ಸೋಂಕು ಹೆಚ್ಚಾದರೂ, ಪಾಸಿಟಿವಿಟಿ ದರ ಕುಸಿತ

ಜುಲೈನಲ್ಲಿ ಶೇ.24 ಇದ್ದ ಪಾಸಿಟಿವಿಟಿ ದರ 12ಕ್ಕೆ ಇಳಿಕೆ

Team Udayavani, Sep 24, 2020, 1:22 PM IST

ಸೋಂಕು ಹೆಚ್ಚಾದರೂ, ಪಾಸಿಟಿವಿಟಿ ದರ ಕುಸಿತ

ಬೆಂಗಳೂರು: ನಗರದಲ್ಲಿ ನಿತ್ಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಜುಲೈನಿಂದೀಚೆಗೆ ಪ್ರಕರಣಗಳು ದುಪ್ಪಟ್ಟಾಗಿರಬಹುದು. ಆದರೆ, ಸೋಂಕು ಪರೀಕ್ಷೆಯ ಪಾಸಿಟಿವಿಟಿ ದರ ಮಾತ್ರ ಅರ್ಧಕ್ಕರ್ಧ ಕುಸಿದಿದೆ.

ಬೆಂಗಳೂರಿನಲ್ಲಿ ಜುಲೈ ಅಂತ್ಯಕ್ಕೆ 55 ಸಾವಿರ ಇದ್ದ ಕೋವಿಡ್ ಪ್ರಕರಣಗಳು, ಆಗಸ್ಟ್‌ ಅಂತ್ಯಕ್ಕೆ 1.29 ಲಕ್ಷ ತಲುಪಿದ್ದವು ‌. ಸದ್ಯ ಸೆಪ್ಟೆಂಬರ್‌ 22ಕ್ಕೆ ಎರಡು ಲಕ್ಷ ಗಡಿದಾಟಿವೆ. ಜುಲೈಗಿಂತಲೂ ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಸೋಂಕಿ ಗೊಳಗಾದವರ ಸಂಖ್ಯೆ ದುಪ್ಪಟ್ಟಾಗಿದೆ ಎಂಬ ಲೆಕ್ಕಾಚಾರವಿದೆ. ಇದಕ್ಕೆ ಸೋಂಕು ಪರೀಕ್ಷೆಗಳು ಮೂರು ಪಟ್ಟು ಹೆಚ್ಚಳವಾಗಿರುವುದು ಕಾರಣ ಎನ್ನಲಾಗುತ್ತಿದೆ. ಆದರೆ,ಇನ್ನೊಂದೆಡೆ” ಸೋಂಕಿನ ತೀವ್ರತೆಯು ಪ್ರಕರಣಗಳ ಸಂಖ್ಯೆಯನ್ನು ಆಧರಿಸುವುದಿಲ್ಲ. ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಆಧರಿಸಿರುತ್ತದೆ’ ಎಂದು ಆರೋಗ್ಯ ತಜ್ಞರು ಹೇಳುತ್ತಿದ್ದಾರೆ. ಈ ಪ್ರಕಾರ ಜುಲೈನಲ್ಲಿ ನಗರದಲ್ಲಿ ಶೇ.24 ರಷ್ಟಿದ್ದ ಸೋಂಕು ಪಾಸಿಟಿವಿಟಿ ದರ ಪ್ರಸ್ತುತ ಶೇ.12ಕ್ಕೆ ಕುಸಿದಿದೆ.

ಏನಿದು ಪಾಸಿಟಿವಿಟಿ ದರ?: ಸೋಂಕು ಪರೀಕ್ಷೆಯಲ್ಲಿ ಪಾಸಿಟಿವಿಟಿದರಎಂದರೆ,ಸೋಂಕುಪರೀಕ್ಷೆಗೊಳಪಟ್ಟವರ 100 ಮಂದಿಯಲ್ಲಿ ಪೈಕಿ ಶೇ. ಎಷ್ಟು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ (ಪಾಸಿಟಿವ್‌) ಎಂಬುದಾಗಿದೆ. ಬಿಬಿಎಂಪಿ ಬುಲಿಟಿನ್‌ ಪ್ರಕಾರ ಜುಲೈನಲ್ಲಿ ನಿತ್ಯ ಸರಾಸರಿ 7,223 ಮಂದಿಯ ಪರೀಕ್ಷೆಗೆ ಒಳಪಟ್ಟಿದ್ದಾರೆ.ಈಪೈಕಿ 1,736 ಮಂದಿಯಲ್ಲಿ ಪಾಸಿಟಿವ್‌ ವರದಿ ಬಂದಿದ್ದು, ಪಾಸಿಟಿವಿಟಿ ದರ ಶೇ.24.05 ಇತ್ತು. ಆಗಸ್ಟ್‌ನಲ್ಲಿ ಪರೀಕ್ಷೆ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳವಾಗಿದ್ದು, ನಿತ್ಯ ಸರಾಸರಿ 18,519 ಮಂದಿ ಪರೀಕ್ಷೆ ನಡೆದಿದೆ.ಈಪೈಕಿ 2,489 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ.13ಕ್ಕೆ ಕುಸಿದಿದೆ.

