ಲೇಕ್‌ ವ್ಯೂವ್‌ : ಸೋಂಕಿತರ ಸಂಖ್ಯೆ 109ಕೆ ಏರಿಕೆ

ಕ್ಲಸ್ಟರ್ ಮಾದರಿ ಸೋಂಕು ಹೆಚ್ಚುವ ಸಾಧ್ಯತೆ ! ಅಗತ್ಯ ಕೊರೊನಾ ಮಾರ್ಗಸೂಚಿ ಪಾಲನೆಗೆ ಸಲಹೆ

Team Udayavani, Feb 18, 2021, 2:34 PM IST

Covid

ಬೆಂಗಳೂರು: ಬೊಮ್ಮನಹಳ್ಳಿಯ ಎಸ್‌ಎನ್‌ಎನ್‌ ರಾಜ್‌ ಲೇಕ್‌ ವ್ಯೂವ್‌ ವಸತಿ ಸಮುತ್ಛಯದಲ್ಲಿ ಬುಧ ವಾರ ಮತ್ತೆ ಆರು ಜನ ರಲ್ಲಿ ಕೊರೊನಾ ದೃಢಪಟ್ಟಿದ್ದು, ಆತಂಕದ ವಾತಾ ವ ರಣ ಸೃಷ್ಟಿಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ.

ವಸತಿ ಸಮುತ್ಛಯದಲ್ಲಿ ಮದುವೆ ವಾರ್ಷಿಕೋತ್ಸವ ಸಂಭ್ರಮಾಚರಣೆ ವೇಳೆ ಡೆಹರಾಡೂನ್‌ನಿಂದ ಬಂದ ವರೂ ಸೇರಿದ್ದರು. ಇವರಿಂದ ಇತರರಿಗೂ ಸೋಂಕು ದೃಢ ಪಟ್ಟಿದೆ. ವಸತಿ ಸಮು ತ್ಛಯದಲ್ಲಿರುವ 1,375 ಮಂದಿಯನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಬುಧವಾರದ ವರೆ ಗೆ 109 ಜನ ರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕು ದೃಢ ಪಟ್ಟ 109 ಮಂದಿಯಲ್ಲಿ ಎಲ್ಲರೂ ಲಕ್ಷಣ ರಹಿತ ಸೋಂಕಿತರಾಗಿದ್ದಾರೆ.

ವಸತಿ ಸಮುತ್ಛಯದ ಒಳಗೇ ಪ್ರಾವಿಜನ್‌ ಸ್ಟೋರ್‌ ಇದ್ದು, ಇಲ್ಲಿಂದಲೇ ಹಣ್ಣು ಹಾಗೂ ತರಕಾರಿಯನ್ನು ನಿವಾ ಸಿ ಗಳು ಖರೀದಿ ಮಾಡುತ್ತಿದ್ದಾರೆ. ಔಷಧಿ ಬೇಕಾದರೆ ಮಾತ್ರ ಬಿಬಿಎಂಪಿ ಪೂರೈಕೆ ಮಾಡುತ್ತಿದೆ ಎಂದು ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತ ರಾಮಕೃಷ್ಣ ತಿಳಿಸಿದರು.

