ಚಿತಾಗಾರ ಸಿಬ್ಬಂದಿ ಕಣ್ಣಲ್ಲೂ ನೀರು ತರಿಸುತ್ತಿದೆ ಕೋವಿಡ್


Team Udayavani, Apr 21, 2021, 1:19 PM IST

covid effect

ಬೆಂಗಳೂರು: ರಾಜಧಾನಿಯ ಬಹುತೇಕ ಚಿತಾಗಾರದ ಮುಂದೆ ಸಾಲು ನಿಂತಿದ್ದ ಆ್ಯಂಬುಲೆನ್ಸ್‌ ಗಳು.ಅದರೊಳಗೆ ಕೊರೊನಾ ಸೋಂಕಿನಿಂದ ಜೀವ ಕಳೆದುಕೊಂಡ ಮೃತ ದೇಹಗಳು. ಶವವೊಂದರ ಅಂತ್ಯಸಂಸ್ಕಾರಕ್ಕೆ ಒಂದು ಗಂಟೆಗೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದ ಸಿಬ್ಬಂದಿ.

ಅಲ್ಲಿಯವರೆಗೂ ಸಂಬಂಧಿಕರ ಆಕ್ರಂದನ…ಇನ್ನೊಂದೆಡೆ ಚಿತಾಗಾರಗಳಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ ದಿನ ಕಳೆಯುವುದರೊಳಗೆ ಎಲ್ಲಾ ಶವಗಳ ಅಂತ್ಯಸಂಸ್ಕಾರ ಸಾಧ್ಯವೇ? ಎಂಬ ಚಿಂತೆಯಲ್ಲಿಯೇಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಕ ಸಿಬ್ಬಂದಿ ಮತ್ತು ಚಿತಾಗಾರದ ನೌಕರರು…’ ಇದುನಗರದ ಬಹುತೇಕ ಚಿತಾಗಾರಗಳ ಬಳಿ ಕಂಡುಬಂದ ದೃಶ್ಯ. ಸ್ಮಶಾನದಲ್ಲಿ ಕೆಲಸ ಮಾಡುವವರು ನಿತ್ಯಶವಗಳನ್ನು ನೋಡುತ್ತಿರುತ್ತಾರೆ.

ಅವರಿಗೆ ಭಾವನೆಗಳೇ ಇಲ್ಲ ಎನ್ನು ತ್ತಾರೆ ಹಲವರು. ಯಾರೋ ಶವವನ್ನು ಇವರು ಅಂತ್ಯಸಂಸ್ಕಾರ ನೆರವೇರಿಸುವುದನ್ನು ಕೇವಲ ಒಂದು ಕರ್ತವ್ಯ ಎಂಬಂತೆ ಮಾಡುತ್ತಿರುತ್ತಾರೆ. ಆದರೆ,ಅವರ ಕಣ್ಣಲ್ಲೂ ನೀರು ಬರುತ್ತಿದೆ ಎಂಬುದು ಗೊತ್ತಿದೆಯೇ? ಹೌದು, ನಗರದ ವಿವಿಧಚಿತಾಗಾರ ದಲ್ಲಿ ಕೋವಿಡ್‌ ಸೋಂಕಿನಿಂದ ಸಾವನ್ನಪ್ಪಿದ ಮೃತದೇಹಗಳ ಶವಸಂಸ್ಕಾರ ಮಾಡುವ ನೌಕರರ ಕಣ್ಣಂಚಲ್ಲೂ ನೀರು ತರಿಸುತ್ತಿರುವ ದೃಶ್ಯ ಮನಕಲಕುತ್ತಿದೆ.

