ಕೋವಿಡ್‌ ಭೀತಿ: 68 ಮತಗಟ್ಟೆ ಬದಲು

ಆರ್‌.ಆರ್‌.ನಗರದಲ್ಲಿ ಹೆಚ್ಚು ಮತದಾರರಿರುವಕಡೆ ಪರ್ಯಾಯ ಮತಗಟ್ಟೆ

Team Udayavani, Oct 7, 2020, 1:32 PM IST

BNG-TDY-1

ಬೆಂಗಳೂರು: ಕೋವಿಡ್‌-19 ಸೋಂಕು ಭೀತಿ ಹಿನ್ನೆಲೆಯಲ್ಲಿರಾಜರಾಜೇಶ್ವರಿನಗರಉಪಚುನಾವಣೆಗೆ 297 ತಾತ್ಕಾಲಿಕ ಮತಗಟ್ಟೆಗಳನ್ನು ತೆರೆಯಲಾಗುವುದು ಹಾಗೂ ಕಿರಿದಾಗಿರುವ 68 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗುವುದು ಎಂದು ನಗರ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಅವರು ತಿಳಿಸಿದರು.

ಆರ್‌.ಆರ್‌. ನಗರದ ಉಪ ಚುನಾವಣೆ ಸಿದ್ಧತೆ ಸಂಬಂಧ ಬಸವೇಶ್ವರ ನಗರದ ಬಿ.ಆರ್‌.ಅಂಬೇಡ್ಕರ್‌ ‌ ಕ್ರೀಡಾ ಸಂಕೀರ್ಣದ ಕಚೇರಿಯ ಸ್ಟ್ರಾಂಗ್‌ ರೂಂನಲ್ಲಿ ಇರಿಸಲಾಗಿರುವ ಇವಿಎಂ ಮತ್ತು ವಿವಿಪ್ಯಾಟ್‌ ಯಂತ್ರಗಳಕಾರ್ಯಕ್ಷಮತೆ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಆಯುಕ್ತರು, ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಒಂದು ಮತಗಟ್ಟೆಯಲ್ಲಿ ಒಂದು ಸಾವಿರ ಜನ ಮಾತ್ರ ಮತದಾನ ಮಾಡಬಹುದು ಎಂದು ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಹೀಗಾಗಿ, ಹೆಚ್ಚು ಮತದಾರರು ಇರುವ ಮತಗಟ್ಟೆಗಳಿಗೆ  ಪರ್ಯಾಯ ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ. ಆರ್‌.ಆರ್‌ ನಗರದಲ್ಲಿ 381 ಮತಗಟ್ಟೆಗಳಿವೆ. ಇದರೊಂದಿಗೆ ಇನ್ನೂ 297 ತಾತ್ಕಾಲಿಕ (ಹೆಚ್ಚುವರಿ)ಮತಗಟಗಳನ್ನು ತೆರೆಯಲಾಗುವುದು. ಒಟ್ಟು 678 ಮತಗಟ್ಟೆಗಳಾಗಲಿವೆ ಎಂದರು.

ಎಲ್ಲ ಮತಗಟ್ಟೆಗಳಿಗೆ ಎರಡು ಪಟ್ಟು (ಒಂದು ಮತಗಟ್ಟೆಗೆ ಎರಡು ಯಂತ್ರ)ದಂತೆ ಒಟ್ಟು 1,356 ಬ್ಯಾಲೆಟ್‌ ಯೂನಿಟ್ಸ್‌,1,356 ಕಂಟ್ರೋಲ್‌ ಯೂನಿಟ್ಸ್‌ ಹಾಗೂ 1,356 ವಿವಿ ಪ್ಯಾಟ್‌ ಯಂತ್ರಗಳ ತಪಾಸಣೆ ಕಾರ್ಯವು ನ.10ರ ಒಳಗೆ ಪೂರ್ಣ ಗೊಳಿಸಲಾಗುವುದು.ಚುನಾವಣೆ ಸಂಬಂಧ ಪ್ರಾಥಮಿಕವಾಗಿ ಇವಿಎಂ ಮತ್ತು ವಿವಿಪ್ಯಾಟ್‌ ಯಂತ್ರಗಳಿರುವಸೆಕ್ಟರ್‌ (10ರಿಂದ 12 ಬೂತ್‌ ಸೇರಿ)ಗಳಲ್ಲಿನ ಸಿದ್ಧತೆ ಪರಿಶೀಲನೆ ಮಾಡುವ ಸಂಬಂಧ ಬಿಇಎಲ್‌ನ ಎಂಜಿನಿಯರ್‌ಗಳು ಬಂದಿದ್ದು, ಚುನಾವಣೆಗೆ ಅವಶ್ಯವಿರುವ ಕಂಟ್ರೋಲ್‌ ಯೂನಿಟ್‌, ಬ್ಯಾಲೆಟ್‌ ಯೂನಿಟ್‌, ವಿವಿ ಪ್ಯಾಟ್‌ ಸೇರಿದಂತೆ ಎಲ್ಲ ಯಂತ್ರ ಗಳನ್ನೂ ಪರಿಶೀಲನೆ ಮಾಡಿ ಸಮರ್ಪಕವಾಗಿದೆಯೇ ಎಂದು ನೋಡಲಿದ್ದಾರೆ ಎಂದರು.

