ಕಾಳಸಂತೆ ಕೊನೆಗೊಳಿಸಿ


Team Udayavani, May 2, 2021, 7:00 AM IST

covid effect in karnataka

ಬೆಂಗಳೂರು: ರಾಜ್ಯಾದ್ಯಂತ ತೀವ್ರವಾಗಿರುವ ಕೊರೊನಾ ಹಾವಳಿಯ ದುರ್ಲಾಭ ಪಡೆಯಲು ಹೊಂಚುಹಾಕುತ್ತಿರುವ ದುಷ್ಕರ್ಮಿಗಳು ಸೋಂಕುಪೀಡಿತರ ಜೀವ ಉಳಿಸುವ ರೆಮಿಡಿಸಿವಿರ್‌, ಆಮ್ಲಜನಕ ಸಿಲಿಂಡರ್‌ ಮತ್ತು ಆಸ್ಪತ್ರೆಗಳ ಹಾಸಿಗೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹಲವು ದಿನಗಳಿಂದ ಇಂಥ ಪ್ರಕರಣಗಳು ವರದಿಯಾಗುತ್ತಿದ್ದು, ಜನರು ದುಷ್ಕರ್ಮಿಗಳು ಒಡ್ಡುವ ಆಮಿಷಕ್ಕೆ ಬಲಿಯಾಗುತ್ತಿದ್ದಾರೆ. ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 50ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಒಟ್ಟು 26 ಪ್ರಕರಣಗಳು ದಾಖಲಾಗಿವೆ. ವಿವಿಧ ಜಿಲ್ಲೆಗಳ ಸರಕಾರಿ- ಖಾಸಗಿ ಆಸ್ಪತ್ರೆಗಳು, ಮೆಡಿಕಲ್‌ ಸ್ಟೋರ್‌ಗಳ ಮೇಲೆ ನಿಗಾ ಇರಿಸಲಾಗಿದೆ. ಜಿಲ್ಲಾ, ತಾಲೂಕು ಆರೋಗ್ಯಾಧಿಕಾರಿಗಳ ಜತೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಲಬುರಗಿ: ಮೂವರ ಬಂಧನ

ಕಲಬುರಗಿಯಲ್ಲಿ ಖಾಸಗಿ ಸ್ಟಾಫ್‌ ನರ್ಸ್‌, ಎಕ್ಸರೇ ಟೆಕ್ನಿಶಿಯನ್‌ ಮತ್ತು ಮೆಡಿಕಲ್‌ ಶಾಪ್‌ ಉದ್ಯೋಗಿ ಸಹಿತ ಮೂವರು ಕಾಳಸಂತೆಯಲ್ಲಿ ರೆಮಿಡಿಸಿವಿರ್‌ ಮಾರಾಟ ಮಾಡಿ ಜೈಲು ಸೇರಿದ್ದಾರೆ. ಈ ಇಂಜೆಕ್ಷನ್‌ಗಳನ್ನು 20ರಿಂದ 25 ಸಾವಿರ ರೂ.ಗಳಿಗೆ ಮಾರಾಟ ಮಾಡುವಾಗಲೇ ಪೊಲೀಸರು ಸೆರೆ ಹಿಡಿದಿದ್ದಾರೆ.

30 ಸಾವಿರ ರೂ. ಬೆಲೆ!

ಬೆಳಗಾವಿ ಜಿಲ್ಲೆಯಲ್ಲಿ 15 ದಿನಗಳ ಹಿಂದೆ ರೆಮಿಡಿಸಿವಿರ್‌ ಚುಚ್ಚುಮದ್ದು 25-30 ಸಾವಿರ ರೂ.ವರೆಗೆ ಕಾಳಸಂತೆಯಲ್ಲಿ ಮಾರಾಟವಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ವಿಜಯಪುರದಲ್ಲಿ ಐವರ ಬಂಧನ

ವಿಜಯಪುರದಲ್ಲಿ ರೆಮಿಡಿಸಿವಿರ್‌ ಕಾಳಸಂತೆ ಮಾರಾಟಕ್ಕಾಗಿ ಐವರನ್ನು ಬಂಧಿಸಿದ್ದು, ಡಿಎಚ್‌ಒ ಡಾ| ರಾಜಕುಮಾರ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.

