ವಾರದ ಹಿಂದೆ ನಗರಕ್ಕೆ ಬಂದಿಳಿದವರ ಶೋಧ..!


Team Udayavani, Nov 30, 2021, 11:45 AM IST

covid awarness

Representative Image used

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಪ್ರಕರಣ ಗಳ ಹೆಚ್ಚಳ ಹಾಗೂ ಒಮಿಕ್ರಾನ್‌ ಭೀತಿ ಉಂಟಾದ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ತಪಾಸಣೆ ಚುರುಕುಗೊಳಿಸಿದ್ದು, ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡುವ ಹೊರ ರೋಗಿಗಳು ಮತ್ತು ಒಮಿಕ್ರಾನ್‌ ಹಾವಳಿ ಇರುವ ದೇಶಗಳಿಂದ ವಾರದ ಹಿಂದೆ ಬಂದಿಳಿದವರ ಶೋಧ ಕಾರ್ಯ ನಡೆಸಿದೆ.

ಈಗಾಗಲೇ ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ ವ್ಯಕ್ತಿಯೊಂದಿಗಿನ ಪ್ರಾಥಮಿಕ ಸಂಪರ್ಕ ಹೊಂದಿದ್ದ 15 ಜನರನ್ನು ಪತ್ತೆಹಚ್ಚಿ, ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಜತೆಗೆ ವರದಿ ಬರುವವರೆಗೆ ಕ್ವಾರಂಟೈನ್‌ ಮಾಡಲಾಗಿದೆ. ಈ ಮಧ್ಯೆ ಏಳು ದಿನಗಳ ಹಿಂದೆ ದಕ್ಷಿಣ ಆಫ್ರಿಕಾ, ಹಾಂಗ್‌ ಕಾಂಗ್‌, ಇಟಲಿ, ಬ್ರಿಟನ್‌, ಜರ್ಮನಿ, ಇಸ್ರೇಲ್‌, ಬೆಲ್ಜಿಯಂ ಸೇರಿದಂತೆ ಒಟ್ಟಾರೆ 12 ದೇಶಗಳಿಂದ ಬಂದವರ ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ.

ಇದುವರೆಗೆ (ಏಳು ದಿನಗಳಲ್ಲಿ) ಸುಮಾರು 96 ಜನ ಇದ್ದು, ದಕ್ಷಿಣ ಆಫ್ರಿಕಾದಿಂದ ನಗರಕ್ಕೆ ಬಂದವರೇ ಅಂದಾಜು 80. ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 35 ಜನ ಇದ್ದಾರೆ ಎನ್ನಲಾಗಿದೆ. ಇತರೆ ದೇಶಗಳಿಂದ ಬಂದವರೂ ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ;- ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ಅವರ ವಿಳಾಸ ಮತ್ತು ಫೋನ್‌ ನಂಬರ್‌ ಅನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಗ್ರಹಿಸಲಾಗಿದ್ದು, ಎಲ್ಲ ವಲಯಗಳ ಆರೋಗ್ಯಾಧಿಕಾರಿಗಳಿಗೆ ಕಳುಹಿಸಲಾಗಿದೆ. ಅದೇ ರೀತಿ, ನಿತ್ಯ ವಿಮಾನ ನಿಲ್ದಾಣದಿಂದ ವಿದೇಶದಿಂದ ಬಂದಿಳಿದವರ ಒಂದು ಪಟ್ಟಿ ಪಾಲಿಕೆಗೆ ಬರಲಿದ್ದು, ಅವರ ಆರ್‌ ಟಿಪಿಸಿಆರ್‌ ಪರೀಕ್ಷೆ ನಿಯಮಿತವಾಗಿ ನಡೆಯಲಿದೆ.

ಒಂದು ವೇಳೆ ಪಾಸಿಟಿವ್‌ ಬಂದರೆ, ವೈರಸ್‌ ಲೋಡ್‌ ನೋಡಿಕೊಂಡು ಜಿನೋಮ್‌ ಸಿಕ್ವೆನ್ಸಿಂಗ್‌ಗೆ ಕಳುಹಿಸಲಾ ಗುತ್ತದೆ. ಬೆನ್ನಲ್ಲೇ ಪ್ರಾಥಮಿಕ ಸೋಂಕಿತರ ಪತ್ತೆ ಕಾರ್ಯ ಶುರುವಾಗುತ್ತದೆ. ಆದರೆ, ಸದ್ಯಕ್ಕೆ ಇದುವರೆಗೆ ಒಮಿಕ್ರಾನ್‌ ಇರುವ ಬಗ್ಗೆ ಯಾವುದೇ ಪ್ರಕರಣ ದೃಢಪಟ್ಟಿಲ್ಲ ಎಂದು ಬಿಬಿಎಂಪಿ ಉನ್ನತ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಸ್ಪಷ್ಟಪಡಿಸಿದರು. ”

