ಕೋವಿಡ್ ಭಯಾನಕ ರೋಗವಲ್ಲ; ಧೈರ್ಯವಾಗಿರಿ


Team Udayavani, Jul 24, 2020, 6:52 AM IST

ಕೋವಿಡ್ ಭಯಾನಕ ರೋಗವಲ್ಲ; ಧೈರ್ಯವಾಗಿರಿ

ನಿತ್ಯ ಜನ ಸಂಪರ್ಕದಲ್ಲಿರುವ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳಲ್ಲಿ ಇತ್ತೀಚೆಗೆ ಕೋವಿಡ್ ಸೋಂಕು ದೃಢಪಡುತ್ತಿದ್ದು, ಕೆಲವು ಪಾಲಿಕೆ ಸದಸ್ಯರು ಸೋಂಕಿನಿಂದ ಮುಕ್ತವೂ ಆಗಿದ್ದಾರೆ. ಪಾದರಾಯನಪುರ ವಾರ್ಡ್‌ ಪಾಲಿಕೆ ಸದಸ್ಯ ಇಮ್ರಾನ್‌ ಪಾಷಾ, ಜಗಜೀವನ್‌ರಾಮ್‌ ನಗರ ವಾರ್ಡ್‌ನ ಪಾಲಿಕೆ ಸದಸ್ಯೆ ಸೀಮಾ ಅಲ್ತಾಫ್‌ ಖಾನ್‌, ಸಿದ್ಧಾಪುರ ವಾರ್ಡ್‌ ಪಾಲಿಕೆ ಸದಸ್ಯ ಎ. ಮುಜಾಹಿದ್‌ ಪಾಷಾ, ಹೆಮ್ಮಿಗೆಪುರ ವಾರ್ಡ್‌ನ ಆರ್ಯ ಶ್ರೀನಿವಾಸ್‌ ಹಾಗೂ ಬಸವನಗುಡಿ ಪಾಲಿಕೆ ಸದಸ್ಯರೂ ಆಗಿರುವ ಮಾಜಿ ಮೇಯರ್‌ ಬಿ.ಎಸ್‌. ಸತ್ಯನಾರಾಯಣ (ಕಟ್ಟೆ) ಅವರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಇವರೆಲ್ಲರೂ ಬಹುತೇಕ ಗುಣಮುಖರಾಗಿದ್ದರೆ, ಜನರ ಆತ್ಮಸ್ಥೈರ್ಯ ಕುಗ್ಗುತ್ತಿರುವ ಸಂದರ್ಭದಲ್ಲಿ ಅವರು ಗುಣಮುಖರಾಗಿ ಬಂದ್ದಾರೆ. ಈ ಪೈಕಿ ಕೆಲವರು “ಉದಯವಾಣಿ’ಯೊಂದಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದು ಅತ್ಯಗತ್ಯ; ಕಟ್ಟೆ :  “ಕೋವಿಡ್ ಭಯಾನಕ ಕಾಯಿಲೆಯಲ್ಲ. ಆತಂಕಪಡುವ ಅಗತ್ಯವೂ ಇಲ್ಲ. ಯೋಗ ಹಾಗೂ ವ್ಯಾಯಾಮ ಮಾಡುವುದರಿಂದ ಉಸಿರಾಟದ ಸಮಸ್ಯೆ ಎದುರಾಗಲ್ಲ. ಮುಖ್ಯವಾಗಿ ವಿಟಮಿನ್‌ ಯುಕ್ತ ಆಹಾರ ಸೇವಿಸಬೇಕು. ದೇಹಕ್ಕೆ ಸೂರ್ಯ ಕಿರಣಗಳು ಕೆಲವು ನಿಮಿಷ ಬೀಳುವಂತೆ ನೋಡಿಕೊಳ್ಳಬೇಕು. ಬಿಸಿ ನೀರು ಹಾಗೂ ಪೌಷ್ಟಿಕಾಂಶವುಳ್ಳ ಆಹಾರ ಸೇವಿಸುವುದು ಅತ್ಯಗತ್ಯ’ ಎನ್ನುತ್ತಾರೆ ಬಸವನ ಗುಡಿ ಪಾಲಿಕೆ ಸದಸ್ಯ ಹಾಗೂ ಮಾಜಿ ಮೇಯರ್‌ ಬಿ.ಎಸ್‌. ಸತ್ಯಾನಾರಾಯಣ (ಕಟ್ಟೆ). ಆಸ್ಪತ್ರೆಗಳಲ್ಲಿ ಒಳ್ಳೆಯ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ಅಲ್ಲಿಯೂ ಕೊರೊನಾ ಭಯಕ್ಕೆ ಸಿಬ್ಬಂದಿ ಕೊರತೆ ಸೃಷ್ಟಿಯಾಗಿದೆ. ಇದರ ಹೊರತಾಗಿ ಈ ಕಾಯಿಲೆಗೆ ವಿಶೇಷ ಆರೈಕೆ ಅಗತ್ಯವಿಲ್ಲ. ಕೋವಿಡ್ ಸೋಂಕಿನೊಂದಿಗೆ ಬೇರೆ ಕಾಯಿಲೆ ಇದ್ದರೆ ಹೆಚ್ಚು ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದರು. ಆಯುರ್ವೇದ ವೈದ್ಯ ಡಾ.ಗಿರಿಧರ್‌ ಕಜೆ ಅವರು ನೀಡಿರುವ ಮಾತ್ರೆಗಳನ್ನು ಈಗ ತೆಗೆದುಕೊಳ್ಳುತ್ತಿದ್ದೇನೆ. ಸ್ವಲ್ಪ ಆಯಾಸ ಇದೆ. ಇದರ ಹೊರತಾಗಿ ಯಾವುದೇ ಸಮಸ್ಯೆ ಇಲ್ಲ ಎಂದೂ ಅವರು ಹೇಳಿದರು. ಸತ್ಯನಾರಾಯಣ ಅವರು ಇದೀಗ ಗುಣಮುಖರಾಗಿ ಹೋಂ ಕ್ವಾರಂಟೈನ್‌ನಲ್ಲಿದ್ದಾನೆ.

