ಸೋಂಕಿತರು ಬೆಂಗಳೂರಿನಿಂದ ಗುಳೆ


Team Udayavani, Apr 26, 2021, 1:31 PM IST

covid effect at bangalore

ಎಚ್‌.ಕೆ. ನಟರಾಜ

ದಾವಣಗೆರೆ: ಬೆಂಗಳೂರಿನಲ್ಲಿ ಕೊರೊನಾರ್ಭಟ ಹೆಚ್ಚಾಗಿ ಆಸ್ಪತ್ರೆಗಳಲ್ಲಿ ಬೆಡ್‌, ವೆಂಟಿಲೇಟರ್‌, ಐಸಿಯು ಕೊರತೆ ಹಿನ್ನೆಲೆಯಲ್ಲಿ ರಾಜಧಾನಿಯ ಕೊರೊನಾ ಸೋಂಕಿತರು ಚಿಕಿತ್ಸೆಗಾಗಿ ಹೊರ ಜಿಲ್ಲೆಗಳತ್ತ ಹೆಜ್ಜೆ ಇಟ್ಟಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಹೆಚ್ಚಿಸಲಾಗುತ್ತಿದೆ. ವೆಂಟಿಲೇಟರ್‌ ವ್ಯವಸ್ಥೆಯತ್ತ ಗಮನಹರಿಸಲಾಗುತ್ತಿದೆ ಎಂದು ಸರ್ಕಾರ ಹೇಳುತ್ತಿದ್ದರೂ ಜನರು ಮಾತ್ರ ಬೆಂಗಳೂರಿನಲ್ಲಿ ಕೊರೊನಾ ಚಿಕಿತ್ಸೆ ಅಷ್ಟು ಸುಲಭವಾಗಿ ಸಿಗುತ್ತಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು ಹೊರ ಜಿಲ್ಲೆಗಳ ಆಸ್ಪತ್ರೆಗಳಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.

ಇದರಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿಯೂ ಬೆಂಗಳೂರಿನ ಸೋಂಕಿತರು ಹೆಚ್ಚಾಗಿದ್ದಾರೆ. ಕೊರೊನಾ ಪಾಸಿಟಿವ್‌ ಬಂದವರಲ್ಲಿ ಅನೇಕರು, ತುರ್ತುಚಿಕಿತ್ಸೆ ಅಗತ್ಯವಿದ್ದವರು ಸೋಂಕಿತರು ಕಡಿಮೆ ಇರುವ ಮತ್ತು ವೆಂಟಿಲೇಟರ್‌ ವ್ಯವಸ್ಥೆ ಇರುವ ವಿವಿಧ ಜಿಲ್ಲೆಗಳ ಆಸ್ಪತ್ರೆ ಮಾಹಿತಿ ಪಡೆದುಕೊಂಡು ಹತ್ತಿರದ ಇಲ್ಲವೇ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಬರುವ ತುಮಕೂರು, ಮೈಸೂರು,ಮಂಡ್ಯ, ಮಂಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡಜಿಲ್ಲೆಯವರೆಗೂ ಪ್ರಯಾಣ ಬೆಳೆಸುತ್ತಿದ್ದಾರೆ. ಈಗಾಗಲೇ ನೂರಾರು ಜನರು ಹೊರ ಜಿಲ್ಲೆಗಳಲ್ಲಿ ದಾಖಲಾಗಿದ್ದು, ಇವರಲ್ಲಿ ವೆಂಟಿಲೇಟರ್‌ ಅಗತ್ಯವಿರುವ ರೋಗಿಗಳ ಸಂಖ್ಯೆಯೇ ಅಧಿಕವಾಗಿರುವುದು ಗಮನಾರ್ಹ.

ಸುಳ್ಳು ವಿಳಾಸ: ಬೆಂಗಳೂರಿನಿಂದ ಚಿಕಿತ್ಸೆಗಾಗಿ ಹೊರ ಜಿಲ್ಲೆಗೆ ಹೋಗುತ್ತಿರುವ ರೋಗಿಗಳು ತಮ್ಮ ಸಂಬಂಧಿಗಳ ಸ್ಥಳೀಯ ವಿಳಾಸ, ಇಲ್ಲವೇ ಸುಳ್ಳು ಸ್ಥಳೀಯ ವಿಳಾಸ ನೀಡಿ ಚಿಕಿತ್ಸೆಗೆ ದಾಖಲಾಗುತ್ತಿರುವುದು ಬೆಳಕಿಗೆ ಬಂದಿದೆ. ತುರ್ತುಚಿಕಿತ್ಸೆಯ ಅಗತ್ಯದೊಂದಿಗೆ ಬಂದಿರುವ ರೋಗಿಗಳನ್ನುಹೆಚ್ಚಿನ ವಿಚಾರಣೆ ಮಾಡದೆ ತಕ್ಷಣ ಚಿಕಿತ್ಸೆ ನೀಡಲು ಮುಂದಾಗುತ್ತಿರುವುದರಿಂದ ಆರಂಭದಲ್ಲಿ ವಿಳಾಸದ ಬಗ್ಗೆ ಯಾರೂ ಗಂಭೀರವಾಗಿ ಪರಿಗಣಿಸಿಲ್ಲ. ಆದರೆ ದಿನದಿಂದ ದಿನಕ್ಕೆ ಬೆಂಗಳೂರಿನ ರೋಗಿಗಳೇ ತುಂಬಿಕೊಳ್ಳುತ್ತಿರುವುದು ಸ್ಥಳೀಯ ಜಿಲ್ಲಾಡಳಿತಗಳಿಗೆ ತಲೆನೋವಾಗಿದೆ.