ವಸತಿ ಸಮು ತ್ಛ ಯದ ನಿವಾಸಿಗಳು ಅನಗತ್ಯವಾಗಿ ಓಡಾಡದಂತೆ ನಿರ್ಬಂಧಿಸಲಾ ಗಿದ್ದು, ಸಿಸಿ ಟಿವಿ ಮೂಲಕ ನಿಗಾ ವಹಿಸಲಾಗಿದೆ. ಸೋಂಕು ದೃಢ ಪ ಟ್ಟ ವ ರಲ್ಲಿ ಬಹುತೇಕರಿಗೆ ಸೋಂಕಿನ ಲಕ್ಷಣ ಇಲ್ಲ. ಆದರೆ, ತುರ್ತು ಚಿಕಿತ್ಸೆಗೆ ಬೇಕಾದ ಎಲ್ಲ ರೀತಿ ವೈದ್ಯಕೀಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಈವರೆಗೂ ಲಸಿಕೆಯಿಂದ  16 ಮಂದಿಗೆ ಅಡ್ಡ ಪರಿಣಾಮ ಬೆಂಗಳೂರು: ಕೊರೊನಾ ಲಸಿಕೆ ವಿತರಣೆ ಆರಂಭದಿಂದ ಫೆ.17 ವರೆಗೂ ರಾಜ್ಯದಲ್ಲಿ 16 ಗಂಭೀರ ಅಡ್ಡಪರಿಣಾಮ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಬಳ್ಳಾರಿ ಮತ್ತು ಶಿವಮೊಗ್ಗ ಇಬ್ಬರು ಪುರುಷರು, ಬೆಳಗಾವಿ ಮಹಿಳೆ ಸೇರಿ ಮೂರು ಮಂದಿ ಸಾವಿಗೀಡಾಗಿದ್ದಾರೆ. ಇವರ ಸಾವಿಗೆ ಲಸಿಕೆ ಕಾರಣವಲ್ಲ ಎಂಬುದು ವೈದ್ಯಕೀಯ ತನಿಖೆಯಿಂದ ದೃಢಪಟ್ಟಿದೆ. ಉಳಿದ 13 ಪ್ರಕರಣಗಳಲ್ಲಿ ಆತಂಕದಿಂದ ಅಡ್ಡಪರಿಣಾಮ ಕಾಣಿಸಿಕೊಂಡಿದ್ದು, 12 ಮಂದಿಗೆ ಈಗಾಗಲೇ ಗುಣಮುಖರಾಗಿದ್ದಾರೆ. ಕೊಪ್ಪಳದ ಗಂಗಾವತಿಯ 35 ವರ್ಷದ ಆಶಾ ಕಾರ್ಯಕರ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎರಡನೇ ಅಲೆ ಅಲ್ಲ; ರೂಪಾಂತರ ಇಲ್ಲ ಬೆಂಗಳೂರು: ನರ್ಸಿಂಗ್‌ ಕಾಲೇಜುಗಳು ಮತ್ತು  ಅಪಾರ್ಟ್‌ಮೆಂಟ್‌ಗಳಲ್ಲಿ ಏಕಾಏಕಿ ವರದಿಯಾಗಿರುವ ಕೊರೊನಾ ಪ್ರಕರಣಗಳು ಎರಡನೇ ಅಲೆ ಅಲ್ಲ  ಎಂದು ವೈರಾಣು ತಜ್ಞ ಮತ್ತು ಕೊರೊನಾ ನಿಯಂತ್ರಣ ಸರ್ಕಾರದ ಸಲಹಾ ಸಮಿತಿ ಸದಸ್ಯ ಡಾ.ವಿ.ರವಿ  ಸ್ಪಷ್ಟಪಡಿಸಿದ್ದಾರೆ.

ಬುಧವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನಡೆದ ಮಾಧ್ಯಮ ಕಾರ್ಯಗಾರದಲ್ಲಿ ಮಾತನಾಡಿ, ನಿರಂತರವಾಗಿ ಕೆಲ ಪ್ರದೇಶದಲ್ಲಿ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿ ಪರಿಸ್ಥಿತಿ ಕೈ ಮೀರಿದರೆ ಅದನ್ನು ಕೊರೊನಾ ಎರಡನೇ ಅಲೆ ಎನ್ನಲಾಗುತ್ತದೆ. ಸದ್ಯ ಬೆಂಗಳೂರು ಮತ್ತು ಮಂಗಳೂರಿನ ಎರಡು ಮೆಡಿಕಲ್‌ ಕಾಲೇಜು ಮತ್ತು ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲೆ ಸೀಮಿತ ಅವಧಿಯಲ್ಲಿ ಏಕಾಏಕಿ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿದರು. ಹೀಗಾಗಿ, ಇವುಗಳನ್ನು ಕೊರೊನಾ ಎರಡನೇ ಅಲೆ ಎನ್ನಲು ಸಾಧ್ಯವಿಲ್ಲ. ಒಂದು ವೇಳೆ ಆ ಪ್ರದೇಶ ಅಥವಾ ಸುತ್ತಮುತ್ತಲಿನಲ್ಲಿ ಮುಂದಿನ ದಿನಗಳಲ್ಲಿಯೂ ಪ್ರಕರಣಗಳು ಹೆಚ್ಚುತ್ತಲೇ ಸಾಗಿದರೇ ಎರಡನೇ ಅಲೆ ಎನ್ನಬಹುದು ಎಂದರು.