ದಾವಣಗೆರೆಯಲ್ಲಿ ಇಬ್ಬರ ಬಂಧನ

ದಾವಣಗೆರೆಯಲ್ಲಿ ಜಿಲ್ಲಾ ಚಿಗಟೇರಿ ಆಸ್ಪತ್ರೆ ಫಾರ್ಮಸಿಸ್ಟ್‌ ಜಿ. ಮಂಜುನಾಥ ರಾವ್‌ ಮತ್ತು ದಿನಗೂಲಿ ನೌಕರ ಗಣೇಶ್‌ ಎಂಬವರನ್ನು ಬಂಧಿಸಲಾಗಿದೆ. ಜಿಲ್ಲಾಸ್ಪತ್ರೆ ಹಿಂಭಾಗ ಆಟೋದಲ್ಲಿ ರೆಮಿಡಿಸಿವಿರ್‌ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ವೇಳೆ ಗಣೇಶ್‌ನನ್ನು ಬಂಧಿಸಕೊಳ್ಳಲಾಗಿತ್ತು. ಆತ ನೀಡಿದ ಸುಳಿವಿನ ಮೇರೆಗೆ ಮಂಜುನಾಥ ರಾವ್‌ನನ್ನು ಬಂಧಿಸಲಾಗಿತ್ತು.

ಹೇಗಿದೆ ದಂಧೆ ?

ರೆಮಿಡಿಸಿವಿರ್‌ ಔಷಧ ಉತ್ಪಾದಿಸುವ ಕಂಪೆನಿಗಳು ಮತ್ತು ಸಗಟು ವ್ಯಾಪಾರಿಗಳು ಈ ಮಾಫಿಯಾದಲ್ಲಿ ತೊಡಗಿವೆ. ಮೂರನೇ ವ್ಯಕ್ತಿ ಮತ್ತು ಸಂಸ್ಥೆಯ ಮೂಲಕ ಔಷಧ ಮಳಿಗೆಗಳಲ್ಲಿ ರೆಮಿಡಿಸಿವಿರ್‌ ಮಾರಾಟ ಮಾಡಲಾಗುತ್ತಿದೆ.  ಇದಲ್ಲದೆ, ಸ್ವಯಂಸೇವಕರ ಹೆಸರಿನಲ್ಲಿ ಕೆಲವರು ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಆಮ್ಲಜನಕದ ಸಿಲಿಂಡರ್‌ ಕೊಡಿಸುವುದಾಗಿ ಮೋಸ ಮಾಡುತ್ತಿದ್ದಾರೆ. ಇವರ ಮೋಸಕ್ಕೆ ವಾಟ್ಸ್‌ಆ್ಯಪ್‌ ಗ್ರೂಪ್‌ಗಳು ವೇದಿಕೆಯಾಗುತ್ತಿವೆ. ಕೆಲವು ಸ್ವಯಂಸೇವಕರು ವಾಟ್ಸ್‌ಆ್ಯಪ್‌ ಗ್ರೂಪ್‌ ರಚಿಸಿಕೊಂಡು ನೊಂದವರಿಗೆ ಸಹಾಯ ಮಾಡುತ್ತಿದ್ದಾರೆ. ಇದರಲ್ಲಿ ನುಸುಳುವ ವಂಚಕರು ಹಾಸಿಗೆ, ಆಮ್ಲಜನಕ ಕೊಡಿಸುವುದಾಗಿ ಹೇಳಿ ಮುಂಗಡ ಹಣ ವಸೂಲಿ ಮಾಡುತ್ತಿದ್ದಾರೆ.

