ನಕಲಿ ಕಾರ್ಮಿಕರ ವಿರುದ್ಧ ಕ್ರಿಮಿನಲ್‌ ಕೇಸ್‌


Team Udayavani, Jul 24, 2018, 11:54 AM IST

nakali.jpg

ಬೆಂಗಳೂರು: ಗುತ್ತಿಗೆ ಪೌರಕಾರ್ಮಿಕರ ಪಟ್ಟಿಗೆ ಅಕ್ರಮವಾಗಿ ಸೇರ್ಪಡೆಗೊಂಡವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಮೇಯರ್‌ ಆರ್‌.ಸಂಪತ್‌ರಾಜ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವೇತನ ಪಾವತಿ ವಿಚಾರ ಸಂಬಂಧ ಸೋಮವಾರ ರಾಜರಾಜೇಶ್ವರಿನಗರ ವಲಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹಿಂದೆ ಪಾಲಿಕೆಯಲ್ಲಿ ಆಟೋ ಚಾಲಕರಾಗಿದ್ದ ಹೆಚ್ಚಿನವರು ಸದ್ಯ ಗುತ್ತಿಗೆ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಂಬ ದೂರುಗಳಿವೆ. ಹೀಗಾಗಿ ಎರಡೂ ಕಡೆಗಳಲ್ಲಿ ಕೆಲಸ ಮಾಡುವವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಿ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದ್ದಾರೆ.

ಮೇಯರ್‌ ಪ್ರಶ್ನೆಗೆ ಉತ್ತರಿಸಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಬಾಲಾಜಿ, ವಲಯದ 14 ವಾರ್ಡ್‌ಗಳಲ್ಲಿ ಒಟ್ಟು 1,698 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಒಂದು ವರ್ಷದೊಳಗಿನ ಸೇವಾವಧಿ ಹೊಂದಿರುವ 297 ಪೌರಕಾರ್ಮಿಕರಿದ್ದಾರೆ. ಆ ಪೈಕಿ 198 ಪೌರಕಾರ್ಮಿಕರಿಗೆ ಮಾತ್ರ ಜೂನ್‌ ತಿಂಗಳ ವೇತನ ಪಾವತಿಯಾಗಬೇಕಿದೆ ಎಂದು ಮಾಹಿತಿ ನೀಡಿದರು.

ಇದರಿಂದ ಕೆರಳಿದ ಮೇಯರ್‌, ಈಗಾಗಲೇ ಭೇಟಿ ನೀಡಿದ ಎಲ್ಲ 6 ವಲಯಗಳಲ್ಲಿ ಪೌರಕಾರ್ಮಿಕರಿಗೆ ಸಂಪೂರ್ಣ ವೇತನ ಪಾವತಿಯಾಗಿದೆ. ಆದರೆ, ಆರ್‌.ಆರ್‌.ನಗರ ವಲಯದಲ್ಲಿ ಮಾತ್ರ ಯಾಕೆ ಇನ್ನೂ 198 ಪೌರಕಾರ್ಮಿಕರಿಗೆ ವೇತನ ಬಾಕಿ ಉಳಿಸಿಕೊಂಡಿದ್ದೀರಾ? ನಾವೇನು ಕಾಟಾಚಾರಕ್ಕೆ ಸಭೆ ನಡೆಸುತ್ತಿದ್ದೇವೆಯೇ? ಕೌನ್ಸಿಲ್‌ ಆದೇಶಕ್ಕೆ ಕಿಮ್ಮತ್ತಿಲ್ಲವೇ? ಎಂದು ಕಿಡಿಕಾರಿದರು.

198 ಪೌರಕಾರ್ಮಿಕರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ವಲಯದ ಜಂಟಿ ಆಯುಕ್ತರಿಗೆ ಶೋಕಾಸ್‌ ನೋಟೀಸ್‌ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಮೂರು ದಿನಗಳಲ್ಲಿ ಎಲ್ಲ ವಾರ್ಡ್‌ಗಳ ಪೌರಕಾರ್ಮಿಕರ ವೇತನ ಪಾವತಿಯಾಗಿರುವ ಮಾಹಿತಿಯನ್ನು ಪಾಲಿಕೆಯ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕು ಎಂದು ಸೂಚನೆ ನೀಡಿದರು. 

ಅಕ್ರಮ ತನಿಖೆಗೆ ಆಗ್ರಹ: ಜೆ.ಪಿ.ಪಾರ್ಕ್‌ನಲ್ಲಿ ಕೆಲಸ ಮಾಡುತ್ತಿರುವ ಆಟೋಟಿಪ್ಪರ್‌ಗಳ ಮಾಹಿತಿ ಕೇಳಿದಾಗ 21 ಆಟೋಗಳಿವೆ ಎಂದು ಆರೋಗ್ಯಾಧಿಕಾರಿಗಳು ಹೇಳಿದರು. ಗಂಟೆಯೊಳಗೆ ಎಲ್ಲ ಆಟೋಗಳು ಖುದ್ದು ಹಾಜರಾಗಬೇಕೆಂದಾಗ 13 ಆಟೋಗಳು ಮಾತ್ರ ಸ್ಥಳದಲ್ಲಿದ್ದವು. ಉಳಿದ ಆಟೋಗಳ ಮಾಹಿತಿಯನ್ನು ಅಧಿಕಾರಿಗಳು ನೀಡಿಲ್ಲ ಎಂದು ಶಾಸಕ ಮುನಿರತ್ನ ದೂರಿದರು.

ಪಾಲಿಕೆಯಿಂದ ಆಟೋಟಿಪ್ಪರ್‌ಗಳನ್ನು ಬಳಸಬೇಕೆಂಬ ನಿಯಮವಿದ್ದರೂ, ಯಾವುದೇ ದಾಖಲಾತಿಗಳಿಲ್ಲದ ಗೂಡ್ಸ್‌ ಆಟೋಗಳನ್ನು ಬಳಸುತ್ತಿದ್ದಾರೆ. ಎರಡೂವರೆಗೆ ವರ್ಷದಿಂದ ದಾಖಲೆ ಇಲ್ಲದ 8 ಆಟೋಗಳಿಗೆ ಪ್ರತಿ ತಿಂಗಳು ಪಾಲಿಕೆಯಿಂದ 56 ಸಾವಿರ ರೂ. ಬಿಲ್‌ ಪಡೆಯುತ್ತಿದ್ದು,

ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ಮೇಯರ್‌, ವಾರ್ಡ್‌ಗಳಲ್ಲಿ ಕಸ ವಿಲೇವಾರಿ ಮಾಡುತ್ತಿರುವ ಆಟೋಟಿಪ್ಪರ್‌ಗಳನ್ನು ಪರಿಶೀಲಿಸಿ ಸಂಪೂರ್ಣ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.