“ಸದ್ಯ ಪರಿಸ್ಥಿತಿ ತುಂಬಾ ಕಷ್ಟ ಇದೆ ಸರ್‌…ನಗರದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ನಿತ್ಯ ಹೆಚ್ಚುತ್ತಿದೆ. ಚಿತಾಗಾರಕ್ಕೆ ಆ್ಯಂಬುಲೆನ್ಸ್‌ನಲ್ಲಿ ಸಾಲು ಮೃತದೇಹ ಬರುತ್ತಿವೆ. ಮೃತರ ಸಂಬಂಧಿಕರು ಯಾರೂ ಇಲ್ಲ. ನಾವೇ ಅಂತಿಮ ವಿಧಿ-ವಿಧಾನಗಳನ್ನು ಪೂರೈಸಿ, ಶವ ಸಂಸ್ಕಾರ ಮಾಡುತ್ತಿದ್ದೇವೆ. ನಾವು ಶವವನ್ನು ಚಿತಾಗಾರದ ಒಳಗಡೆ ಕೊಂಡೊಯ್ಯುವಾಗ ಸಂಬಂಧಿಕರು ಗೇಟ್‌ ಹೊರಗಿನಿಂದಲೇ ಶವಕ್ಕೆ ನಮಿಸಿ ಕಣ್ಣೀರಿಡುತ್ತಾರೆ. ಆ ದೃಶ್ಯ ಕಂಡಾಗ ಕಣ್ಣಂಚಲ್ಲಿ ನೀರು ಬರುತ್ತದೆ ಸರ್‌..

‘ಹೀಗೆ.. ಚಿತಾಗಾರದಲ್ಲಿ ಸೋಂಕಿತರ ಮೃತದೇಹಗಳಿಗೆ ಅಂತಿಮ ವಿಧಿ ವಿಧಾನಗಳನ್ನು ಪೂರೈಸಿ, ಶವಸಂಸ್ಕಾರ ಮಾಡುವ ಪುಣ್ಯ ಕಾರ್ಯ ನಿರ್ವಹಿಸುತ್ತಿರುವ ಚಿತಾಗಾರದ ನೌಕರರು, ತಮ್ಮ ಮನದಾಳದ ಮಾತನ್ನುಹೊರ ಹಾಕಿದ ಪರಿ ಇದು.ಶವ ಸಂಸ್ಕಾರಕ್ಕೆ 8 ಗಂಟೆ ಕಾಯಬೇಕು: “ಕೊರೊನಾಸೋಂಕಿತರ ಸಾವಿನ ಸಂಖ್ಯೆ ನಿತ್ಯ ಹೆಚ್ಚಾಗುತ್ತಿದ್ದು,ಸೋಮವಾರ ಒಂದೇ ದಿನ ನಗರದಲ್ಲಿ 97 ಜನ ಸಾವನ್ನಪ್ಪಿದ್ದಾರೆ.

