ರಾಜ್ಯದಿಂದ ಕೇಂದ್ರಕ್ಕೆ 12 ಐಎಸ್‌ಒ ಕಂಟೈನರ್‌ಗಳಿಗೆ ಬೇಡಿಕೆ


Team Udayavani, May 10, 2021, 3:17 PM IST

covid effect

ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆಯಾಗುತ್ತಿದ್ದರೂ, ಅದರ ಪೂರೈಕೆಯಲ್ಲಿ ತುಸು ವಿಳಂಬವಾಗುತ್ತಿರುವುದರಿಂದ ರೈಲುಮಾರ್ಗಗಳ ಮೂಲಕ ಸರಬರಾಜು ಮಾಡಲುಸರ್ಕಾರ ಚಿಂತನೆ ನಡೆಸಿದೆ.

ಈ ಸಂಬಂಧ ವಿಶಿಷ್ಟ ಮಾದರಿಯ ಅಂದರೆಐಎಸ್‌ಒ  ಮಾದರಿಯ 12ಕಂಟೈನರ್‌ಗಳಿಗಾಗಿ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿದ್ದು,ಮಂಜೂರು ಮಾಡುವ ನಿರೀಕ್ಷೆ ಇದೆ. ಒಂದು ವೇಳೆ ಈ ಐಎಸ್‌ಒ ಟ್ಯಾಂಕರ್‌ಗಳುಮಂಜೂರಾದರೆ, ಈಗ ಸರಬರಾಜು ಆಗುತ್ತಿರುವಸಮಯಕ್ಕಿಂತ ದುಪ್ಪಟ್ಟು ವೇಗದಲ್ಲಿ ಆಮ್ಲಜನಕಸಾಗಿಸಲು ಸಾಧ್ಯವಾಗಲಿದೆ. ಉದಾಹರಣೆಗೆ ಕಳಿಂಗದಿಂದ ನಿತ್ಯ ಸುಮಾರು 60 ಟನ್‌ ಆಮ್ಲಜನಕ ರಾಜ್ಯಕ್ಕೆ ಮಂಜೂರಾಗಿದೆ.

ಇದು ರಸ್ತೆ ಮೂಲಕ ತಲುಪಲು ಮೂರು ದಿನಗಳು ಹಿಡಿಯುತ್ತದೆ. ಆದರೆ, ರೈಲು ಮಾರ್ಗವಾಗಿ ರಾತ್ರೋರಾತ್ರಿ ಬಂದುಬಿಡುತ್ತದೆ ಎಂದು ಆಮ್ಲಜನಕ ಪೂರೈಕೆ ಉಸ್ತುವಾರಿ ತಂಡದಲ್ಲಿರುವ ಉನ್ನತ ಅಧಿಕಾರಿಯೊಬ್ಬರು ಉದಯವಾಣಿಗೆ ಮಾಹಿತಿನೀಡಿದರು. ಐಎಸ್‌ಒ ಕಂಟೈನರ್‌ನಲ್ಲಿ ಬರುವ ಆಮ್ಲಜನಕವನ್ನು ನಂತರ ಕ್ರಯೋಜನಿಕ್‌ ಟ್ಯಾಂಕರ್‌ಗಳಿಗೆ ಶಿಫ್ಟ್ ಮಾಡಲಾಗುತ್ತದೆ. ಆ ಮೂಲಕ ನಾನಾ ಭಾಗಗಳಿಗೆ ಪೂರೈಸಲಾಗುತ್ತದೆ.

ಐಎಸ್‌ಒ ಟ್ಯಾಂಕರ್‌ ಮೊರೆ ಯಾಕೆ?

