Crime: ಆಸ್ತಿ ವಿಚಾರಕ್ಕೆ ಸಂಬಂಧಿಕನಿಂದ ಜೋಡಿ ಕೊಲೆ


Team Udayavani, Feb 8, 2024, 1:06 PM IST

Crime: ಆಸ್ತಿ ವಿಚಾರಕ್ಕೆ ಸಂಬಂಧಿಕನಿಂದ ಜೋಡಿ ಕೊಲೆ

ಬೆಂಗಳೂರು: ಆಸ್ತಿಯ ವಿಚಾರಕ್ಕೆ ಸಂಬಂಧಿಕನೇ ಇಬ್ಬರು ವ್ಯಾಪಾರಿಗಳನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ಬುಧವಾರ ಸಂಜೆ ಕುಂಬಾರಪೇಟೆಯ ಅಂಗಡಿಯೊಂದರಲ್ಲಿ ನಡೆದಿದೆ.

ಪದ್ಮನಾಭನಗರದ ಸುರೇಶ್‌(55), ಮಹೇಂದ್ರ (58) ಕೊಲೆಯಾದವರು.

ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ಕುಂಬಾರ ಪೇಟೆಯಲ್ಲಿರುವ ಹರಿ ಮಾರ್ಕೇಟಿಂಗ್‌ ಎಂಬ ಕಿಚನ್‌ ಉಪಕರಣ ಮಾರಾಟ ಮಾಡುವ ಅಂಗಡಿಗೆ ನುಗ್ಗಿರುವ ದುಷ್ಕರ್ಮಿಯೊಬ್ಬ ಇಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಕನೇ ಕೃತ್ಯ ಎಸಗಿರುವುದು ಗೊತ್ತಾಗಿದೆ ಎಂದು ಎಂದು ಕೇಂದ್ರ ವಿಭಾಗದ ಡಿಸಿಪಿ ಎಚ್‌.ಟಿ.ಶೇಖರ್‌ ತಿಳಿಸಿದ್ದಾರೆ.

ಈ ಸಂಬಂಧ ಹಲಸೂರು ಗೇಟ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಭದ್ರಿಪ್ರಸಾದ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ರಕ್ಷಣೆ ಮಾಡಲು ಮುಂದಾದವನ ಹತ್ಯೆ: ಸುರೇಶ್‌ ಮತ್ತು ಮಹೇಂದ್ರ ಇಬ್ಬರು ಸ್ನೇಹಿತರಾಗಿದ್ದು, ಸುರೇಶ್‌ ಅಂಗಡಿಗೆ ಮಹೇಂದ್ರ ಬಂದಿದ್ದ. ಇನ್ನು ಕೊಲೆಯಾದ ಸುರೇಶ್‌ ಮತ್ತು ಪೊಲೀಸರ ವಶದಲ್ಲಿರುವ ಆರೋಪಿ ಭದ್ರ ಇಬ್ಬರು ದೂರದ ಸಂಬಂಧಿಕರಾಗಿದ್ದು, ಆಸ್ತಿಯ ವಿಚಾರವಾಗಿ ಜಗಳವಾಗಿತ್ತು. ಈ ಹಿನ್ನೆಲೆಯಲ್ಲಿ ಭದ್ರ, ಸುರೇಶ್‌ನನ್ನು ಕೊಲೆ ಮಾಡಲು ಉಪ್ಪಾರಪೇಟೆಯ ಅಂಗಡಿಗೆ ಬುಧವಾರ ರಾತ್ರಿ ಆಗಮಿಸಿದ್ದ. ಅಂಗಡಿಗೆ ಬಂದವನೆ ಏಕಾಏಕಿ ಚಾಕುವಿನಿಂದ ಸುರೇಶ್‌ ಮೇಲೆ ಹಲ್ಲೆ ಮುಂದಾಗಿದ್ದ. ಈ ವೇಳೆ ಆತನ ರಕ್ಷಣೆಗೆ ಧಾವಿಸಿದ್ದ ಮಹೇಂದ್ರನ ಮೇಲು ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಗೆಳೆಯ ಮೇಲೆ ಹಲ್ಲೆಯಾಗುತ್ತಿರುವುದನ್ನು ಗಮನಿಸಿ ಕೂಡಲೇ ಆತನ ರಕ್ಷಣೆಗೆ ಧಾವಿಸಿದ್ದಾನೆ. ಆದರೆ ಆತನ ಮೇಲೆಯೂ ಚಾಕುವಿನಿಂದ ಆರೋಪಿ ಭದ್ರಿ ಪ್ರಸಾದ್‌ ಹಲ್ಲೆ ನಡೆಸಿದ್ದಾನೆ. ಇರಿತಕ್ಕೆ ಒಳಗಾದ ಸುರೇಶ್‌ ಅಂಗಡಿಯ ಒಳಗಡೆ ಇದ್ದ ಕುರ್ಚಿ ಮೇಲೆಯೇ ಒದ್ದಾಡಿ ಪ್ರಾಣಬಿಟ್ಟದ್ದು, ಮಹೇಂದ್ರ ಅಂಗಡಿಯ ಹೊರಗಡೆ ಬಿದ್ದು ಒದ್ದಾಡಿ ಪ್ರಾಣಬಿಟ್ಟಿದ್ದಾನೆ. ಇನ್ನು ಆರೋಪಿ ಭದ್ರಿ ಪ್ರಸಾದ್‌ ಎಚ್‌ ಎಸ್‌ಆರ್‌ ಲೇಔಟ್‌ನಲ್ಲಿ ಎಲೆಕ್ಟ್ರಿಕಲ್‌ ಶಾಪ್‌ ಇಟ್ಟುಕೊಂಡಿದ್ದಾನೆ. ಸುರೇಶ್‌ಗೂ ಹಾಗೂ ಭದ್ರಿಪ್ರಸಾದ್‌ಗೆ ಆಸ್ತಿಯ ವಿಚಾರಕ್ಕೆ ಜಗಳವಾಗಿತ್ತು ಎಂದು ಪೊಲೀಸರು ಹೇಳಿದರು.

ಬುಧವಾರ ರಾತ್ರಿ ಕುಂಬಾರ ಪೇಟೆಯ ಅಂಗಡಿಯೊಂದರಲ್ಲಿ ಜೋಡಿ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿ ಕನೇ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗು ತ್ತಿದೆ. ತನಿಖೆ ಮುಂದುವರಿದಿದೆ. -ಎಚ್‌.ಟಿ.ಶೇಖರ್‌, ಕೇಂದ್ರ ವಿಭಾಗದ ಡಿಸಿಪಿ

 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.