ಇಡೀ ಕುಟುಂಬವೇ ಆಸ್ಪತ್ರೆಗೆ ಹೋಗಿ ಬಂತು: ಸೀಮಾ :  ಮನೆಯಲ್ಲಿ ಒಬ್ಬರಿಗೆ ಕೋವಿಡ್ ಬಂದರೆ ಆತಂಕ ಸೃಷ್ಟಿಯಾಗುತ್ತದೆ. ಒಂದು ವೇಳೆ ಇಡೀ ಕುಟುಂಬಕ್ಕೆ ಕೋವಿಡ್ ಸೋಂಕು ಬಂದರೆ? ಜಗಜೀವನ್‌ರಾಮ್‌ ನಗರ ವಾರ್ಡ್‌ನ ಪಾಲಿಕೆ ಸದಸ್ಯೆ ಸೀಮಾ ಅಲ್ತಾಫ್‌ಖಾನ್‌ ಹಾಗೂ ಅವರ ಪತಿ ಸೇರಿದಂತೆ ಒಂದೇ ಕುಟುಂಬದ 15 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಈಗ ಎಲ್ಲರೂ ಗುಣಮುಖರಾಗಿದ್ದಾರೆ. “ಇಡೀ ಕುಟುಂಬಕ್ಕೆ ಕೋವಿಡ್ ಸೋಂಕು ಬಂದಾಗ ನಿಜಕ್ಕೂ ಆತಂಕ ಉಂಟಾಗಿತ್ತು. ಆಸ್ಪತ್ರೆಗೆ ಸೇರಿದ ಎರಡು ದಿನಕ್ಕೆ ಇದು ಅಂತಹ ಕಾಯಿಲೆಯಲ್ಲ ಎನ್ನುವ ಧೈರ್ಯಬಂತು. ನಮ್ಮ ಕುಟುಂಬ ಒಂದು ಪ್ರವಾಸಕ್ಕೆ ಹೋದಂತೆ ಆಸ್ಪತ್ರೆಗೆ ಹೋಗಿ ಬಂದಿದ್ದೇವೆ. ಕೋವಿಡ್ ಬಂತು ಎಂದು ಆತಂಕಕ್ಕೆ ಒಳಗಾಗಬೇಡಿ ಆರಾಮಾಗಿರಿ’ ಕೋವಿಡ್ ವನ್ನು ಸಾಮಾನ್ಯ ರೋಗದಂತೆ ಎದುರಿಸಿ ಎಂದು ವಿಶ್ವಾಸ ತುಂಬಿದರು.