ಸಾಮಾನ್ಯವಾಗಿ ರಸ್ತೆ ಮೂಲಕ ಪೂರೈಸ ಲಾಗುವ ಆಮ್ಲಜನಕ ಟ್ಯಾಂಕರ್‌ಗಳು ಸುರಕ್ಷತೆ ದೃಷ್ಟಿಯಿಂದ ಗಂಟೆಗೆ ಗರಿಷ್ಠ 50 ಕಿ.ಮೀ. ವೇಗದಲ್ಲಿ ಸಂಚರಿಸುತ್ತವೆ. ‌ ಅಲ್ಲದೆ,ರಾತ್ರಿ 11ರಿಂದ ಬೆಳಗಿನಜಾವ 5ರವರೆಗೆ ಕಡ್ಡಾಯವಾಗಿ ಕಾರ್ಯಾಚರಣೆ ನಿಷಿದ್ಧ. ಯಾಕೆಂದರೆ, ಅದು ಮಲಗುವ ಸಮಯ.ಆದರೆ, ಐಎಸ್‌ಒ ಟ್ಯಾಂಕರ್‌ಗಳು ರೈಲು ಎಂಜಿನ್‌ಗೆ ಜೋಡಣೆ ಮಾಡಲಾಗಿರುತ್ತದೆ. ಗಂಟೆಗೆ ಸರಾಸರಿ 100 ಕಿ.ಮೀ. ವೇಗದಲ್ಲಿ ಪೂರೈಕೆ ಆಗುತ್ತವೆ. ಈ ವೇಗದಲ್ಲಿ ಕಂಟೈನರ್‌ಗಳು ಬರುವುದರಿಂದ ಹೆಚ್ಚು ಒತ್ತಡ ಉಂಟಾಗುತ್ತದೆ. ಪರಿಣಾಮ ಆಮ್ಲಜನಕ ಗುಣಮಟ್ಟವೂ ಉತ್ತಮವಾಗಿರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಜತೆಗೆ ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಅವಧಿಯಲ್ಲಿ ಸರಬರಾಜು ಆಗುತ್ತದೆ. ಸದ್ಯ ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಹಾಹಾಕಾರ ಉಂಟಾಗಿರುವುದರಿಂದ ಹೆಚ್ಚು ಉಪಯುಕ್ತ ಆಗಲಿದೆ ಎಂದೂ ತಜ್ಞರು ತಿಳಿಸಿದರು.

ಈಚೆಗೆ ಬಹ್ರೆನ್‌ನಿಂದ 80 ಮೆಟ್ರಿಕ್‌ ಟನ್‌ ಆಮ್ಲಜನಕ ರಾಜ್ಯದ ಕರಾವಳಿ ಮೂಲಕ ಬಂದಿಳಿಯಿತು. ಇಲ್ಲಿ ಆಮ್ಲಜನಕಕ್ಕಿಂತ ಹೆಚ್ಚಾಗಿ ನಾಲ್ಕು ಕಂಟೈನರ್‌ಗಳು ಬಂದಿವೆ. ಇದು ನಮಗೆ ಪ್ರಸ್ತುತ ಸಂದರ್ಭದಲ್ಲಿ ಅತಿ ಮುಖ್ಯವಾಗಿದೆ.ಇದರೊಂದಿಗೆ ಕೇಂದ್ರದಿಂದಲೂ 12 ಕಂಟೈನರ್‌ಗಳು ಮಂಜೂರಾದರೆ ಇನ್ನಷ್ಟು ಅನುಕೂಲ ಆಗಲಿದೆ ಎಂದು ಅಧಿಕಾರಿಗಳು ವಿವರಿಸಿದರು.

730ಮೆ.ಟ. ರಾಜ್ಯಕ್ಕೆ ಹಂಚಿಕೆ

ರಾಜ್ಯದಲ್ಲಿ ಜಿಂದಾಲ್‌ನ 1,400 ಮೆ.ಟ. ಸೇರಿ ಒಟ್ಟಾರೆ ಸುಮಾರು 1,830 ಮೆ.ಟ. ಆಮ್ಲಜನಕಉತ್ಪಾದನೆಯಾಗುತ್ತಿದ್ದು, ಇದು ದಕ್ಷಿಣ ಏಷಿಯಾದಲ್ಲಿ ಅತ್ಯಧಿಕ ಉತ್ಪಾದನೆಯಾಗಿದೆ. ಈಪೈಕಿ 730 ಮೆ.ಟ. ರಾಜ್ಯಕ್ಕೆ ಹಂಚಿಕೆಯಾಗಿದೆ.ಉಳಿದಿದ್ದರಲ್ಲಿ ನೆರೆಯ ರಾಜ್ಯಗಳಿಗೆ ಪೂರೈಕೆ ಆಗುತ್ತಿದೆ.

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.