ದಾಖಲಾದ ನಾಲ್ಕೇ ದಿನದಲ್ಲಿ ಶೇ. 51 ಸಾವು


Team Udayavani, Oct 10, 2020, 12:20 PM IST

ದಾಖಲಾದ ನಾಲ್ಕೇ ದಿನದಲ್ಲಿ ಶೇ. 51 ಸಾವು

ಮಹಿಳೆಯಿಂದ ಕೋವಿಡ್ ಪರೀಕ್ಷೆಗೆ ಮಾದರಿ ಪಡೆದ ವೈದ್ಯರು

ಬೆಂಗಳೂರು: ರಾಜ್ಯದಲ್ಲಿ ಶೇ. 50ಕ್ಕೂ ಅಧಿಕ ಕೋವಿಡ್  ಸೋಂಕಿತರು ಆಸ್ಪತ್ರೆಗೆ ದಾಖಲಾದ ಕೇವಲ ನಾಲ್ಕು ದಿನಗಳಲ್ಲೇ ಸಾವನ್ನಪ್ಪಿದ್ದಾರೆ. ಈ ಪೈಕಿ ಶೇ. 17 ಸೋಂಕಿತರು ಆಸ್ಪತ್ರೆಗೆ ಆಗಮಿಸಿದ ದಿನವೇ ಮೃತಪಟ್ಟಿದ್ದಾರೆ!

– ಆಗಸ್ಟ್‌ನಲ್ಲಿ ಕೋವಿಡ್ ಸೋಂಕಿ ನಿಂದ ಮೃತಪಟ್ಟವರ ಸಂಖ್ಯೆಯನ್ನು ಆಧರಿಸಿ ಮೈಸೂರಿನ ಜೀವನ್‌ ರಕ್ಷಾ ಮ್ಯಾನೇಜ್‌ಮೆಂಟ್‌ ಕನ್ಸಲ್ಟಿಂಗ್‌ ಸಂಸ್ಥೆಯು ಅಧ್ಯಯನ ನಡೆಸಿದೆ. ಆ ತಿಂಗಳಲ್ಲಿ ಸಾವನ್ನಪ್ಪಿದ 2,697 ಸೋಂಕಿ ತರ ಪೈಕಿ ಶೇ.51 ಜನ ಆಸ್ಪತ್ರೆಗಳಿಗೆ ದಾಖಲಾಗಿ ನೂರು ತಾಸುಗಳಲ್ಲಿ ಸಾವನ್ನಪ್ಪಿದ್ದಾರೆ. ಕೋಲಾರದಲ್ಲಿ ಈ ಪ್ರಮಾಣ ನೂರರಷ್ಟಿದೆ (ಆಗಸ್ಟ್‌ನಲ್ಲಿ ಆ ಜಿಲ್ಲೆಯಲ್ಲಿ ಸಾವನ್ನಪ್ಪಿದವರೆಲ್ಲರೂ ನೂರು ತಾಸುಗಳಲ್ಲೇ ಮೃತ). ಶೇ. 17 ಜನ ದಾಖಲಾದ ದಿನವೇ ಮೃತಪಟ್ಟಿದ್ದಾರೆ. ಶೇ. 3 ರಷ್ಟು ಸೋಂಕಿತರು ಆಸ್ಪತ್ರೆಗೆ ಆಗಮಿಸುವಷ್ಟರಲ್ಲಿ ಕೊನೆಯುಸಿರೆಳೆದಿ ರುವುದು ಪತ್ತೆಯಾಗಿದೆ ಎಂದು ಜೀವನ್‌ರಕ್ಷಾ ಇನಿಷಿಯೇಟಿವ್‌ ಆಫ್ ಪ್ರಾಕ್ಸಿಮಾ ಸಂಚಾಲಕ ಮೈಸೂರು ಸಂಜೀವ್‌ ತಿಳಿಸಿದರು.

“ಕೋವಿಡ್‌-19 ಅವಧಿಯಲ್ಲಿ ಸಾವಿಗೆ ಕಾರಣವಾಗುವ ಅಂಶಗಳು’ ಕುರಿತ ಆನ್‌ಲೈನ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಂಕಿ-ಅಂಶಗಳು ಕೋವಿಡ್ ವೈರಸ್‌ ಬಗ್ಗೆ ಸೋಂಕಿತರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಗಳಲ್ಲಿನ ವ್ಯವಸ್ಥೆಗಳಿಗೆ ಕನ್ನಡಿ ಹಿಡಿಯುತ್ತವೆ ಎಂದರು.

