೆ, ಅನುಮಾನಗೊಂಡ ಸಿಬ್ಬಂದಿ ನೇರವಾಗಿ ಬೌರಿಂಗ್‌ ಇನ್‌ಸ್ಟಿಟ್ಯೂಟ್‌ನ ಕಾರ್ಯದರ್ಶಿ ಶ್ರೀಕಾಂತ್‌ ಅವರನ್ನು ವಿಚಾರಿಸಿದಾಗ ಆತನ ಬಗ್ಗೆ ಮಾಹಿತಿ ಇಲ್ಲ ಎಂದಿದ್ದರು. ಹೀಗಾಗಿ ಆರೋಪಿಯ ಅರ್ಜಿ ತಿರಸ್ಕರಿಸಲಾಗಿತ್ತು ಎಂದು ಪೊಲೀಸರು ಹೇಳಿದರು.

ಮತ್ತೂಂದೆಡೆ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿರುವ ನಗರ ವಿಶೇಷ ಶಾಖೆ ವಿಭಾಗದ ಅಧಿಕಾರಿಗಳು, ಸಮೀರ್‌ ಅರ್ಜಿಯ ಸಂಬಂಧ ಆತನ ದಾಖಲೆಗಳಲ್ಲಿ ಉಲ್ಲೇಖೀಸಿದ ಅಸ್ಸಾಂ ರಾಜ್ಯದ ವಿಳಾಸದ ವ್ಯಾಪ್ತಿಗೆ ಬರುವ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ ದೃಢಿಕರಿಸುವಂತೆ ಕೋರಿದ್ದರು. ಆದರೆ, ಆತನ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರು, ಸಮೀರ್‌ ಅಸ್ಸಾಂ ರಾಜ್ಯದವನಲ್ಲ. ಬಾಂಗ್ಲಾದೇಶ ಮೂಲದವನು ಎಂದು ವಿಶೇಷ ಶಾಖೆಗೆ ಮಾಹಿತಿ ನೀಡಿದ್ದರು.

ಈ ಸಂಬಂಧ ವಿಶೇಷ ಶಾಖೆ ಅಧಿಕಾರಿಗಳು ಜುಲೈ 17ರಂದು ಕಬ್ಬನ್‌ಪಾರ್ಕ್‌ ಪೊಲೀಸರಿಗೆ ಮಾಹಿತಿ ನೀಡಿ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಈ ಸಂಬಂಧ ಸಮೀರ್‌ ಹಾಗೂ ಆತನಿಗೆ ಸಹಕಾರ ನೀಡಿದ ಆರೋಪದ ಮೇಲೆ ರಾಮಕೃಷ್ಣ ಶೆಟ್ಟಿ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ನಾಪತ್ತೆ: ಪಾಸ್‌ಪೋರ್ಟ್‌ ಪರಿಶೀಲನಾ ಅರ್ಜಿಯನ್ನು ಪೊಲೀಸರು ತಿರಸ್ಕರಿಸಿರುವ ಮಾಹಿತಿ ತಿಳಿಯುತ್ತಿದ್ದಂತೆ ಸಮೀರ್‌ ತನ್ನ ವಸ್ತುಗಳೊಂದಿಗೆ ಪರಾರಿಯಾಗಿದ್ದಾನೆ. ಎಲ್ಲಿಗೆ ಹೋಗಿದ್ದಾನೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಜತೆಗೆ ಅಸ್ಸಾಂ ರಾಜ್ಯದ ಪೊಲೀಸರಿಗೂ ಮಾಹಿತಿ ನೀಡಲಾಗಿದೆ ಎಂದು ಕಬ್ಬನ್‌ಪಾರ್ಕ್‌ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.