ದಕ್ಷಿಣ ಆಫ್ರಿಕ, ಬ್ರೆಜಿಲ್‌ ರೂಪಾಂತರ ಇಲ್ಲ : ಡಿಸೆಂಬರ್‌ನಿಂದ ಈವರೆಗೂ 86 ಮಂದಿಯ ಗಂಟಲು ದ್ರವವನ್ನು ವಂಶವಾಹಿನಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 25 ಮಂದಿಯಲ್ಲಿ ಬ್ರಿಟನ್‌ ರೂಪಾಂತರ ಕೊರೊನಾ ವೈರಸ್‌ ಪತ್ತೆಯಾಗಿದೆ. ಈಗಾಗಲೇ ಇವರೆಲ್ಲಾ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೂ ದಕ್ಷಿಣ  ಆಫ್ರಿಕ ಮತ್ತ ಬ್ರೆಜಿಲ್‌ ರೂಪಾಂತರ ಕೊರೊನಾ ವೈರಸ್‌ ಪತ್ತೆಯಾಗಿಲ್ಲ ಎಂದು ವೈರಾಣು ತಜ್ಞ ಡಾ.ವಿ.ರವಿ ತಿಳಿಸಿದರು.

ಬುಧ ವಾರ 2,529 ಮಂದಿಗೆ ಲಸಿಕೆ ನಗ ರ ದಲ್ಲಿ ಬುಧ ವಾರ 1,591 ಜನ ಆರೋಗ್ಯ ಕಾರ್ಯಕರ್ತರು (ಎರಡನೇ ಸುತ್ತಿನ ಲಸಿಕೆ) ಸೇರಿ ದಂತೆ ಒಟ್ಟು 2,529 ಜನ ಕೋವಿಡ್‌ ಲಸಿಕೆ ಹಾಕಿ ಸಿ ಕೊಂಡಿ ದ್ದಾರೆ. 218 ಆರೋಗ್ಯ ಕಾರ್ಯಕರ್ತರು ಹಾಗೂ 720 ಕೋವಿಡ್‌ ಫ್ರೆಂಟ್‌ ಲೈನ್‌ ವಾರಿಯರ್ಸ್‌ ಸೇರಿದಂತೆ ಒಟ್ಟು 938  ಮಂದಿ ಮೊದಲ ಸುತ್ತಿನ ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಬಿಬಿ ಎಂಪಿ ಆಯುಕ್ತ ಎನ್‌. ಮಂಜು ನಾಥ್‌ ಪ್ರಸಾದ್‌ ತಿಳಿ ಸಿ ದ್ದಾರೆ.

ಮತ್ತೆಕ್ಲಸ್ಟರ್ ಗಳಲ್ಲಿ ಭೀತಿ : ನಗರದಲ್ಲಿ ಮತ್ತೆ ಕ್ಲಸ್ಟರ್‌ ಗಳಲ್ಲಿ (ಒಂದು ನಿರ್ದಿಷ್ಟ ಪ್ರದೇ ಶ ದಲ್ಲಿ ಹೆಚ್ಚು ಕೊರೊನಾ ಸೋಂಕು ಪ್ರಕರಣ) ಸೋಂಕು ಭೀತಿ ಎದು ರಾ ಗಿದೆ. ಈ ಹಿಂದೆ ಪಾದರಾಯನಪುರ ಹಾಗೂ ಹೊಂಗ ಸಂದ್ರ ಸೇರಿದಂತೆ ನಗರದ ಕೆಲವು ನಿರ್ದಿಷ್ಟ ಪ್ರದೇ ಶ ದಲ್ಲಿ ಸೋಂಕು ಹೆಚ್ಚಿತ್ತು. ನಂತರ ಉಳಿದ ಭಾಗಕ್ಕೂ ಹಬ್ಬಿತು. ಈಗ ಕ್ಲಸ್ಟರ್‌ ಮಾದರಿ ಸೋಂಕು ಕಾಣಿ ಸಿ ಕೊಂಡರೆ, ಕೊರೊನಾ ಹಬ್ಬುವ ಸಾಧ್ಯತೆ ಹೆಚ್ಚು. ಅಲ್ಲದೆ, ಬಿಸಿಲು ಮಿಶ್ರಿತ ಗಾಳಿ ಕಾರಣದಿಂದ ಸಾಂಕ್ರಾಮಿಕ ರೋಗ ಹೆಚ್ಚುವ ಸಾಧ್ಯ ತೆಯೂ ಇದೆ. ಈ ವೇಳೆಯಲ್ಲಿ ನಿರ್ಲಕ್ಷ್ಯ ವಹಿ ಸದೆ ಎಚ್ಚರಿಕೆಯಿಂದ ಪರೀ ಕ್ಷೆ ಗೆ ಒಳ ಪ ಡ ಬೇಕು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.