ಚಿಕಿತ್ಸೆಗೆ ನಿರಾಕರಣೆ: ಸುಳ್ಳು ವಿಳಾಸ ನೀಡಿ ಹೊರ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬೆಂಗಳೂರಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲಾಡಳಿತಗಳು ಈಗಷ್ಟೇ ಎಚ್ಚೆತ್ತುಕೊಂಡಿದ್ದು, ಹೊರ ಜಿಲ್ಲೆಯ ರೋಗಿಗಳಿಗೆ ಚಿಕಿತ್ಸೆನೀಡಲು ನಿರಾಕರಿಸುತ್ತಿವೆ.

ಜಿಲ್ಲಾ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಬೆಂಗಳೂರಿನ ಸೋಂಕಿತರೇ ಆಶ್ರಯ ಪಡೆದುಕೊಂಡು ಮುಂದೆ ತಮ್ಮ ಜಿಲ್ಲೆಯಲ್ಲಿ ಸೋಂಕು ಹೆಚ್ಚಾದರೆ ಸ್ಥಳೀಯರಿಗೆ ತೊಂದರೆಯಾಗುತ್ತದೆ ಎಂಬ ಕಾಳಜಿ ಜಿಲ್ಲಾಡಳಿತಗಳದ್ದಾಗಿದೆ.ಸ್ಥಳೀಯರಿಗೆ ಆದ್ಯತೆ ನೀಡುವ ದೃಷ್ಟಿಯಿಂದ ಜಿಲ್ಲಾಡಳಿತಗಳು ದಾಖಲಾಗುವವರ ವಿಳಾಸವನ್ನು ಗಂಭೀರವಾಗಿ ಪರಿಶೀಲಿಸಲು ಕ್ರಮ ವಹಿಸಿವೆ.

ಪ್ರಭಾವಿಗಳ ಶಿಫಾರಸು: ಬೆಂಗಳೂರಿನಲ್ಲಿ ದೊಡ್ಡ ದೊಡ್ಡರಾಜಕಾರಣಿಗಳು, ಗಣ್ಯರು, ಪ್ರಭಾವಿಗಳು ಶಿಫಾರಸು ಮಾಡಿದರೂ ಆಸ್ಪತ್ರೆಗಳಲ್ಲಿ ಬೆಡ್‌, ವೆಂಟಿಲೇಟರ್‌ ಸಿಗುತ್ತಿಲ್ಲ.ಆದರೆ ಅಲ್ಲಿಯ ಪ್ರಭಾವಿಗಳು ಹೊರ ಜಿಲ್ಲೆಗಳಅಧಿಕಾರಿಗಳು, ರಾಜಕಾರಣಿಗಳ ಮೂಲಕ ಶಿಫಾರಸುಮಾಡಿ ತಮಗೆ ಬೇಕಾದವರಿಗೆ ಕೊರೊನಾ ಚಿಕಿತ್ಸೆಗಾಗಿದಾಖಲಿಸುವ ವ್ಯವಸ್ಥೆಯೂ ತೆರೆಮರೆಯಲ್ಲಿ ನಡೆದಿದೆ.ಒಟ್ಟಾರೆ ಬೆಂಗಳೂರಿನ ಸೋಂಕಿತರಿಗೆ ಬೆಂಗಳೂರಿನಲ್ಲಿಯೂ ಸುಲಭವಾಗಿ ವೈದ್ಯಕೀಯ ಸೇವೆ ಸಿಗುತ್ತಿಲ್ಲ. ಹೊರಜಿಲ್ಲೆಗಳಲ್ಲಿಯೂ ಸುಲಭವಾಗಿ ಚಿಕಿತ್ಸೆ ಸಿಗುತ್ತಿಲ್ಲ. ಹೀಗಾಗಿಬೆಂಗಳೂರಿಗರಿಗೆ ಬೆಂಗಳೂರೇ ಗತಿ ಎಂಬಂತಾಗಿದೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.