ಪ್ರೀತಿ ನಿರಾಕರಿಸಿದಳೆಂದು ಯುವತಿ ಫೋಟೋ ಅಶ್ಲೀಲವಾಗಿ ಎಡಿಟ್: ಆರೋಪಿ ಸೆರೆ
Team Udayavani, Sep 22, 2021, 11:34 AM IST
ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಯುವತಿ, ಆಕೆಯ ತಾಯಿ ಮತ್ತು ಸಹೋದರನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಇನ್ ಸ್ಟ್ರಾ ಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದ ಕಲಬುರಗಿ ಮೂಲದ ಎಲೆಕ್ಟ್ರಿಷಿಯನ್ ಆಗ್ನೇಯ ವಿಭಾಗದ ಸಿಇಎನ್ (ಸೆನ್) ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಮೂಲದ ಎಲೆಕ್ಟ್ರಿಷಿಯನ್ ಬಂಧಿತ. ಆರೋಪಿ ಎಲೆಕ್ಟ್ರಿಷಿಯನ್ ವಿದ್ಯಾಭ್ಯಾಸ ಮಾಡಿದ್ದು, 2 ವರ್ಷಗಳ ಬೆಂಗಳೂರಿನಲ್ಲಿಯೇ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಲಾಕ್ಡೌನ್ ಸಮಯದಲ್ಲಿ ಉದ್ಯೋಗ ಕಳೆದುಕೊಂಡು ಕಲಬುರಗಿಗೆ ತೆರಳಿದ್ದ. ಅಲ್ಲಿಯೂ ಕೆಲಸವಿಲ್ಲದೆ ಖಾಲಿಯಾಗಿದ್ದ. ಬಳಿಕ ಇನ್ಸ್ಟ್ರಾಗ್ರಾಂನಲ್ಲಿ “ಗುಡ್ ಬಾಯ್ ಬ್ಯಾಡ್ ಟ್ರೋಲ್ ’ ಎಂಬ ಟ್ರೋಲ್ ಪೇಜ್ ತೆರೆದಿದ್ದ. ಅಡ್ಮಿನ್ ಸಹಾಯದಿಂದ ಟ್ರೋಲ್ ಮಾಡುವುದನ್ನು ತಿಳಿದುಕೊಂಡಿದ್ದ. ಇನ್ ಸ್ಟ್ರಾಗ್ರಾಂನಲ್ಲಿ ಪರಿಚಯವಾದ ಬೆಂಗಳೂರಿನ ಯುವತಿಯ ಜತೆ ಸ್ನೇಹ ಬೆಳೆಸಿದ್ದ. ಬಳಿಕ ಆಕೆಯ ಮಗಳನ್ನು ಪ್ರೀತಿಸುವುದಾಗಿ ಹೇಳಿಕೊಂಡಿದ್ದು, ಆದರೆ, ಆಕೆ ನಿರಾಕರಿಸಿದ್ದಳು. ಅದರಿಂದ ಆಕ್ರೋಶಗೊಂಡ ಆರೋಪಿ, ಯುವತಿ, ಆಕೆಯ ತಾಯಿ, ಸಹೋದರನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿದ್ದು, ಅದನ್ನು “ರಿಪ್-ಅಭಿ’ ಎಂಬ ಖಾತೆಯಲ್ಲಿ ಹರಿಬಿಟ್ಟಿದ್ದ.
ಇದನ್ನೂ ಓದಿ :ದೀಪಿಕಾ ಪಡುಕೋಣೆ vs ಪಿವಿ ಸಿಂಧು : ಬ್ಯಾಡ್ಮಿಂಟನ್ ಆಡಿದ ತಾರೆಯರು
ಅಲ್ಲದೆ, ಆಕೆಯ ಮೊಬೈಲ್ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅದರಿಂದ ಬೇಸತ್ತ ಮಹಿಳೆ ಈತನ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಆರೋಪಿಯನ್ನು ಕಲಬುರಗಿಯಲ್ಲಿ ಬಂಧಿಸಲಾಗಿದೆ. ಆರೋಪಿಗೆ ಸಹಕಾರ ನೀಡಿದ ಮತ್ತೂಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