3,7504,000 ರೆಮಿಡಿಸಿವಿರ್‌ ದರ ನಿಗದಿ

ಸರಕಾರವು ರೆಮಿಡಿಸಿವಿರ್‌ ಉತ್ಪಾದಿಸುವ ಕಂಪೆನಿಗಳ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, 3,750-4,000 ರೂ. ಬೆಲೆಯಲ್ಲಿ ವಿತರಿಸುವಂತೆ ಸೂಚಿಸಿದೆ. ಅದಕ್ಕಿಂತ ಹೆಚ್ಚಿನ ಬೆಲೆ ನಿಗದಿ ಪಡಿಸುವಂತಿಲ್ಲ. ಒಂದು ವೇಳೆ ಹೆಚ್ಚುವರಿ ಬೆಲೆ ಪಡೆದರೆ ಕಾನೂನು ಕ್ರಮದ ಜತೆಗೆ ಒಡಂಬಡಿಕೆ ರದ್ದುಪಡಿಸುವ ಎಚ್ಚರಿಕೆ ನೀಡಿದೆ. ಮೆಡಿಕಲ್‌ ಸ್ಟೋರ್‌ಗಳಲ್ಲಿ ರೆಮಿಡಿಸಿವಿರ್‌ ಮಾರಾಟಕ್ಕೆ ಅವಕಾಶವಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ ಕಾಳಸಂತೆಯಲ್ಲಿ 20,000 ರೂ.ಗಳಿಗೆ ಮಾರಾಟವಾಗುತ್ತಿರುವುದು ವರದಿಯಾಗಿದೆ.

ಯಾಕೆ ಈ ಸಮಸ್ಯೆ?

ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಹಾಸಿಗೆ ಬೇಡಿಕೆ ಮತ್ತು ಬೆಲೆ  ಹೆಚ್ಚಾಗಿದೆ. ಆಸ್ಪತ್ರೆಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಹಾಸಿಗೆಗಳು ಲಭ್ಯವಾಗದಿರುವುದು ಬೆಡ್‌ ಬ್ಲಾಕಿಂಗ್‌ ದಂಧೆಗೆ ದಾರಿ ಮಾಡಿಕೊಟ್ಟಿವೆ. ಸೋಂಕು ಹೆಚ್ಚಿರುವ ಬೆಂಗಳೂರಿನಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೆ ಅನಿವಾರ್ಯವಾಗಿ ಖಾಸಗಿಯ ಮೊರೆಹೋಗಿ ಲಕ್ಷಾಂತರ ರೂ. ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ.

ಖಾಸಗಿಯಲ್ಲಿ  ಕಾದಿರಿಸುವಿಕೆ

ಬಹುತೇಕ ಖಾಸಗಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳು ಸರಕಾರಕ್ಕೆ ಶೇ. 50ರಷ್ಟು ಹಾಸಿಗೆ ನೀಡಿಲ್ಲ. ನೇರವಾಗಿ ಅಥವಾ ಪರಿಚಯಸ್ಥರು, ಪ್ರಭಾವಿಗಳ ಮೂಲಕ ಕೇಳಿದರೆ ಸರಕಾರಕ್ಕೆ ನೀಡದೆ ಖಾಲಿ ಇರುವ ಹಾಸಿಗೆಗಳನ್ನು ಆಸ್ಪತ್ರೆ ವೈದ್ಯರು, ಸಿಬಂದಿಯೇ ಹೆಚ್ಚಿನ ದರಕ್ಕೆ ನೀಡುತ್ತಿದ್ದಾರೆ.

ಕೊರೊನಾಹೆಸರಿನಲ್ಲಿ ನಡೆಯು ತ್ತಿರುವ ಅಕ್ರಮ ವ್ಯವಹಾರ ಸಂಬಂಧ ಈಗಾಗಲೇ ಬೆಂಗಳೂರು ಸಹಿತ ರಾಜ್ಯದ ಎಲ್ಲೆಡೆ ಕಾರ್ಯಾಚರಣೆಗೆ ಸೂಚಿಸಲಾಗಿದೆ.

-ಪ್ರತಾಪ್‌ ರೆಡ್ಡಿ, ಎಡಿಜಿಪಿ, ರಾಜ್ಯ ಕಾನೂನು ಸುವ್ಯವಸ್ಥೆ

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.