ಒಂದು ಶವ ಸಂಸ್ಕಾರಕ್ಕೆ ಸಂಬಂಧಿಕರು 7ರಿಂದ 8 ಗಂಟೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ.ಇಲ್ಲಿ ಒಂದು ಮಷಿನ್‌ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಬಿಬಿಎಂಪಿ ಅಧಿಕಾರಿಗಳು ಎಲ್ಲಾ ಸೌಲಭ್ಯಗಳನ್ನುಕೊಟ್ಟಿದ್ದೇವೆ ಎನ್ನುತ್ತಾರೆ. ಆದರೆ, ಇಲ್ಲಿನ ಪರಿಸ್ಥಿತಿಬೇರೆಯೇ ಇದೆ. ಮೃತಪಟ್ಟವರ ಸಂಬಂಧಿಕರುಯಾರೂ ಇಲ್ಲ. ಹೀಗಾಗಿ, ನಾವೇ ಅಂತ್ಯ ಸಂಸ್ಕಾರಮಾಡು ತ್ತಿದ್ದೇವೆ. ಎಲ್ಲರೂ ಕೊರೊನಾ ಬಗ್ಗೆ ಎಚ್ಚರವಹಿಸಬೇಕು’ ಎಂದು ಸುಮನಹಳ್ಳಿ ಚಿತಾಗಾರದಸ್ವಯಂ ಸೇವಕ ಸಿಬ್ಬಂದಿ ಶಿವನಗೌಡ ಬಿರಾದರ್‌ ವಾಸ್ತವ ಸ್ಥಿತಿ ಬಿಚ್ಚಿಟ್ಟಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ಟೋಕನ್‌: “ನಿತ್ಯ ಚಿತಾಗಾರಕ್ಕೆಒಮ್ಮೆಲೆ, ಆರಕ್ಕೂ ಹೆಚ್ಚು ಮೃತದೇಹ ಬರುತ್ತಿವೆ. ಹೀಗಾಗಿ, ಮೃತರ ಸಂಬಂಧಿಕರು ಹೆಚ್ಚು ಸಮಯ ಕಾಯಬೇಕಾಗಿದೆ. ಒಮ್ಮೆ ಎರಡು ಶವಗಳನ್ನು ಮಾತ್ರಬರ್ನ್ ಮಾಡಬಹುದು. ಇನ್ನೂ ನಾಲ್ಕು ಶವಗಳನ್ನುತಂದವರು ಕಾಯಬೇಕಿರುವುದು ಅನಿವಾರ್ಯ. ಒಂದು ಬಾಡಿ ಬರ್ನ್ಗೆ 1ರಿಂದ 2 ಗಂಟೆ ಸಮಯವಾಗುತ್ತದೆ. ಹಿಂದುಳಿದು ಬಂದವರು ನಮ್ಮ ಶವವನ್ನುಮೊದಲು ಬರ್ನ್ ಮಾಡಿ ಎಂದು ಒತ್ತಡ ಹಾಕುತ್ತಾರೆ.ಹೀಗಾಗಿ, ಟೋಕನ್‌ ನೀಡಲಾಗುತ್ತಿದೆ’ ಎಂದುಸುಮನ ಹಳ್ಳಿ ಚಿತಾಗಾರದ ಸಿಬ್ಬಂದಿ ರವಿ ತಿಳಿಸಿದ್ದಾರೆ.

ಶವ ಸಂಸ್ಕಾರಕ್ಕೆ ಬರುವ ಸಂಬಂಧಿಕರಿಗೂ ಭಯ:ನಗರದ ಸುಮನಹಳ್ಳಿ ಚಿತಾಗಾರದ ಆವರಣದಲ್ಲಿಎಲ್ಲೆಂ ದರಲ್ಲೆ, ಪಿಪಿಇ ಕಿಟ್‌, ಕೈಗವಸು ಬಿದ್ದಿವೆ. ಇದರಿಂದ ಶವ ಸಂಸ್ಕಾರಕ್ಕೆಂದು ಚಿತಾಗಾರಕ್ಕೆ ಬರುವಸಂಬಂಧಿಕರಿಗೂ ಸೋಂಕು ತಗಲುವ ಭೀತಿ ಉಂಟಾಗಿದೆ. ಕೊರೊನಾ ಆ್ಯಂಬುಲೆನ್ಸ್‌ ಸಿಬ್ಬಂದಿ ಸಹ ಪಿಪಿಇಕಿಟ್‌, ಕೈಗವಸು ಮತ್ತು ಸರಿಯಾಗಿ ಮಾಸ್ಕ್ ಧರಿಸುತ್ತಿಲ್ಲ. ಚಿತಾಗಾರದ ಸಿಬ್ಬಂದಿಗೆ ಕೋವಿಡ್‌, ದೇಹದಉಷ್ಣಾಂಶ ಪರೀಕ್ಷೆ ನಡೆಸುತ್ತಿಲ್ಲ. ಹೀಗಾಗಿ, ಸಂಬಂಧಿಕರು ಗೇಟ್‌ನಿಂದ ಹೊರಗೆ ನಿಂತು ಶವ ಸಂಸ್ಕಾರಮುಗಿಸಿ ಹಿಂದಿರುಗುತ್ತಿದ್ದಾರೆ ಎಂದು ಮೃತರಸಂಬಂಧಿ ಕರೊಬ್ಬರು ತಿಳಿಸಿದ್ದಾರೆ.

ವಿಕಾಸ್‌ ಆರ್‌. ಪಿಟ್ಲಾಲಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.