Crime: ಪೈಂಟಿಂಗ್ ಕೆಲಸಕ್ಕೆ ಬಂದು ಚಿನ್ನಾಭರಣ ಕಳ್ಳತನ: ಪೊಲೀಸರಿಂದ ಓರ್ವನ ಸೆರೆ
Team Udayavani, Aug 12, 2023, 12:54 PM IST
ಬೆಂಗಳೂರು: ಪೈಂಟಿಗ್ ಕೆಲಸಕ್ಕೆ ಬಂದು ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಉಮೇಶ್ ಪ್ರಸಾದ್ ಜಾಧವ್ ಬಂಧಿತ. ಬಂಧಿತನಿಂದ 6 ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಇತ್ತೀಚೆಗೆ ಉಮೇಶ್ ಕೆಲಸ ಅರಸಿಕೊಂಡು ಬೆಂಗಳೂರಿಗೆ ಬಂದು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ. ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಮನೆ ಮಾಲಿಕರ ಕಣ್ಣು ತಪ್ಪಿಸಿ ಕಬೋರ್ಡನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ. ಈ ಕುರಿತು ಮನೆ ಮಾಲಿಕರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಬಸವನಗುಡಿ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: KhubaVsChauhan: ಪ್ರಭು ಚವ್ಹಾಣ್ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆಗೆ ಮುಂದಾದ ಖೂಬಾ