ಸೋಂಕಿತರು 87,680ಕ್ಕೆ ಏರಿಕೆ


Team Udayavani, Aug 16, 2020, 12:23 PM IST

ಸೋಂಕಿತರು 87,680ಕ್ಕೆ ಏರಿಕೆ

ಬೆಂಗಳೂರು: ನಗರದಲ್ಲೀಗ ಕೋವಿಡ್ ಸೋಂಕಿತರ ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಹೊಸದಾಗಿ 3,495 ಪ್ರಕರಣ ದೃಢಪಟ್ಟಿದ್ದು ಸೋಂಕಿತರ ಒಟ್ಟಾರೆ ಸಂಖ್ಯೆ 87,680ಕ್ಕೆ ಏರಿದೆ. ಹಾಗೆಯೇ 2,034 ಮಂದಿ ವಿವಿಧ ಆಸ್ಪತ್ರೆ ಮತ್ತು ಆರೈಕೆ ಕೇಂದ್ರಗಳಿಂದ ಗುಣಮುಖರಾಗಿ ಮನೆ ಸೇರಿದ್ದು, ಒಟ್ಟಾರೆ ಚೇತರಿಸಿಕೊಂಡು ಬಿಡುಗಡೆಯಾದವರ ಪ್ರಮಾಣ 51,426 ಕ್ಕೆ ಏರಿಕೆಯಾಗಿದೆ.

ನಿನ್ನೆ ಹೊಸದಾಗಿ 35 ಮಂದಿ ಕೋವಿಡ್ ಗೆ ಬಲಿಯಾಗಿದ್ದು ಸಾವಿಗೀಡಾದವರ ಸಂಖ್ಯೆ ಈಗ 1,395ಕ್ಕೆ ಏರಿದೆ. ಕಳೆದ ಹಲವು ದಿನಗಳಿಂದ ಸೋಂಕಿತ ಪ್ರಕರಣ ಹೆಚ್ಚಳವಾಗುವುದರ ಜತೆಗೆ ಸಾವಿನ ಸಂಖ್ಯೆಯೂ ಏರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

10 ದಿನಗಳಲ್ಲಿ 22,809 ಸೋಂಕಿತ ಪ್ರಕರಣ: ಕಳೆದ 10 ದಿನಗಳಲ್ಲಿ ನಗರದಲ್ಲಿ 22,809 ಕೋವಿಡ್‌ ಸೋಂಕಿತ ಪ್ರಕರಣ ಕಂಡುಬಂದಿವೆ. ಆ.10 ರಂದು 1,610 ಪ್ರಕರಣ ದಾಖಲಾಗಿ ಇಳಿಗತಿ ಕಂಡಿತ್ತು. ಆದರೆ, ಆ.11 ರಿಂದೀಚೆಗೆ 2 ಸಾವಿದರ ಮೇಲೆ ಇದ್ದ ಸೋಂಕಿತರ ಸಂಖ್ಯೆ ಇದೀಗ 3,495ಕ್ಕೆ ದಾಪುಗಾಲಿಟ್ಟಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಕಳೆದ 10 ದಿನಗಳ ಅಂಕಿಅಂಶ ಗಮನಿಸಿದರೆ ನಿನ್ನೆಯ ಸಂಖ್ಯೆ 10 ದಿನಗಳಲ್ಲಿ ದಾಖಲಾದ ಅತಿ ಹೆಚ್ಚಿನ ಸೋಂಕಿತರ ಸಂಖ್ಯೆ ಎನಿಸಿದೆ. ಸೋಂಕಿತರಲ್ಲಿ 53,733 ಪುರುಷರುಮತ್ತು 33,925 ಮಹಿಳೆಯರು ಸೇರಿದ್ದಾರೆ. ಜತೆಗೆ ಗುಣಮುಖರಾಗುವ ಸಂಖ್ಯೆ 2 ಸಾವಿರದ ಮೇಲೆಯೇ ಇದ್ದು ಈವರೆಗೂ ಪುರುಷರು, ಮಹಿಳೆಯರು ಸೇರಿ 51,426 ಜನ ಮನೆ ಸೇರಿದ್ದಾರೆ. ಇದರಲ್ಲಿ 31,061 ಪುರುಷರು, 20,358 ಮಹಿಳೆಯರಿದ್ದಾರೆ. ಕೋವಿಡ್‌ನಿಂದ ಗುಣಮುಖರಾಗುತ್ತಿರುವ ಪ್ರಮಾಣ 58,65 ರಷ್ಟಿದೆ.