ಸಾಮಾನ್ಯವಾಗಿ ವಿದೇಶಗಳಿಂದ ಅದರಲ್ಲೂ ಒಮಿಕ್ರಾನ್‌ ಹಾವಳಿ ಹೆಚ್ಚಿರುವ ಇಟಲಿ, ಜರ್ಮನಿ, ನೆದರ್‌ಲ್ಯಾಂಡ್‌ ಮತ್ತಿತರ ದೇಶಗಳಿಂದ ಇಲ್ಲಿಗೆ ನೇರ ವಿಮಾನ ಸೇವೆ ಇಲ್ಲ. ಬಹುತೇಕ ಕನೆಕ್ಟಿಂಗ್‌ ಫ್ಲೈಟ್‌ ಆಗಿವೆ. ಇಂಗ್ಲೆಂಡ್‌ ಸೇರಿದಂತೆ ಯೂರೋಪಿಯನ್‌ ದೇಶಗಳಿಂದ ಇಲ್ಲಿಗೆ ಅಧಿಕ ಸಂಖ್ಯೆಯಲ್ಲಿ ಬರುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ಸಂಖ್ಯೆಯೂ ಕಡಿಮೆಯಾಗಿದ್ದು, ದಿನಕ್ಕೆ ಹತ್ತು ಜನರೂ ಇರುವುದಿಲ್ಲ’ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ಸ್ಪಷ್ಟಪಡಿಸಿವೆ.

 ಖಾಸಗಿ ಆಸ್ಪತ್ರೆ ರೋಗಿಗಳಿಗೂ ಕೋವಿಡ್‌ ಟೆಸ್ಟ್‌!: ಈ ಮಧ್ಯೆ ಕೆಲ ದಿನಗಳಿಂದ ತಪಾಸಣೆ ಮತ್ತಷ್ಟು ಚುರುಕುಗೊಳಿಸಿರುವ ಪಾಲಿಕೆ, ಗಲ್ಲಿ ಕ್ಲಿನಿಕ್‌ಗಳು, ಖಾಸಗಿ ಆಸ್ಪತ್ರೆಗಳಿಗೆ ಶೀತ, ಕೆಮ್ಮು, ಜ್ವರ, ತೀವ್ರ ಉಸಿರಾ ಟದ ತೊಂದರೆ ಹಿನ್ನೆಲೆಯಲ್ಲಿ ಬರುವ ರೋಗಿಗಳನ್ನೂ ಕೋವಿಡ್‌-19 ಪರೀಕ್ಷೆಗೊಳಪಡಿಸುತ್ತಿದೆ.

ಆಯಾ ವಲಯಗಳ ಆರೋಗ್ಯ ಅಧಿಕಾರಿಗಳು ಸ್ಥಳೀಯ ಸಿಬ್ಬಂದಿ ನೆರವಿನೊಂದಿಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ಕ್ಲಿನಿಕ್‌ಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ, ಸಾರಿ (ತೀವ್ರ ಉಸಿರಾಟದ ಸಮಸ್ಯೆ), ಐಎಲ್‌ಐ (ವಿಷಮಶೀತ ಜ್ವರ) ಒಳಗೊಂಡಂತೆ ಕೊರೊನಾ ಸೋಂಕಿಗೆ ಪೂರಕ ವಾದ ಲಕ್ಷಣಗಳಿರುವ ಹೊರರೋಗಿಗಳ ಪಟ್ಟಿಯನ್ನು ಪಡೆಯುತ್ತಿದೆ. ಅವರಿಗೆ ನಂತರ ಫೋನಾಯಿಸಿ, ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿ ಸಲಾಗುತ್ತಿದೆ. ಈಗಾಗಲೇ ಹೀಗೆ ನೂರಾರು ಹೊರ ರೋಗಿಗಳನ್ನು ಪರೀಕ್ಷೆಗೊಳ ಪಡಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ದಕ್ಷಿಣ ಆಪ್ರಿಕಾದಿಂದ ಇಲ್ಲಿಗೆ ಬಂದಿಳಿದವರ ಪಟ್ಟಿ ತರಿಸಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಇಂಥ ಸುಮಾರು 30 ಜನ ಇರಬಹುದು. ಅವರೆಲ್ಲರನ್ನೂ ಪರೀಕ್ಷೆಗೊಳಪಡಿ ಸಲಾಗುವುದು. ಅದೇ ರೀತಿ, ಇತರೆ ದೇಶಗಳಿಂದ ಬಂದವರ ಬಗ್ಗೆಯೂ ನಿಗಾ ಇಡಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡುವ ಹೊರರೋಗಿಗಳನ್ನೂ ಪರೀಕ್ಷೆಗೊಳಪಡಿಸಲಾಗುತ್ತಿದೆ. – ಕೆ.ವಿ. ತ್ರಿಲೋಕ್‌ ಚಂದ್ರ, ವಿಶೇಷ ಆಯುಕ್ತರು (ಆರೋಗ್ಯ), ಬಿಬಿಎಂಪಿ.

– ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.