ಖೋಟಾ ನೋಟು ಕೇಸ್‌: ಮೂವರಿಗೆ ಜೈಲು ಶಿಕ್ಷೆ

6 ವರ್ಷ ಜೈಲು, ತಲಾ 10 ಸಾವಿರ ರೂ. ದಂಡ, ಎನ್‌ಐಎ ವಿಶೇಷ ನ್ಯಾಯಾಲಯ ಆದೇಶ

Team Udayavani, Dec 4, 2020, 9:08 AM IST

ಖೋಟಾ ನೋಟು ಕೇಸ್‌: ಮೂವರಿಗೆ ಜೈಲು ಶಿಕ್ಷೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಖೋಟಾ ನೋಟು ದಂಧೆ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದಮೂವರು ಆರೋಪಿಗಳಿಗೆ ಆರು ವರ್ಷ ಜೈಲು ಹಾಗೂ ತಲಾ 10 ಸಾವಿರ ರೂ.ದಂಡ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಪಶ್ಚಿಮ ಬಂಗಾಳದ ಮೊಹಮದ್‌ ಸಾಜಿದ್‌ ಅಲಿ, ಅಬ್ದುಲ್‌ ಖಾದಿರ್‌, ದೇವನಹಳ್ಳಿ ವಿಜಯಪುರದ ಎಂ.ಎನ್‌ ರಾಜು ಶಿಕ್ಷೆಗೆ ಗುರಿಯಾದವರು. 2018ರಅಗಸ್ಟ್‌ನಲ್ಲಿಮಾದನಾಯಕಹಳ್ಳಿಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಪತ್ತೆಯಾದ ಖೋಟಾನೋಟು ದಂಧೆಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದ ಎನ್‌ಐಎ ಅಧಿಕಾರಿಗಳು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್‌ ಆರ್‌ಹುಲಗಿ ಅವರು, ಆರೋಪಿಗಳ ವಿರುದ್ಧಪ್ರಾಸಿಕ್ಯೂಶನ್‌ ಸಲ್ಲಿಸಿದ್ದ ಸಾಕ್ಷ್ಯಾಧಾರಗಳುಹಾಗೂ ಪ್ರಾಸಿಕ್ಯೂಶನ್‌ ಪರ ವಕೀಲರ ವಾದವನ್ನು ಪುರಸ್ಕರಿಸಿದ್ದಾರೆ. ಜತೆಗೆ,ಆರೋಪಿಗಳು ದೇಶದ ಆರ್ಥಿಕತೆಗೆ ಧಕ್ಕೆತರುವಂತಹ ಗಂಭೀರ ಕೃತ್ಯ ಎಸಗಿರುವಬಗ್ಗೆ ಸಾಕ್ಷ್ಯಾಧಾರಗಳು ಪೂರಕವಾಗಿವೆ ಎಂದು ಅಭಿಪ್ರಾಯಪಟ್ಟು ಆರೋಪಿಗಳಾದ ಮೊಹಮದ್‌ ಸಾಜಿದ್‌ ಅಲಿ, ಅಬ್ದುಲ್‌ ಖಾದಿರ್‌, ಎಂ.ಎನ್‌ ರಾಜುಗೆ ತಲಾ ಆರುವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಹೈದರಾಬಾದ್ ನಗರ ಪಾಲಿಕೆ ಚುನಾವಣೆ: ಇಂದು ಮತ ಎಣಿಕೆ, ಬಿಜೆಪಿ- ಟಿಆರ್ ಎಸ್ ಪ್ರತಿಷ್ಠೆ

ಪ್ರಕರಣದಲ್ಲಿ ಎನ್‌ಐಎ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪಿ. ಪ್ರಸನ್ನಕುಮಾರ್‌ ವಾದಿಸಿದ್ದರು. “ಪ್ರಕರಣದಲ್ಲಿನ ಮೊದಲ ಆರೋಪಿ ಸಾಜಿದ್‌ ಅಲಿ, ಎರಡನೇ ಆರೋಪಿ ಎಂ.ಎನ್‌ ರಾಜು, ಆರನೇ ಆರೋಪಿಅಬ್ದುಲ್‌ ಖಾದಿರ್‌ಗೆ ಆರು ವರ್ಷಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ. ಪ್ರಕರಣದ ಇತರ ಆರೋಪಿಗಳಾದ ವನಿತಾ ಜೆ. ಹಾಗೂ ಇತರರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣಾಪ್ರಕ್ರಿಯೆನಡೆಯುತ್ತಿದೆ’ಎಂದು ಸರ್ಕಾರಿ ವಿಶೇಷ ಅಭಿಯೋಜಕರಾದ ಪಿ.ಪ್ರಸನ್ನಕುಮಾರ್‌ ತಿಳಿಸಿದರು.