ಹಾಗೆಯೇ ನಗರದಲ್ಲಿ ಒಟ್ಟಾರೆ 34,858 ಸಕ್ರಿಯ ಪ್ರಕರಣಗಳಿದ್ದು ಅವರೆಲ್ಲರೂ ವಿವಿಧ ಆಸ್ಪತ್ರೆ, ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1,400 ರತ್ತ ಮರಣದ ಸಂಖ್ಯೆ: ನಗರದಲ್ಲೀಗ ಕೋವಿಡ್‌ ಸೋಂಕಿಗೆ ಮೃತಪಡುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದೆ. ನಿನ್ನೆ 35 ಮಂದಿ ಸಾವಿಗೀಡಾಗಿದ್ದು ಇದರಲ್ಲಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಅಸುನೀಗಿದ 37ವರ್ಷದ ಯುವಕ ಮತ್ತು ತೀವ್ರ ಜ್ವರ, ಕಫ ಹಾಗೂ ಉಸಿರಾಟದ ತೊಂದರೆಯಿಂದ ಮರಣವನ್ನಪಿದ 85 ವರ್ಷದ ವೃದ್ಧ ಸೇರಿದ್ದಾರೆ.

ಒಟ್ಟಾರೆ ಕೋವಿಡ್ ದಿಂದ ಸಾವಿಗೀಡಾದವರ ಸಂಖ್ಯೆ ಈಗ 1,395ಕ್ಕೆ ಹೆಚ್ಚಿದೆ. ಇದರಲ್ಲಿ 468 ಮಹಿಳೆಯರು, 928 ಪುರುಷರು ಇದ್ದಾರೆ. ಜತೆಗೆ ಮರಣದ ಪ್ರಮಾಣ ಶೇ.1.59ರಷ್ಟಿದ್ದು 325 ಜನರು ವಿವಿಧ ಆಸ್ಪತ್ರೆಗಳ ತೀವ್ರ ನಿಗಾಘಟಕದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

5,05,416 ಮಂದಿಗೆ ಪರೀಕ್ಷೆ: ನಗರದಲ್ಲೀಗ ಒಟ್ಟು ಪಾಸಿಟಿವ್‌ ಪ್ರಮಾಣ ಶೇ.17.35 ಇದ್ದು, ಆಕ್ಟೀವ್‌ ರೇಟ್‌ ಶೇ.40 ರಷ್ಟಿದೆ. ಅಲ್ಲದೇ, ನಿನ್ನೆ 18,471 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಇದುವರಗೂ 5,05,416 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಹಾಗೆಯೇ ಒಟ್ಟು 34,077 ಕಂಟೈನ್ಮೆಂಟ್‌ ವಲಯವಿದ್ದು ಇದರಲ್ಲಿ 14,518 ಸಕ್ರಿಯ ಕಂಟೈನ್ಮೆಂಟ್‌ ವಲಯಗಳಿವೆ.

ನೀರಿನ ಅಭಾವದ ವಿಡಿಯೋ ಹರಿಬಿಟ್ಟ ಸೋಂಕಿತರು :  ನಗರದ ಹೊರವಲಯದ ನೆಲಮಂಗಲ ಸಮೀಪದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿನ ಕೋವಿಡ್‌ ಕೇಂದ್ರದಲ್ಲಿ ಇದೀಗ ಶುದ್ಧ ನೀರಿಗೂ ತೊಂದರೆ ಎದುರಾಗಿದೆ. ಕಂಟೇನರ್‌ ಕ್ಯಾನ್‌ಗಳಿಂದ ಸೋಂಕಿತರಿಗೆ ನೀರಿನ ವ್ಯವಸ್ಥೆ ಮಾಡಿದ್ದು, ಅವ್ಯವಸ್ಥೆ ಬಗ್ಗೆ ಕೋವಿಡ್ ಸೋಂಕಿತರು ವಿಡಿಯೋ ಮಾಡಿ ನೀರಿನ ಸಮಸ್ಯೆ ಬಗ್ಗೆ ನೋವು ತೋಡಿಕೊಂಡಿದ್ದಾರೆ. ಅಲ್ಲದೇ, ಶುದ್ಧ ನೀರಿನ ಬದಲು ಟ್ಯಾಂಕರ್‌ ನೀರು ಸರಬರಾಜು ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.