ಸಾವಿಗೀಡಾದವರಲ್ಲಿ ಬಹುತೇಕರು ವೈರಸ್‌ ಬಗ್ಗೆ ತಾತ್ಸಾರ ತೋರಿದ್ದು, ಕೊನೆ ಕ್ಷಣದಲ್ಲಿ ಆಸ್ಪತ್ರೆಗೆ ಹೋಗಿದ್ದಾರೆ. ಅಷ್ಟೊತ್ತಿಗಾಗಲೇ ವ್ಯಾಪಕವಾಗಿ ವೈರಸ್‌ ಹರಡಿದ್ದರಿಂದ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ, ಕಲಬುರಗಿ, ಚಾಮರಾಜನಗರ ಮತ್ತು ಹಾಸನದಲ್ಲಿ ಕನಿಷ್ಠ ಶೇ. 18ರಿಂದ ಗರಿಷ್ಠ ಶೇ. 23 ಜನ ಆಸ್ಪತ್ರೆಗಳಿಗೆ ಬರುವಷ್ಟರಲ್ಲಿ ಮೃತರಾಗಿದ್ದಾರೆ. ಇನ್ನು ಹಲವು ಪ್ರಕರಣಗಳಲ್ಲಿ ಗ್ರಾಮೀಣ ಭಾಗದಲ್ಲಿನ ಸೌಲಭ್ಯಗಳ ಕೊರತೆ ಕಾರಣವಾಗಿವೆ. ಶೇ.40 ರೋಗಿಗಳು ಆಸ್ಪತ್ರೆಗಳಲ್ಲಿ 5-49 ದಿನಗಳ ಅಂತರದಲ್ಲಿ ಚಿಕಿತ್ಸೆಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧ್ಯಯನ ವರದಿ ಬಹಿರಂಗ ಪಡಿಸುತ್ತದೆ ಎಂದೂ ಹೇಳಿದರು.

ಮೃತರಲ್ಲಿ ಹೆಚ್ಚಿನವರಿಗೆ ತೀವ್ರ ಉಸಿರಾಟದ ಸಮಸ್ಯೆ (ಸಾರಿ), ವಿಷಮಶೀತ ಜ್ವರದ ಲಕ್ಷಣಗಳುಕಂಡುಬಂದಿದ್ದವು. ಶ್ವಾಸಕೋಶ ತಜ್ಞರ ಕೊರತೆ ಮತ್ತಿತರ ಅಂಶಗಳು ಕಾರಣಎಂದ ಅವರು, ಸಾವನ್ನಪ್ಪಿದವರಲ್ಲಿ ಶೇ.69.19ರಷ್ಟು ಪುರುಷ ಹಾಗೂ ಶೇ. 30.77 ಮಹಿಳೆಯರಿದ್ದಾರೆ. ದೇಶದ ಒಟ್ಟಾರೆ ಕೋವಿಡ್‌-19 ಪಾಸಿಟಿವಿಟಿಪ್ರಮಾಣ ಶೇ. 7.6ರಷ್ಟಿದ್ದು, ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರದಂತಹ ದೊಡ್ಡ ರಾಜ್ಯಗಳಲ್ಲಿ ಶೇ. 9.7ರಷ್ಟಿದೆ. ಅದೇ ರೀತಿ, ದೊಡ್ಡ ರಾಜ್ಯಗಳಲ್ಲಿ ಮೃತ ಪ್ರಮಾಣ ಶೇ. 78ರಷ್ಟಿದೆ ಎಂದು ಮಾಹಿತಿ ನೀಡಿದರು.

 ಶೇ. 88ಖಾಸಗಿ ಆಸ್ಪತ್ರೆಗಳಲ್ಲಿ ಸಾವು :  ಮೃತಪಟ್ಟ ರೋಗಿಗಳ ಪೈಕಿ ಶೇ.45 ಸಾವು ಕೋವಿಡ್ ವೈರಸ್‌ ಚಿಕಿತ್ಸೆಗೆ ಮೀಸಲಿಟ್ಟ ಆಸ್ಪತ್ರೆಗಳಲ್ಲಾಗಿದ್ದರೆ, ಶೇ. 27 ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದಾರೆ. ಒಟ್ಟಾರೆ 2,697 ಸಾವುಗಳಲ್ಲಿ 32 ಸೋಂಕಿತರು ತಮ್ಮ ಮನೆಗಳಲ್ಲಿ ಹಾಗೂ 38 ರೋಗಿಗಳು ಆಸ್ಪತ್ರೆಗೆ ತರುವಾಗ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ದಾಖಲಾದ ಸಾವುಗಳ ಪೈಕಿ ಶೇ. 88 ಖಾಸಗಿ ಆಸ್ಪತ್ರೆಗಳ ಲ್ಲಾಗಿವೆ. ಇನ್ನು ಬೀದರ್‌ನಲ್ಲಿ ಶೇ. 92 ಸಾವು ಕೋವಿಡ್‌-19ಗೆ ಮೀಸಲಿಟ್ಟ ಆಸ್ಪತ್ರೆಗಳಲ್ಲಾಗಿವೆ. 30 ವರ್ಷ ಮೇಲ್ಪಟ್ಟ 54 ಸೋಂಕಿತರು ಅಸುನೀಗಿದ್ದು, ಇದರಲ್ಲಿ ಶೇ. 37 ಜನ ಬೆಂಗಳೂರು ನಗರಕ್ಕೆ ಸೇರಿದವರಾಗಿದ್ದಾರೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.