ಐಷಾರಾಮಿ ಜೀವನಕ್ಕಾಗಿ ಮನೆ ಕಳವು; ಇಬ್ಬರ ಬಂಧನ
Team Udayavani, May 13, 2022, 11:00 PM IST
ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಮನೆ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರು ಗಿರಿನಗರ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ವೀರಭದ್ರನಗರ ನಿವಾಸಿ ನಾಗರಾಜು ಅಲಿಯಾಸ್ ಎಸಿ(24) ಮತ್ತು ಶೇಖರ್ ಅಲಿಯಾಸ್ ತಿಪ್ಪೆ(26) ಬಂಧಿತರು.
ಅವರಿಂದ 2.10 ಲಕ್ಷ ರೂ. ಮೌಲ್ಯದ 23 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ವಸ್ತು ಗ ಳು, 2 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಿಸಿದ್ದ 1 ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಬನಶಂಕರಿ 3ನೇ ಹಂತದ ವೀರಭದ್ರನಗರದ ನಿವಾಸಿ ಆಟೋ ಚಾಲಕ ರಮೇಶ್ ಎಂಬವರು ಮೇ 29ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬದ ಸಮೇತ ತಮಿಳುನಾಡಿಗೆ ತೆರಳಿದ್ದರು.
ಮೇ 2ರಂದು ತಡರಾತ್ರಿ 12.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಅಡುಗೆ ಮನೆಯ ವೆಂಟಿಲೇಟರ್ ಕತ್ತರಿಸಿ ಮನೆ ಪ್ರವೇಶಿಸಿ ಕಬೋರ್ಡ್ನಲ್ಲಿದ್ದ ಚಿನ್ನಾಭರಣ, ನಗದು, ವಾಹನದ ದಾಖಲೆಗಳು ಕಳವು ಮಾಡಿದ್ದರು. ಈ ಸಂಬಂಧ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ ರು.
ಬೆರಳಚ್ಚು ಸುಳಿವು ಆಧರಿಸಿ ಬಂಧನ:
ಘಟನಾ ಸ್ಥಳಕ್ಕೆ ಬಂದ ಬೆರಳಚ್ಚು ತಜ್ಞರು ಸಂಗ್ರಹಿಸಿದ ಸಾಕ್ಷ್ಯಾಗಳನ್ನುಪರಿಶೀಲಿಸಿದಾಗ, ಆರೋಪಿ ನಾಗರಾಜನ ಬೆರಳಚ್ಚಿಗೆ ಹೋಲಿಕೆಯಾಗಿದೆ.
ಈ ಸುಳಿವಿನ ಮೇರೆಗೆ ಮೊದಲಿಗೆ ನಾಗರಾಜನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ.
ಈತ ನೀಡಿದ ಮಾಹಿತಿ ಮೇರೆಗೆ ಮತ್ತೊಬ್ಬ ಆರೋಪಿ ಶೇಖರ್ನನ್ನು ಬಂಧಿಸಲಾಗಿದೆ. ಅವರ ಬಂಧನದಿಂದ ಗಿರಿನಗರ ಹಾಗೂ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಇಬ್ಬರು ಆರೋಪಿಗಳು ಅಪರಾಧ ಹಿನ್ನೆಲೆವುಳ್ಳವರಾಗಿದ್ದು, ಈ ಹಿಂದೆ ವಿಜಯನಗರ, ಗಿರಿನಗರಮ, ಜೆ.ಪಿ.ನಗರ, ಹನುಮಂತನಗರ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೆಲ ಪ್ರಕರಣಗಳಲ್ಲಿ ಜೈಲು ಸೇರಿದ್ದರು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