ಬಾಂಗ್ಲಾದಿಂದ ಬರುತ್ತಿತ್ತು ಖೋಟಾನೋಟು! :

ರಾಜ್ಯದಲ್ಲಿ ಖೋಟಾನೋಟು ದಂಧೆ ಚಲಾವಣೆ ಸುಳಿವು ಆಧರಿಸಿ ತನಿಖೆ ನಡೆಸುತ್ತಿದ್ದ ಎನ್‌ಐಎ ಅಧಿಕಾರಿಗಳು 2018ರ ಆಗಸ್ಟ್‌ 8ರಂದು ಅಲೂರಿನ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಿದ್ದರು. ಜತೆಗೆ, ಸ್ಥಳದಲ್ಲಿದ್ದ ಮೊಹಮದ್‌ ಸಾಜಿದ್‌ ಅಲಿ, ಎಂ.ಎನ್‌ ರಾಜು, ಗಂಗಾಧರ್ ‌ಕೋಲ್ಕರ್‌ ಎಂಬಾತನನ್ನು ಬಂಧಿಸಿ 2.50 ಲಕ್ಷ ರೂ. ಖೋಟಾನೋಟುಗಳನ್ನು ಜಪ್ತಿ ಮಾಡಿದ್ದರು. ಮುಂದುವರಿದ ತನಿಖೆಯಲ್ಲಿ ಶ್ರೀರಾಮಪುರದ ವನಿತಾ, ಅಬ್ದುಲ್‌ ಖಾದಿರ್‌ನನ್ನು ಬಂಧಿಸಿದ್ದರು.ಖೋಟಾನೋಟು ಚಲಾವಣೆ ದಂಧೆಯಲ್ಲಿ ಚಾಳಿಬಿದ್ದ ಆರೋಪಿಯಾಗಿರುವ ಎಂ.ಎನ್‌ ರಾಜು ಪಶ್ಚಿಮ ಬಂಗಾಳದ ಮಾಲ್ಡಾ ಮೂಲದ ಸಾಜಿದ್‌ ಸಂಪರ್ಕ ಬೆಳೆಸಿಕೊಂಡಿದ್ದ. ಸಾಜಿದ್‌ ಅಲಿ ಹಾಗೂ ಆತನ ಸಹಚರರು ಬಾಂಗ್ಲಾದಿಂದ ಖೋಟಾನೋಟುಗಳನ್ನು ತರಿಸಿ ಅವುಗಳನ್ನು ಬೆಂಗಳೂರಿಗೆ ತಲುಪಿಸುತ್ತಿದ್ದರು. ಅದೇ ನೋಟುಗಳನ್ನು ಪಡೆದ ರಾಜು ತನ್ನ ಸಹಚರರ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದಹಲವು ಭಾಗಗಳಲ್ಲಿ ಚಲಾವಣೆ ಮಾಡುತ್ತಿದ್ದ. ಹೀಗೆ,2018ರ ಆಗಸ್ಟ್‌ ಎಂಟರಂದು ಪಶ್ಚಿಮ ಬಂಗಾಳದಿಂದ ಖೋಟಾ ನೋಟು ತಂದಿದ್ದ ಸಾಜಿದ್‌ ಅಲಿ ಎಂ.ಎನ್‌ ರಾಜುವಿನ ಫ್ಲ್ಯಾಟ್‌ನಲ್ಲಿ ತಂಗಿದ್ದ ಮಾಹಿತಿ ಆಧರಿಸಿ ಎನ್‌ಐಎ ಹಾಗೂ ಸ್ಥಳೀಯ ಪೊಲೀಸರು ದಾಳಿ ನಡೆಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.