ಹೋಟೆಲ್‌ ಪಾರ್ಸೆಲ್‌ ಸೇವೆಗೂ ಕೋವಿಡ್ ಕಾರ್ಮೋಡ


Team Udayavani, Jan 16, 2022, 11:47 AM IST

ಹೋಟೆಲ್‌ ಪಾರ್ಸೆಲ್‌ ಸೇವೆಗೂ ಕೋವಿಡ್ ಕಾರ್ಮೋಡ

ಬೆಂಗಳೂರು: ಕೋವಿಡ್‌ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ವಾರಾಂತ್ಯದ ಕರ್ಫ್ಯೂ ಅನ್ನು ಜನವರಿ ಅಂತ್ಯದವರೆಗೂ ವಿಸ್ತರಿಸಿದೆ. ಆ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಎಲ್ಲ ಅಂಗಡಿ ಮುಂಗಟ್ಟುಗಳು, ಪಬ್‌, ಬಾರ್‌, ರೆಸ್ಟೋರೆಂಟ್‌ಗಳು ಬಂದ್‌ ಆಗಿವೆ.

ಆದರೆ ಜನರು ಹಸಿವಿನಿಂದ ಬಳಲದೇ ಇರಲಿ ಎಂಬ ಸದುದ್ದೇಶದಿಂದ ಸರ್ಕಾರ ಹೋಟೆಲ್‌ ಗ‌ಳಲ್ಲಿ ಪಾರ್ಸೆಲ್‌ಗೆ ಅವಕಾಶ ಕಲ್ಪಿಸಿದೆ. ಆದರೆ ವಾರಾಂತ್ಯದಕರ್ಫ್ಯೂ ವೇಳೆ ಗ್ರಾಹಕರು ಪಾರ್ಸೆಲ್‌ ಸೇವೆಗೆ ಅಷ್ಟುಒಲವು ತೊರುತ್ತಿಲ್ಲ. ಆ ಹಿನ್ನೆಲೆಯಲ್ಲಿ ವಾರಾಂತ್ಯದಕರ್ಫ್ಯೂನಲ್ಲಿ ಶೇ.25ರಷ್ಟು ಪಾರ್ಸೆಲ್‌ ವ್ಯಾಪಾರ ನಡೆದಿದೆ. ಶೇ.75ರಷ್ಟು ವ್ಯಾಪಾರ ವಹಿವಾಟಿಗೆ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ.

ಕಳೆದ ಲಾಕ್‌ಡೌನ್‌ಗಳಲ್ಲಿ ಸರ್ಕಾರ ಹೋಟೆಲ್‌ಗಳಲ್ಲಿ ಪಾರ್ಸೆಲ್‌ ಸೇವೆಗೆ ಅವಕಾಶ ಕಲ್ಪಿಸಿತ್ತು. ಹಲವು ಹೋಟೆಲ್‌ಗ‌ಳಲ್ಲಿ ಪಾರ್ಸೆಲ್‌ ಸೇವೆಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಕಳೆದ ಬಾರಿಯ ಲಾಕ್‌ಡೌನ್‌ಗಳಲ್ಲಿ ಆದಷ್ಟು ವ್ಯಾಪಾರ ಈಗ ನಡೆಯುತ್ತಿಲ್ಲ. ವಾರಾಂತ್ಯದ ಕರ್ಫ್ಯೂನಲ್ಲಿ ಪಾರ್ಸೆಲ್‌ ಸೇವೆಗೆ ಜನರು ಒಲವು ತೋರುತ್ತಿಲ್ಲ. ಆ ಹಿನ್ನೆಲೆಯಲ್ಲಿ ಶೇ.75ರಷ್ಟು ಹೋಟೆಲ್‌ ಉದ್ಯಮಕ್ಕೆ ಪೆಟ್ಟು ಬಿದ್ದಿದೆ ಸರ್ಕಾರ ಈ ಹಿಂದಿನ ಲಾಕ್‌ಡೌನ್‌ ವೇಳೆ ಪಾರ್ಸೆಲ್‌ ಸೇವೆಗೆ ಅವಕಾಶ ಕಲ್ಪಿಸಿತ್ತು. ಆ ವೇಳೆ ಗ್ರಾಹಕರು ಅಧಿಕ ಸಂಖ್ಯೆಯಲ್ಲಿ ವಿವಿಧ ರೀತಿಯ ಆಹಾರಪದಾರ್ಥಕ್ಕೆ ಆರ್ಡರ್‌ ಮಾಡುತ್ತಿದ್ದರು. ಆದರೆ ಈಗ ಆ ಪರಿಸ್ಥಿತಿ ಇಲ್ಲ ಎಂಬುದು ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಮಾಲೀಕರ ಅಳಲು.

