Gold Theft: ಚಿನ್ನಾಭರಣ ದೋಚಲು ದರೋಡೆ ಕಥೆ ಸೃಷ್ಟಿ!


Team Udayavani, Oct 12, 2023, 12:18 PM IST

tdy-10

ಬೆಂಗಳೂರು: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚುವ ಉದ್ದೇಶದಿಂದ ನೆರೆ ರಾಜ್ಯಕ್ಕೆ ಡೆಲಿವರಿ ಮಾಡಲು ಮಾಲೀಕ ಕೊಟ್ಟ ಚಿನ್ನಾಭರಣವನ್ನು ಗನ್‌ ತೋರಿಸಿ ದುಷ್ಕರ್ಮಿಗಳು ದರೋಡೆ ಮಾಡಿದ್ದಾರೆ ಎಂದು ಸಿನಿಮಾ ಕಥೆ ಸೃಷ್ಟಿಸಿದ ಮಾರಾಟ ಪ್ರತಿನಿಧಿ ಹಾಗೂ ಆತನ ಸಹಚರ ಹಲಸೂರು ಗೇಟ್‌ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ರಾಜಸ್ಥಾನ ಮೂಲದ ಲಾಲ್‌ಸಿಂಗ್‌(23) ಮತ್ತು ಆತನ ಸಹಚರ ರಾಜ್‌ ಪಾಲ್‌(24) ಬಂಧಿತರು. ಆರೋಪಿಗಳಿಂದ 75 ಲಕ್ಷ ರೂ. ಮೌಲ್ಯದ 1 ಕೆ.ಜಿ. 262 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯ ಲಾಗಿದೆ. ಅಭಿಷೇಕ್‌ ಮತ್ತು ಪ್ರಕಾಶ್‌ಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಗರ್ತರಪೇಟೆ ಜ್ಯುವೆಲ್ಲರಿ ಅಂಗಡಿ ಮಾಲೀಕ ಅಭಿಷೇಕ್‌ ಜೈನ್‌ ಬಳಿ ಲಾಲ್‌ಸಿಂಗ್‌ ಮಾರಾಟ ಪ್ರತಿನಿಧಿಯಾಗಿದ್ದು, ಮಾಲಿಕರ ವಿಶ್ವಾಸ ಗಳಿಸಿದ್ದ. ಹೀಗಾಗಿ ಮಾಲಿಕ ಅಭಿಷೇಕ್‌ ಜೈನ್‌, ಆಂಧ್ರಪ್ರದೇಶದ ನೆಲ್ಲೂರಿನ ಮುಖೇಶ್‌ ಮತ್ತು ಶುಭಂ ಗೋಲ್ಡ್‌ ಜುವೆಲ್ಲರಿ ಅಂಗಡಿಗೆ ಡೆಲಿವರಿ ನೀಡುವಂತೆ ಲಾಲ್‌ಸಿಂಗ್‌ 1 ಕೆ.ಜಿ. 262 ಗ್ರಾಂ ಚಿನ್ನಾಭರಣ ಕೊಟ್ಟಿದ್ದ. ಆದರೆ, ಆರೋಪಿ ಮಾರ್ಗ ಮಧ್ಯೆಯೇ ಮಾಲಿಕನಿಗೆ ಫೋನ್‌ ಮಾಡಿ ಚಿನ್ನಾಭರಣ ದರೋಡೆ ಮಾಡಿದ್ದಾರೆ ಎಂದು ಸುಳ್ಳು ಹೇಳಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಗನ್‌ ತೋರಿಸಿ ದರೋಡೆ ಕಥೆ! ಚಿನ್ನಾಭರಣ ಸಮೇತ ನೆಲ್ಲೂರಿನ ಕಾಳಹಸ್ತಿಗೆ ಹೋದ ಲಾಲ್‌ ಸಿಂಗ್‌, ಅಲ್ಲಿಂದಲೇ ಮಾಲಿಕ ಅಭಿಷೇಖ್‌ ಜೈನ್‌ಗೆ ಕರೆ ಮಾಡಿ, ಯಾರೋ ದುಷ್ಕರ್ಮಿಗಳು ತನ್ನ ಹಣೆಗೆ ಗನ್‌ ಇಟ್ಟು, ಕೈಗಳಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣದ ಬ್ಯಾಗ್‌ ಕಿತ್ತುಕೊಂಡು ಹೋಗಿದ್ದರು ಎಂದು ಹೇಳಿ, ಫೋನ್‌ ಸ್ವಿಚ್ಡ್ ಆಫ್ ಮಾಡಿದ್ದ. ಆ ನಂತರ ಅಭಿಷೇಕ್‌ ಜೈನ್‌ ನಿರಂತರವಾಗಿ ಕರೆ ಮಾಡಿದರೂ ಯಾವುದೇ ಪ್ರಯೋಜನವಾ ಗಿರಲಿಲ್ಲ. ಹೀಗಾಗಿ ಅನುಮಾನಗೊಂಡು ಖುದ್ದು ಕಾಳಹಸ್ತಿಗೆ ತೆರಳಿ, ಲಾಲ್‌ಸಿಂಗ್‌ನನ್ನು ಹುಡುಕಿ ಬೆಂಗಳೂರಿಗೆ ಕರೆತಂದು ಹಲಸೂರು ಗೇಟ್‌ ಠಾಣೆಗೆ ದೂರು ನೀಡಿದ್ದರು. ಹಲಸೂರು ಗೇಟ್‌ ಠಾಣೆ ಇನ್‌ಸ್ಪೆಕ್ಟರ್‌ ಹನುಮಂತ ಭಜಂತ್ರಿ ನೇತೃತ್ವದ ತಂಡ ಲಾಲ್‌ಸಿಂಗ್‌ನನ್ನು ವಿಚಾರಣೆ ನಡೆಸಿ ಬಂಧಿಸಿದೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು. ‌

ಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಸತೀಶ್‌ ಕುಮಾರ್‌, ಕೇಂದ್ರ ವಿಭಾಗದ ಡಿಸಿಪಿ ಎಚ್‌.ಟಿ.. ಶೇಖರ್‌, ಹಲಸೂರು ಗೇಟ್‌ ಎಸಿಪಿ ಶಿವಾನಂದ ಚಲವಾದಿ ಇದ್ದರು.

ನಗರದಲ್ಲೇ ಬ್ಯಾಗ್‌ ಹಸ್ತಾಂತರ: ಮಾಲಿಕ ತನ್ನನ್ನೇ ಆಂಧ್ರಪ್ರದೇಶಕ್ಕೆ ಕಳುಹಿಸುತ್ತಾನೆ ಎಂಬುದು ಖಚಿತವಾಗುತ್ತಿದ್ದಂತೆ, ರಾಜ್‌ಪಾಲ್‌ ಹಾಗೂ ಇತರೆ ಆರೋಪಿಗಳನ್ನು ಬೆಂಗಳೂರಿಗೆ ಕರೆಯಿಸಿಕೊಂಡಿದ್ದಾನೆ. ಬಳಿಕ ಚಿನ್ನಾಭರಣ ತುಂಬಿದ್ದ ಬ್ಯಾಗ್‌ ಅನ್ನು ಬೆಂಗಳೂರಿನಲ್ಲೇ ಸಹಚರರಿಗೆ ಹಸ್ತಾಂತರಿಸಿ, ಅವರೊಂದಿಗೆ ತಾನೂ ರಾಜಸ್ಥಾನಕ್ಕೆ ಪರಾರಿಯಾಗಿದ್ದ. ಬಳಿಕ ನೆಲ್ಲೂರಿನ ಕಾಳಹಸ್ತಿಗೆ ಹೋಗಿ ಅಲ್ಲಿಂದ ಅಂಗಡಿ ಮಾಲಿಕನಿಗೆ ಕರೆ ಮಾಡಿ ದರೋಡೆ ಕಥೆ ಹೇಳಿದ್ದ. ಅಲ್ಲದೆ, ದರೋಡೆ ನಿಜವೆಂದು ನಂಬಿಸಲು ಬ್ಲೇಡ್‌ನಿಂದ ತನ್ನ ಎರಡು ಕೈಗಳನ್ನು ಕೊಯ್ದುಕೊಂಡಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.