ವಿದೇಶಿ ಪ್ರಯಾಣಿಕರಿಗೆ ಕೋವಿಡ್ ವರದಿ ಕಡ್ಡಾಯ
Team Udayavani, Dec 24, 2020, 12:33 PM IST
ಬೆಂಗಳೂರು: ರೂಪಾಂತರ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ವಿದೇಶದಿಂದರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್ ಸೋಂಕು ಪರೀಕ್ಷಾ ವರದಿ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಹೊರ ದೇಶಗಳಿಂದ ರಾಜ್ಯ ಬೆಂಗಳೂರು ಮತ್ತು ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರುಮತ್ತು ಕಾರವಾರಬಂದರುಗಳಿಗೆ ಆಗಮಿಸುವವರು ಪ್ರಯಾಣ ಆರಂಭಕ್ಕೂ72 ಗಂಟೆ ಒಳಗೆ ನಡೆಸಿರುವ ಕೋವಿಡ್ ಸೋಂಕು ಪರೀಕ್ಷಾ ವರದಿಯನ್ನುಕಡ್ಡಾಯವಾಗಿ ಹೊಂದಿರಬೇಕು. ಒಂದು ವೇಳೆ ಪರೀಕ್ಷಾ ವರದಿ ಇಲ್ಲದವರು ವಿಮಾನ ನಿಲ್ದಾಣದಲ್ಲಿಯೇ ಲಭ್ಯವಿರುವ ಪರೀಕ್ಷಾ ಕೇಂದ್ರದಲ್ಲಿ ಉಚಿತ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಿದೆ. ಎಕ್ಸ್ಪ್ರೆಸ್ ಪರೀಕ್ಷೆಗೂ ಅವಕಾಶವಿದ್ದು, ಶುಲ್ಕ ಪಾವತಿಸಬೇಕಾಗುತ್ತದೆ. ಪರೀಕ್ಷಾ ವರದಿಬರುವವರೆಗೂ ಹೋಂ ಕ್ವಾರಂಟೈನ್ನಲ್ಲಿರಬೇಕು. ಇನ್ನುನಿಲ್ದಾಣ ಮತ್ತು ಬಂದರಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ವಿಮಾನ ನಿಲ್ದಾಣ ಪ್ರಾಧಿಕಾರ ಜತೆಗೂಡಿ ಪ್ರಯಾಣಿಕರ ತಪಾಸಣೆಮತ್ತುಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇಂಗ್ಲೆಂಡ್ನಿಂದ ಬಂದವರಿಗೆ ಕಡ್ಡಾಯ ಪರೀಕ್ಷೆ :
ಬೆಂಗಳೂರು: ಇಂಗ್ಲೆಂಡ್ನಿಂದ ಡಿ.21ರಿಂದ23ರವರೆಗೆ ಭಾರತಕ್ಕೆ ಬಂದಿರುವ ಪ್ರಯಾಣಿಕರಿಗೆ ರಾಜ್ಯ ವಿಮಾನ ನಿಲ್ದಾಣಮತ್ತು ಬಂದರಿನಲ್ಲಿಕಡ್ಡಾಯ ಕೋವಿಡ್ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಪ್ರಮಾಣಿತ ಕಾರ್ಯಚರಣೆ ವಿಧಾನ (ಎಸ್ಒಪಿ) ಹೊರಡಿಸಿದೆ.
ಪ್ರಯಾಣಿಕರು ಪರೀಕ್ಷಾ ವರದಿಯನ್ನು ತಂದಿದ್ದರೂ ಮತ್ತೂಮ್ಮೆ ಪರೀಕ್ಷೆ ನಡೆಸಬೇಕಿದೆ. ವರದಿ ಪಾಸಿಟಿವ್ ಬಂದರೆಅವರ ಗಂಟಲು ಮಾದರಿಯನ್ನು ವಂಶವಾಹಿನಿ ಪರೀಕ್ಷೆಗೆ ಎನ್ಸಿಬಿಎಸ್ ಅಥವಾ ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಬೇಕು. ಆ ಸೋಂಕಿತರಿಗೆ ಹೋಂ ಕ್ವಾರಂಟೈನ್ ಅವಕಾಶವಿಲ್ಲ. ಜಿಲ್ಲಾಡಳಿತ, ಬಿಬಿಎಂಪಿ ಪ್ರತ್ಯೇಕ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕು. ಅಗತ್ಯವಿದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕ್ರಮ ಕೈಗೊಳ್ಳಬೇಕು.ನೆಗೆಟಿವ್ ಬಂದರೆ ಕಡ್ಡಾಯ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಇರಬೇಕು ಎಂದು ತಿಳಿಸಲಾಗಿದೆ.
ಒಂದು ವೇಳೆ ವಂಶವಾಹಿನಿ ಪರೀಕ್ಷೆ ಫಲಿತಾಂಶದಲ್ಲಿ ಬ್ರಿಟನ್ ರೂಪಾಂತರ ಕೋವಿಡ್ ವೈರಾಣು ಎಂದು ಪತ್ತೆಯಾದರೆ ಮುಂದಿನ 14 ದಿನಗಳವರೆಗೂಆಸ್ಪತ್ರೆಯ ಐಸೋಲೇಷನ್ ಯುನಿಟಿನಲ್ಲಿಡಬೇಕು. ಆ ನಂತರಮತ್ತೂಮ್ಮೆ ಪರೀಕೆ Ò ನಡೆಸಿ ನೆಗೆಟಿವ್ ಬಂದರೆ ಬಿಡುಗಡೆ ಮಾಡಬಹುದೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