ಗ್ರಾಹಕರಲ್ಲಿ ಭಯ ಕಾಡುತ್ತಿದೆ: ವಾರಾಂತ್ಯದ ಕರ್ಫ್ಯೂ ಅಂದ ತಕ್ಷಣ ಜನರು ಭಯ ಪಡುತ್ತಾರೆ. ಮನೆಯಿಂದ ಹೊರಗಡೆ ಹೋಗಲು ಹೆದರುತ್ತಾರೆ. ಹೋಟೆಲ್‌ಗೆ ಪಾರ್ಸೆಲ್‌ ಸೇವೆ ತರಲು ಬಂದರೂ ಅವರಿಗೆ ಪೊಲೀಸರ ಕಾಟ. ಆ ಹಿನ್ನೆಲೆಯಲ್ಲಿ ಪಾರ್ಸೆಲ್‌ ಸೇವೆಗೆ ಗ್ರಾಹಕರು ಆಸಕ್ತಿ ತೋರುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಹೋಟೆಲ್‌ಗ‌ಳ ಸಂಘದ ಕಾರ್ಯದರ್ಶಿ ಮಧುಕರ್‌ ಶೆಟ್ಟಿ ಹೇಳುತ್ತಾರೆ.ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟು ನಡೆಯುವುದಿಲ್ಲ ಎಂಬ ಕಾರಣಕ್ಕಾಗಿ ಹಲವು ಹೋಟೆಲ್‌ ಮತ್ತು ದರ್ಶನಿಗಳ ಮಾಲೀಕರು ಬಂದ್‌ ಮಾಡಿರುತ್ತಾರೆ.

ಹೀಗಾಗಿ ಶೇ.15 ರಿಂದ 20 ರಷ್ಟು ಹೋಟೆಲ್‌ಗ‌ಳ ಮಾತ್ರ ತೆರೆದಿರುತ್ತವೆ ಎಂದು ತಿಳಿಸುತ್ತಾರೆ.  ವಾರಾಂತ್ಯದ ಕರ್ಫ್ಯೂ ವೇಳೆ ಪಾರ್ಸೆಲ್‌ ಸೇವೆ ಇರುವ ಬಗ್ಗೆ ಬಹಳಷ್ಟು ಗ್ರಾಹಕರಿಗೆ ಮಾಹಿತಿ ಇಲ್ಲ ಎಂಬುವುದು ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಮಾಲೀ ಕರು ಹೇಳುತ್ತಾರೆ. ಯುವ ಸಮೂಹಕ್ಕೆ ಮೊಬೈಲ್‌ನಲ್ಲಿ ಪಾರ್ಸೆಲ್‌ ಸೇವೆ ಬುಕ್‌ ಮಾಡುವ ಬಗ್ಗೆ ಮಾಹಿತಿ ಇದೆ. ಆದರೆ ಕೆಲವು ಹಿರಿಯರಿಗೆ ಈ ಬಗ್ಗೆ ಪೂರ್ಣ ಪ್ರಮಾಣ ಮಾಹಿತಿಯಿಲ್ಲ. ಆ ಹಿನ್ನೆಲೆಯಲ್ಲಿ ಅವರು ಪಾರ್ಸೆಲ್‌ ಸೇವೆ ಸೇರಿದಂತೆ ಇನ್ನಿತರ ಸೇವೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎನ್ನುತ್ತಾರೆ.

ಕೋವಿಡ್‌ ಸೇರಿದಂತೆ ನಾನಾ ಕಾರಣ ಗಳಿಂದಾಗಿ ಗ್ರಾಹಕರು ಪಾರ್ಸೆಲ್‌ ಸೇವೆಗೆ ಆಸಕ್ತಿ ತೋರುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರಿದರೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತಷ್ಟು ಹೋಟೆಲ್‌ಗ‌ಳ ಬಾಗಿಲು ಬಂದ್‌ ಆಗಲಿವೆ. ಹೋಟೆಲ್‌ ಉದ್ಯಮ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆಯನ್ನಿರಿಸಬೇಕು. ಚಂದ್ರಶೇಖರ್‌ ಹೆಬ್ಟಾರ್‌ ,ಕರ್ನಾಟಕ ರಾಜ್ಯ ಹೋಟೆಲ್‌ಗ‌ಸಂಘದ ಅಧ್ಯಕ್ಷ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.