ಕೋವಿಡ್-19 ಬೇಗೆಯಲ್ಲಿ ಇ- ಕಾರ್ಮಸ್‌


Team Udayavani, Mar 23, 2020, 3:08 AM IST

corona-bege

ಬೆಂಗಳೂರು: ನಗರದ ಐಟಿ-ಬಿಟಿ ಸೇರಿ ವಿವಿಧ ಕಂಪನಿಗಳು ತನ್ನ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಅವಕಾಶ ಮಾಡಿಕೊಟ್ಟಿದ್ದು, ಇದರಿಂದ ತಿಂಡಿ,ಊಟ ಪಾರ್ಸಲ್‌ ಪಡೆಯುವವರ ಸಂಖ್ಯೆ ಕುಸಿದಿದೆ. ಇದರ ನೇರ ಪರಿಣಾಮ ಝೊಮ್ಯಾಟೊ, ಸ್ವಿಗ್ಗಿಗೆ ಆಗಿದೆ. ಮನೆಯಲ್ಲೇ ಕೆಲಸ ಮಾಡುವ ಕಾರಣ ಬೈಕ್‌ ಟ್ಯಾಕ್ಸಿಗಳಿಗೂ ಬಿಸಿ ತಟ್ಟಿದೆ.

ಊಟ ಆರ್ಡ್‌ರ್‌ ಮಾಡಿ ಅದನ್ನು ತರುವ ಡೆಲಿವರಿ ಬಾಯ್‌ಗೆ ಸೋಂಕು ಇದ್ದರೆ ಅದು ನಮಗೂ ತಗುಲಲಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಕಳೆದ ಕೆಲವು ವರ್ಷಗಳಿಂದ ಇ- ಕಾರ್ಮಸ್‌ ಸಾವಿರಾರು ಉದ್ಯೋಗ ಸೃಷ್ಟಿ ಮಾಡಿ, ಕೋಟ್ಯಂತರ ರೂ. ವಹಿವಾಟಿಗೆ ಕಾರಣವಾಗಿದೆ. ಕೈಯಲ್ಲೊಂದು ಬೈಕ್‌ ಇದ್ದರೆ ಸಾಕು ಉದ್ಯೋಗ ಸಿಗಲಿದೆ ಎಂಬ ಭರವಸೆ ಇ- ಕಾರ್ಮಸ್‌ ನೀಡಿತ್ತು. ಆದರೆ, ಪ್ರಸ್ತುತ ದಿನದಲ್ಲಿ ನಗರದ ಸುಮಾರು 20-25 ಸಾವಿರ ಡೆಲಿವರಿ ಬಾಯ್‌ಗಳಿಗೆ ಕೆಲಸದ ಅಭದ್ರತೆ ಎದುರಾಗಿದೆ.

ತಿಂಗಳ ಹಿಂದೆಯೇ ಬಿಡುವಿಲ್ಲದಂತೆ ಆರ್ಡರ್‌ಗಳು ಇದ್ದವು. ಪ್ರತಿದಿನ 30ಕ್ಕೂ ಅಧಿಕ ಫ‌ುಡ್‌ ಡೆಲಿವರಿ ಮಾಡುತ್ತಿದ್ದೆ. ದಿನಲೂ 1500 ರೂ.ಗೂ ಅಧಿಕ ಸಂಪಾದನೆ ಆಗುತ್ತಿತ್ತು. ಇದನ್ನೇ ನಂಬಿ ಜೀವನ ಸಾಗುತ್ತಿತ್ತು. ಆದರೆ, ಕೋವಿಡ್-19 ಹಿನ್ನೆಲೆ ವಾರದಿಂದ ಆರ್ಡರ್‌ಗಳೆಲ್ಲಾ ಕಡಿಮೆಯಾಗುತ್ತಿವೆ. ಕಳೆದ ತಿಂಗಳಿಗೆ ಹೋಲಿಸಿದರೆ ಶೇ.50ರಷ್ಟು ಕಡಿಮೆಯಾಗಿದೆ. ಹೀಗೆ ಮುಂದುವರಿದರೆ ಸಮಸ್ಯೆ ಉಂಟಾಗಲಿದೆ’ ಎನ್ನುತ್ತಾರೆ ವಿಜಯನಗರದ ಮನೋಜ್‌.