ಭಯ ಬೇಡ; ನಿರ್ಲಕ್ಷ್ಯವೂಸಲ್ಲ: ಆರ್ಯಶ್ರೀನಿವಾಸ್‌ :  ಕೋವಿಡ್ ಸೋಂಕು ಭಯಾನಕ ಅಲ್ಲ; ಹಾಗಂತ ನಿರ್ಲಕ್ಷ್ಯವೂ ಬೇಡ ಎನ್ನುತ್ತಾರೆ ಹೆಮ್ಮಿಗೆಪುರ ವಾರ್ಡ್‌ನ ಪಾಲಿಕೆ ಸದಸ್ಯ ಆರ್ಯಶ್ರೀನಿವಾಸ್‌. ಕೋವಿಡ್ ಸೋಂಕಿನಿಂದ ನಮ್ಮೊಂದಿಗೆ ಇನ್ನೂ 10 ವರ್ಷ ಬದುಕುತ್ತಿದ್ದ ವಯಸ್ಸಾದವರು, ಕ್ಯಾನ್ಸರ್‌ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದವರನ್ನು ಕಳೆದುಕೊಳ್ಳುತ್ತಿದ್ದೇವೆ. ಯುವಕರು ಹಾಗೂ ಸದೃಢವಾಗಿರುವವರಿಗೆ ಕೋವಿಡ್ ಬಂದರೂ ಅಪಾಯದಿಂದ ದಾಟಿ ಬರುತ್ತಾರೆ. ಆದರೆ, ನಮ್ಮೊಂದಿಗೆ ಇರುವ ವಯಸ್ಸಾದವರು ಹಾಗೂ ಬೇರೆ ಕಾಯಿಲೆಗಳಿಂದ ಬಳಲುತ್ತಿರುವವರು ಈ ಸೋಂಕಿನಿಂದ ಹೊರ ಬರುವುದಕ್ಕೆ ಕಷ್ಟವಾಗುತ್ತದೆ. ಹೀಗಾಗಿ, ಇನ್ನು ಕೆಲವು ತಿಂಗಳ ಮಟ್ಟಿಗೆ ಜನ ಹೆಚ್ಚು ಸೇರುವ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ ಎಂದು ಜನರಿಗೆ ಮನವಿ ಮಾಡಿದರು. ಶ್ರೀನಿವಾಸ್‌ ಸದ್ಯ ಕೋವಿಡ್ ಮುಕ್ತರಾಗಿದ್ದು, ಹೋಂಕ್ವಾರಂಟೈನ್‌ನಲ್ಲಿದ್ದಾರೆ.

 ಜನಕ್ಕೆ ಮಾಹಿತಿ ನೀಡಿದರೆ ಸಾಕು: ಮುಜಾಹಿದ್‌ ಪಾಷಾ :  ಕೋವಿಡ್ ಸೋಂಕಿನ ಬಗ್ಗೆ ಜನಕ್ಕೆ ತುಂಬಾ ಆತಂಕ ಇದೆ. ಈ ಬಗ್ಗೆ ಜನಕ್ಕೆ ಕೌನ್ಸೆಲಿಂಗ್‌ ನೀಡಬೇಕು ಎನ್ನುವುದು ಸಿದ್ಧಾಪುರ ವಾರ್ಡ್‌ ಸದಸ್ಯ ಎ. ಮುಜಾಹಿದ್‌ ಪಾಷಾ ಅಭಿಪ್ರಾಯ. ” ಕೋವಿಡ್ ಗೆ ಉಳಿದ ಸೋಂಕಿನಂತೆ ನಿತ್ಯ ಪರೀಕ್ಷೆಗೊಳಪಡುವ ಅವಶ್ಯಕತೆ ಇಲ್ಲ. ಸೊಂಕು ದೃಢಪಟ್ಟು ಆರೈಕೆ ಕೇಂದ್ರದಲ್ಲಿರುವವರು ನಮಗೆ ವೈದ್ಯರು ಪರೀಕ್ಷೆ ಮಾಡುತ್ತಿಲ್ಲ. ವಿಚಾರಿಸುತ್ತಿಲ್ಲ ಎಂದು ಭಯ  ಬೀಳುವ ಅವಶ್ಯಕತೆ ಇಲ್ಲ. ಸೋಂಕು ಗೆಲ್ಲಬೇಕಾದರೆ, ನಾವು ಎಲ್ಲರಿಗೂ ಈ ಸೋಂಕಿನ ಬಗ್ಗೆ ಮಾಹಿತಿ ನೀಡಬೇಕು. ಆತ್ಮವಿಶ್ವಾಸ ಹಾಗೂ ಉತ್ತಮ ಆಹಾರ ಸೇವಿಸು ವುದರಿಂದ ಈ ಸೋಂಕಿನ ಯುದ್ಧದಲ್ಲಿ ಗೆಲ್ಲಬಹುದು’ ಎಂದರು.

ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಹೋಂಕ್ವಾರಂಟೈನ್‌ ಆಗಿ, ವರದಿ ಬರುವವರೆಗೆ ಓಡಾಡಬೇಡಿ. ಸೋಂಕು ಪ್ರಥಮ ಹಂತದಲ್ಲಿ ಇರುವಾಗಲೇ ಸೋಂಕು ಪರೀಕ್ಷೆಗೆ ಒಳಗಾಗಿ ತಡ ಮಾಡಿದರೆ, ಉಸಿರಾಟ ಸಮಸ್ಯೆ ಆಗುವ ಹಂತಕ್ಕೆ ಹೋಗುತ್ತದೆ. ಹೀಗಾಗಿ, ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಎಂದು ಮನವಿ ಮಾಡಿದರು. ಅಂದಹಾಗೆ, ಮುಜಾಹಿದ್‌ ಪಾಷಾ ಅವರು ಈಗ ಗುಣಮುಖರಾಗಿದ್ದು, ಮತ್ತೆ ವಾರ್ಡ್‌ನ ಕೆಲಸದಲ್ಲಿ ಸಕ್ರಿಯವಾಗಿದ್ದಾರೆ.

 

-ಹಿತೇಶ್‌ ವೈ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.