ಕ್ಷುಲ್ಲಕ ವಿಚಾರಕ್ಕೆ ಬಾಲಕನ ಕೊಲೆ: ಸೆರೆ 

ಕುದುರೆ ಸವಾರಿಗೆ ಅವಕಾಶ ನೀಡದಕ್ಕೆ ಕೊಲೆ

Team Udayavani, Apr 10, 2023, 2:24 PM IST

ಕ್ಷುಲ್ಲಕ ವಿಚಾರಕ್ಕೆ ಬಾಲಕನ ಕೊಲೆ: ಸೆರೆ 

ಬೆಂಗಳೂರು: ಇತ್ತೀಚೆಗೆ ಪಿಳ್ಳಣ್ಣಗಾರ್ಡನ್‌ ಸಮೀಪದ ರೈಲು ಹಳಿ ಸಮೀಪದಲ್ಲಿ ಸತೀಶ್‌(15) ಎಂಬಾತನ ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಕಾಡುಗೊಂಡನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ.ಹಳ್ಳಿಯ ಮುಸ್ಲಿಂ ಕಾಲೋನಿ ನಿವಾಸಿ ಸುಹೇಲ್‌ ಉಲ್ಲಾ ಷರೀಫ್(19), ಪಿಳ್ಳಣ್ಣ ಗಾರ್ಡನ್‌ ನಿವಾಸಿ ಸೈಯದ್‌ ಶೋಯಿಬ್‌(20) ಮತ್ತು ಮೊಹಮ್ಮದ್‌ ಹುಸೇನ್‌ (18) ಬಂಧಿತರು. ಆರೋಪಿಗಳು ಏ.2ರಂದು ಸತೀಶ್‌ ಎಂಬಾತನನ್ನು ದೊಣ್ಣೆಗಳಿಂದ ಹೊಡೆದು ಕೊಲೆಗೈದು, ರೈಲು ಹಳಿ ಸಮೀಪದಲ್ಲಿ ಮೃತ ದೇಹ ಎಸೆದು ಹೋಗಿದ್ದರು. ಆರೋಪಿಗಳ ವಿಚಾರಣೆಯಲ್ಲಿ ಕುದುರೆ ಸವಾರಿಗೆ ಅವಕಾಶ ನೀಡದಕ್ಕೆ ಕೊಲೆ ಮಾಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ ಎಂದು ಪೂರ್ವ ವಿಭಾಗ ಡಿಸಿಪಿ ಡಾ.ಭೀಮಾಶಂಕರ್‌ ಗುಳೇದ್‌ ತಿಳಿಸಿದರು.

ಪಿಳ್ಳಣ್ಣ ಗಾರ್ಡನ್‌ ಬಳಿ ಕುದುರೆ ಸಾಕಿಕೊಂಡಿದ್ದ ಸತೀಶ್‌, ಕುದುರೆ ಮೇಲೆ ಜನರನ್ನು ಕೂರಿಸಿಕೊಂಡು ಒಂದು ರೌಂಡ್‌ ಹಾಕಿ ಹಣ ಪಡೆಯುತ್ತಿದ್ದ. ಅದರಿಂದಲೇ ಕುಟುಂಬ ನಿರ್ವಹಿಸುತ್ತಿದ್ದ. ಎರಡು ವಾರಗಳ ಹಿಂದೆ ರಿಚರ್ಡ್‌ ಪಾರ್ಕ್‌ ಬಳಿ ಬಂದ ಸುಹೇಲ್‌ ಉಲ್ಲಾ ಷರೀಫ್, ಕುದುರೆ ಮೇಲೆ ಹತ್ತಿ ಫೋಟೋ ತೆಗೆದುಕೊಳ್ಳಬೇಕು. ಕುದುರೆ ಕೊಡುವಂತೆ ಕೇಳಿದ್ದಾನೆ. ಆಗ ಸತೀಶ್‌ ನಿರಾಕರಿಸಿದ್ದ. ಅದರಿಂದ ಆಕ್ರೋಶಗೊಂಡ ಆರೋಪಿ, ಕಪಾಳಮೋಕ್ಷ ಮಾಡಿದ್ದ. ಅದೇ ದ್ವೇಷದಿಂದ 8 ದಿನಗಳ ಹಿಂದೆ ಲಿಂಗರಾಜುಪುರ ಬಳಿ ಬಂದಿದ್ದ ಸತೀಶ್‌ ಮತ್ತು ಸುಹೇಲ್‌ ಉಲ್ಲಾ ಷರೀಫ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ತನ್ನ ಇತರೆ ಸಹಚರರ ಜತೆ ಸೇರಿಕೊಂಡು ಬಿಲಾಲ್‌ ಮಸೀದಿ ಬಳಿ ಸತೀಶ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಪಿಳ್ಳಣ್ಣಗಾರ್ಡನ್‌ ರೈಲು ಹಳಿ ಬಳಿ ಕರೆದೊಯ್ದು ದೊಣ್ಣೆಗಳಿಂದ ಹೊಡೆದು ಕೊಲೆಗೈದು, ಮೃತದೇಹ ಎಸೆದು ಪರಾರಿಯಾಗಿದ್ದರು ಎಂದು ಅವರು ಹೇಳಿದರು.

ಆರೋಪಿಗಳ ಪತ್ತೆಗಾಗಿ ಸುಮಾರು 60-70 ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಲಾಗಿದ್ದು, ಘಟನೆಗೂ ಮೊದಲ ಒಂದು ವಾರದ ಹಿಂದಿನ ಸತೀಶ್‌ನ ದಿನಚರಿ ಮಾಹಿತಿ ಸಂಗ್ರಹಿಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಪ್ರಮುಖವಾಗಿ ಆರೋಪಿಗಳು ಸತೀಶ್‌ ಜತೆ ನಡೆದುಕೊಂಡು ಹೋಗುತ್ತಿದ್ದ ದೃಶ್ಯ ಪತ್ತೆಯಾಗಿತ್ತು. ಈ ಆಧಾರದ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಾಯಿಬಿಟ್ಟಿದ್ದಾರೆ ಎಂದು ಡಿಸಿಪಿ ಭೀಮಾಶಂಕರ್‌ ಗುಳೇದ್‌ ಹೇಳಿದರು.

ಕಾಡುಗೊಂಡನಹಳ್ಳಿ ಠಾಣಾಧಿಕಾರಿ ರೋಹಿತ್‌ ನೇತೃತ್ವದ ಪಿಎಸ್‌ಐ ಅಮರೇಶ್‌, ದುಂಡಪ್ಪ ನೇಗಿನಾಳ್‌ ಹಾಗೂ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.