ಬೈಕ್‌ ಟ್ಯಾಕ್ಸಿ ಹತ್ತಲು ಹಿಂದೇಟು: ಕೋವಿಡ್-19 ವೈರಸ್‌ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಜನರು ಬೈಕ್‌ ಟ್ಯಾಕ್ಸಿಯಲ್ಲಿ ಸಂಚರಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಸಂಚರಿಸದರೂ ಆಂತದಲ್ಲೇ ಸಂಚರಿಸುತ್ತಾರೆ. ಅವರು ನೀಡುವ ಹೆಲ್ಮೆಟ್‌ ಪಡೆಯಲು ಒಪ್ಪುತ್ತಿಲ್ಲ. ಕಾರಣ ಸೋಂಕು ಹರಡುವ ಭಯ. ಹೆಲ್ಮೆಟ್‌ ಹಾಕದಿದ್ದ ಪೊಲೀಸರ ಭಯ. ಹೀಗಾಗಿ ರೈಡನ್ನೇ ರದ್ದು ಮಾಡುತ್ತಿದ್ದಾರೆ. ವಾರದಿಂದ ಬೈಕ್‌ ಟ್ಯಾಕ್ಸಿಯಲ್ಲಿ ಬರುವವರ ಸಂಖ್ಯೆ ತೀರ ಕಡಿಮೆಯಾ ಗಿದೆ. ಈ ಹಿಂದೆ ಪ್ರತಿದಿನ 1000-1200 ರೂ. ಸಂಪಾದಿಸು ತ್ತಿದೆ. ಆದರೀಗ 300 ರೂ.ಗೆ ಇಳಿದಿದೆ ಎನ್ನುತ್ತಾರೆ ದೊಡ್ಡಬಿದರಿಕಲ್ಲು ನಿವಾಸಿ ನಾಗೇಶ್‌.

ನಾನು ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಸಮಯ ಸಿಕ್ಕಾಗ ಬೈಕ್‌ ಟ್ಯಾಕ್ಸಿ ಚಲಿಸುತ್ತೇನೆ. ಕಾಲೇಜಿಗೆ ಹೋಗುತ್ತಾ, ಪ್ರತಿದಿನ 500 ರೂ. ಸಂಪಾದನೆ ಮಾಡುತ್ತಿದ್ದೆ. ಇದರಿಂದ ವಿದ್ಯಾಭ್ಯಾಸಕ್ಕೂ ಅನುಕೂಲವಾಗಿತ್ತು. ಕೋವಿಡ್-19 ಹಿನ್ನೆಲೆ ಟ್ಯಾಕ್ಸಿಗೆ ಬರುವವರ ಸಂಖ್ಯೆ ಕುಸಿದಿದೆ.
-ಕಾರ್ತಿಕ್‌, ಸ್ನಾತಕೋತ್ತರ ಪದವಿ ವಿದ್ಯಾರ್ಥಿ

ಮೊದಲು ದಿನಕ್ಕೆ 20-25 ಆರ್ಡರ್‌ಗಳನ್ನು ಡೆಲಿವೆರಿ ಮಾಡುತ್ತಿದ್ದೆವು. ಆದರೀಗ ದಿನಕ್ಕೆ 10-15ಕ್ಕೆ ಇಳಿದಿದೆ. ನಾವು ಡೆಲಿವರಿ ನೀಡುವಾಗ ಸ್ವತ್ಛತೆ ಕಾಪಾಡುತ್ತೇವೆ. ವೈರಸ್‌ ಭೀತಿಯಿಂದ ಆರ್ಡರ್‌ಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾ ದಂತೆ, ಉದ್ಯೋಗದ ಅಭದ್ರತೆ ಕಾಡುತ್ತಿದೆ.
-ಶಶಾಂಕ್‌, ಸ್ವಿಗ್ಗಿ ಡೆಲಿವರಿ ಬಾಯ್‌

* ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.