1,356 ಯಂತ್ರಗಳಲ್ಲಿ ವಿವಿಪ್ಯಾಟ್‌ 678 ಜತೆಗೆ ಶೇ.50 ಹೆಚ್ಚುವರಿಯಾಗಿ ಬಳಸಲಾಗುತ್ತದೆ, ಬ್ಯಾಲೆಟ್‌ ಯೂನಿಟ್‌, ಕಂಟ್ರೋಲ್‌ ಯೂನಿಟ್‌ ಯಂತ್ರಗಳನ್ನು ಶೇ. 140 ಹೆಚ್ಚುವರಿಯಾಗಿ ಬಳಸಲಾಗುತ್ತದೆ. ಈ ರೀತಿ ಹೆಚ್ಚುವರಿಯಾಗಿ ಬಳಸಿದ ಸಾಧನಗಳನ್ನು ಜನಪ್ರತಿನಿಧಿಗಳ ಸಮ್ಮುಖದಲ್ಲಿ ರ್‍ಯಾಂಡಮ್‌ ಆಗಿ ಆಯ್ಕೆ ಮಾಡಿ ಮತಗಟ್ಟೆಗಳಿಗೆಕಳುಹಿಸಲಾಗುತ್ತದೆಎಂದುಆಯುಕ್ತರು ಮಾಹಿತಿ ನೀಡಿದರು. ಈವೇಳೆವಿಶೇಷಆಯುಕ್ತರು(ಆಡಳಿತ)ಜೆ.ಮಂಜು ನಾಥ್‌,ಸ್ಟ್ರಾಂಗ್‌ರೂಂನೋಡಲ್‌ಅಧಿಕಾರಿಕೆಂಪೇಗೌಡ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಕಿರಿದಾದ ಮತಗಟ್ಟೆ ಶಿಫ್ಟ್  :  ಕೋವಿಡ್ ಸೋಂಕು ಭೀತಿ ಇರುವುದರಿಂದ ಆರ್‌. ಆರ್‌.ನಗರದ ಕಿರಿದಾದ ಪ್ರದೇಶದಲ್ಲಿರುವ 68 ಮತಗಟ್ಟೆಗಳಲ್ಲಿ ಸ್ಥಳ ಬದಲಾಯಿಸಲು ನಿರ್ಧರಿಸಲಾಗಿದೆ. ಈ 68 ಮತಗಟ್ಟೆಗಳ ಕೊಠಡಿಗಳಲ್ಲಿ ಸಾರ್ವಜನಿಕರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಷ್ಟು ಸ್ಥಳಾವಕಾಶವಿಲ್ಲ. ಅಲ್ಲದೆ, ಕೋವಿಡ್ ಹಬ್ಬುವುದು ತಡೆಯುವ ಉದ್ದೇಶ ದಿಂದ ಕೆಲವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು, ಹಾಲಿ 68 ಮತಗಟ್ಟೆಗಳ ಬದಲಿಗೆ ಹೊಸದಾಗಿ 68ಕಟ್ಟಡಗಳನ್ನು ಗುರುತಿಸಲಾಗಿದೆ. ಈ ಕುರಿತು ಚರ್ಚಿಸಿ ತೀರ್ಮಾನ ತಗೆದುಕೊಳ್ಳಲಾಗುವುದು ಎಂದು ಹೇಳಿದರು

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.