ಅರ್ಧದಷ್ಟು ಕಡಿಮೆ: ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ಸಂಖ್ಯೆ ಜೂನ್‌ಗಿಂತಲೂ ನಾಲ್ಕು ಪಟ್ಟು ನಡೆದಿವೆ. ನಿತ್ಯ ಸರಾಸರಿ ನಡೆದ 26,363 ಮಂದಿ ಪರೀಕ್ಷೆಗೊಳಗಾಗಿದ್ದು, 3,254 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪಾಸಿಟಿವಿಟಿ ದರ ಶೇ.12ಕ್ಕೆ ಇಳಿಕೆಯಾಗಿದೆ. ಜುಲೈಗಿಂತಲೂ ಪ್ರಕರಣಗಳು ದುಪ್ಪಟ್ಟಾದರೂ, ಪಾಸಿಟಿವಿಟಿ ದರ ಅರ್ಧದಷ್ಟುಕಡಿಮೆಯಾಗಿದೆ.

ಹತ್ತರಲ್ಲಿ ಒಬ್ಬರಿಗೆ ಸೋಂಕು! :  ಜುಲೈನಲ್ಲಿ ಪಾಸಿಟಿವಿ ದರ ಶೇ.24ರಷ್ಟಿತ್ತು. ಅಂದರೆ, ಸೋಂಕು ಪರೀಕ್ಷೆಗೊಳಗಾದರ ನಾಲ್ವರಲ್ಲಿ ಸರಾಸರಿ ಒಬ್ಬರಿಗೆ ಸೋಂಕು ದೃಢಪಡುತ್ತಿತ್ತು. ಪ್ರಸ್ತುತ ಪಾಸಿಟಿವಿಟಿ ದರ ಶೇ.12ಕ್ಕೆ ಇಳಿದ್ದು, ಪರೀಕ್ಷೆಗೊಳಗಾದರ 10 ಮಂದಿಯಲ್ಲಿ ಸರಾಸರಿ ಒಬ್ಬರಿಗೆ ಸೋಂಕು ದೃಢಪಡುತ್ತಿದೆ.

ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ :  ಬೆಂಗಳೂರು: ನಗರದಲ್ಲಿ ಬುಧವಾರ3,547 ಮಂದಿಗೆ ಕೋವಿಡ್  ತಗುಲಿದೆ. ಸೋಂಕು ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ3536 ಮಂದಿ ಗುಣಮುಖರಾಗಿದ್ದು,23 ಸೋಂಕಿತರ ಸಾವಾಗಿದೆ. ಈ ಮೂಲಕ ನಗರದ ಒಟ್ಟಾರೆ ಸೋಂಕು ಪ್ರಕರಣಗಳು2.04 ಲಕ್ಷಕ್ಕೆ ತಲುಪಿವೆ. ಈ ಪೈಕಿ ಈಗಾಗಲೇ1.61ಲಕ್ಷ ಮಂದಿ ಗುಣಮುಖರಾಗಿದ್ದು,2738 ಮಂದಿ ಮೃತಪಟ್ಟಿದ್ದಾರೆ. ಇಂದಿಗೂ 39,971 ಮಂದಿ

ಆಸ್ಪತ್ರೆ, ಮನೆಗಳಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಮಂಗಳವಾರಕ್ಕೆ ಹೋಲಿಸಿದರೆ ನಗರದಲ್ಲಿ ಸೋಂಕು ಪ್ರಕರಣಗಳು400 ಹೆಚ್ಚಳ ವಾಗಿದ್ದು, ಗುಣಮುಖರು 400ಕಡಿಮೆಯಾಗಿದ್ದಾರೆ. ಇದರಿಂದಾಗಿ ಸಕ್ರಿಯ ಸೋಂಕು ಪ್ರಕರಣಗಳು ತುಸು ಏರಿಕೆಯಾಗಿವೆ. ಸೋಂಕಿತರ ಸಾವು ಒಂದು ಹೆಚ್ಚಳವಾಗಿದೆ.24051 ಸೋಂಕು ಪ್ರಕರಣಗಳು ನಡೆದಿದ್ದು, ಒಟ್ಟಾರೆ ಪರೀಕ್ಷೆಗಳ ಸಂಖ್ಯೆ 14.8 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ನಗರದ ಗುಣಮುಖ ದರ ಶೇ. 79.1, ಮರಣ ದರ ಶೇ.1.34, ಸಕ್ರಿಯ ಪ್ರಕರಣಗಳು ಶೇ.19.5 ರಷ್ಟಿದೆ.

ಎರಡು ತಿಂಗಳಿಂದ ಸೋಂಕು ಪರೀಕ್ಷೆಗಳು ಹೆಚ್ಚಳವಾಗುತ್ತಿದ್ದು, ಅಂತೆಯೇ ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗಿವೆ. ಆದರೆ, ಪರೀಕ್ಷೆಯಲ್ಲಿ ಸೋಂಕು ದೃಢವಾಗುತ್ತಿರುವ ಪ್ರಮಾಣ ಮೊದಲಿಗಿಂತಲೂ ಕಡಿಮೆಯಾಗಿದೆ.ನಗರದಲ್ಲಿ ನಡೆಯುತ್ತಿರುವಕೊರೊನಾ ಪರೀಕ್ಷೆಗಳಲ್ಲಿ ಶೇ.12 ಪಾಸಿಟಿವಿಟಿ ದರವಿದ್ದು, ಅದು ಶೇ.5ಕ್ಕಿಂತಲೂ ಕಡಿಮೆ ಬರಬೇಕು. ಆಗ ಮಾತ್ರ ಸೋಂಕು ನಿಯಂತ್ರಣದಲ್ಲಿದೆ ಎಂದರ್ಥ. ಡಾ.ವಿ.ರವಿ, ಮುಖ್ಯಸ್ಥರು, ವೈರಾಲಜಿ ವಿಭಾಗ ನಿಮ್ಹಾನ್ಸ್‌

 

-ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.