ಪ್ರತಿಭಟನೆ ಸ್ಥಳಗಳಲ್ಲೂ ಕೋವಿಡ್ ಪರೀಕ್ಷೆ
Team Udayavani, Dec 16, 2020, 12:44 PM IST
ಬೆಂಗಳೂರು: “ನಗರದಲ್ಲಿ ಇನ್ನು ಮುಂದೆ ಪ್ರತಿಭಟನ ನಡೆಯುವ ಸ್ಥಳಗಳಲ್ಲೂ ಕೋವಿಡ್ ಪರೀಕ್ಷೆ ಮಾಡಲಿದ್ದು ಇದಕ್ಕಾಗಿ ಮೊಬೈಲ್ ಸೆಂಟರ್ ಪ್ರಾರಂಭಿಸಲಾಗುವುದು’ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದರು.
ಕಳೆದ ಒಂದು ವಾರದಿಂದ ನಡೆಯುತ್ತಿರುವ ನಿರಂತರ ಪ್ರತಿಭಟನೆ ಹಾಗೂ ಹೋರಾಟಗಳಿಂದ ಹೆಚ್ಚು ಜನ ಒಂದೇ ಜಾಗದಲ್ಲಿ ಹೆಚ್ಚು ಜನ ಗುಂಪು ಸೇರಿದ್ದು, ಕೋವಿಡ್ ಸೋಂಕು ಹಬ್ಬುವ ಭೀತಿ ಶುರುವಾಗಿದೆ. ಈ ಸಂಬಂಧ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ನಗರದಲ್ಲಿ ಹೆಚ್ಚು ಜನ ಸೇರುವ ಹಾಗೂ ಹೋರಾಟ, ಪ್ರತಿಭಟನೆ ನಡೆಯುವ ಸ್ಥಳಗಳಲ್ಲೂ ಮೊಬೈಲ್ ವಾಹನದ ಮೂಲಕ ಸೋಂಕು ಪರೀಕ್ಷೆ ನಡೆಸಲಾಗುವುದು. ಈಗಾಗಲೇ ಜನನಿಬಿಡ ಪ್ರದೇಶಗಳಲ್ಲಿ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ.
ಸೆರೊ ಸರ್ವಲೈನ್ಸ್ ವರದಿ ಆಧಾರದ ಮೇಲೆ ನಗರದ ಹೊರವಲಯ, ಕೆಲವು ನಿರ್ದಿಷ್ಟ ವಾರ್ಡ್ ಗಳಲ್ಲಿ ಪರೀಕ್ಷೆ ಹೆಚ್ಚಿಸಲಾಗಿದೆ. ನಿತ್ಯ ಸರಾಸರಿ 41,500 ಜನರಿಗೆ ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಕೋವಿಡ್ ದೃಢಪಡುವುದು ಕಡಿಮೆಯಾದರೂ, ಪರೀಕ್ಷೆ ಕಡಿಮೆ ಮಾಡುವುದಿಲ್ಲ ಎಂದು ಆಯುಕ್ತರು ಮಾಹಿತಿ ನೀಡಿದರು.
ನಗರದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಎಂಟಿಸಿ ಸಿಬ್ಬಂದಿ ಸಾರ್ವಜನಿಕರೊಂದಿಗೆ ಹೆಚ್ಚು ಸೇರುವುದರಿಂದ ಇವರಿಗೆ ಪರೀಕ್ಷೆ ನಡೆಸುವ ಅವಶ್ಯಕತೆ ಇದೆ. ಈ ಸಂಬಂಧ ಬಿಎಂಟಿಸಿ ಸಿಬ್ಬಂದಿಗೆ ಎಲ್ಲಿ ಸೋಂಕು ಪರೀಕ್ಷೆ ನಡೆಸಬೇಕು ಎನ್ನುವ ಬಗ್ಗೆ ಮಾಹಿತಿ ನೀಡುವಂತೆಕೋರಲಾಗಿದೆ ಎಂದರು.
2 ದಿನಗಳಲ್ಲಿ ಕೋವಿಡ್ ಲಸಿಕೆ ಮಾಹಿತಿ ರವಾನೆ: ನಗರದಲ್ಲಿ ಮೊದಲ ಹಂತದಲ್ಲಿ ವಾರಿಯರ್ಸ್ಗೆ ಕೋವಿಡ್ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಬಿಬಿ ಎಂಪಿ ಕೇಂದ್ರ ಕಚೇರಿ ಕೋವಿಡ್ ವಾರ್ ರೂಮ್ ನಲ್ಲಿ ಲಸಿಕೆ ತೆಗೆದುಕೊಳ್ಳುವವರ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಪಾಲಿಕೆ ಸಿಬ್ಬಂದಿ 3ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿಯವರೆಗೆ 1.49 ಲಕ್ಷ ಜನ ಮಾಹಿತಿ ಸಂಗ್ರಹ ಮಾಡಲಾಗಿದೆ. ಮೆಡಿಕಲ್ ಕಾಲೇಜಿನ ಸಿಬ್ಬಂದಿ , ಆರೋಗ್ಯ ಇಲಾಖೆ ಸಿಬ್ಬಂದಿಯೂ ಮಾಹಿತಿ ಅಪ್ಲೋಡ್ ಮಾಡುತ್ತಿದ್ದಾರೆ. 2 ದಿನದಲ್ಲಿ ಮಾಹಿತಿ ಸಂಗ್ರಹ ಪೂರ್ಣಗೊಳ್ಳಲಿದ್ದು, ಕೇಂದ್ರಕ್ಕೆ ಮಾಹಿತಿ ರವಾನೆ ಮಾಡಲಿದ್ದೇವೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