ಕಾಮಗಾರಿ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ
Team Udayavani, Mar 11, 2018, 11:07 AM IST
ಬೆಂಗಳೂರು: ಅಧಿಕಾರಯುಕ್ತ ಸಮಿತಿ (ಹೈಪವರ್ ಕಮಿಟಿ) ರಚಿಸುವ ಮೂಲಕ ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡಿರುವ ರಾಜ್ಯ ಸರ್ಕಾರ, ಆ ಮೂಲಕ ನಗರದಲ್ಲಿ ನಡೆಸಲಾಗುತ್ತಿರುವ ಕಾಮಗಾರಿಗಳ ಮೂಲಕ ಕೋಟ್ಯಂತರ ರೂ. ಲೂಟಿ ಹೊಡೆಯುತ್ತಿದೆ ಎಂದು ಬಿಜೆಪಿ ನಗರ ವಕ್ತಾರ ಎನ್. ಆರ್.ರಮೇಶ್ ಆರೋಪಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಪಾಲಿಕೆಯ ಸ್ಥಾಯಿ ಸಮಿತಿ, ಕೌನ್ಸಿಲ್, ಸದಸ್ಯರು, ಆಯುಕ್ತರ ಅಧಿಕಾರವನ್ನು ಕಿತ್ತು ಅಧಿಕಾರಯುಕ್ತ ಸಮಿತಿಗೆ ನೀಡುವ ಮೂಲಕ ಪಾಲಿಕೆಯನ್ನು ಸೂಪರ್ ಸೀಡ್ ಮಾಡಿದೆ. ಪಾಲಿಕೆಗೆ ನೀಡುವುದಾಗಿ ಘೋಷಿಸಿರುವ 7,300 ಕೋಟಿ ರೂ. ಗಳ ಕಾಮಗಾರಿಗಳಿಗೆ ತಾಂತ್ರಿಕ ಅನುಮೋದನೆ, ಟೆಂಡರ್ ಅನುಮೋದನೆ ನೀಡುವ ಅಧಿಕಾರವನ್ನು ಸಮಿತಿಗೆ ನೀಡಿ, ಆ ಮೂಲಕ ಚುನಾವಣಾ ನಿಧಿ ಸಂಗ್ರಹಕ್ಕಾಗಿ ಗುತ್ತಿಗೆದಾರರಿಂದ ಹಣ ಪಡೆಯಲು ಮುಂದಾಗಿದೆ ಎಂದು ದೂರಿದರು.
ಸರ್ಕಾರದ ಖಜಾನೆ ಖಾಲಿಯಾಗಿದ್ದರೂ ಸರ್ಕಾರ ಮಾತ್ರ ಪಾಲಿಕೆಗೆ ದಾಖಲೆಯ 7,300 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ, ಈವರೆಗೆ ಬಿಡುಗಡೆ ಮಾಡಿರುವ ಅನುದಾನ ಕೇವಲ 1500 ಕೋಟಿ ರೂ. ಮಾತ್ರ ಎಂದರು.
ನಗರೋತ್ಥಾನ ಅನುದಾನದ 7,300 ಕೋಟಿ ಮೊತ್ತದ ಯೋಜನಾ ಕಾಮಗಾರಿಗಳನ್ನು ಅಧಿಕಾರ ಯುಕ್ತ ಸಮಿತಿ ನಿರ್ವಹಿಸುತ್ತಿದೆ. ಬೃಹತ್ ಯೋಜನೆಗಳ ಗುತ್ತಿಗೆಯನ್ನು ಸಮಿತಿಯಿಂದಲೇ ನೀಡಿ ಗುತ್ತಿಗೆದಾರ ರಿಂದ ನೂರಾರು ಕೋಟಿ ರೂ. ಕಿಕಿಬ್ಯಾಕ್ ಪಡೆಯಲಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿದರು.
ನಗರೋತ್ಥಾನ ಯೋಜನೆಯಡಿ ಅಧಿಕಾರಯುಕ್ತ ಸಮಿತಿ ನೀಡಲಾಗಿರುವ ಕಾಮಗಾರಿಗಳಲ್ಲಿ ಕೋಟ್ಯಂ ತರ ರೂ.
ದುರುಪಯೋಗ, ವಂಚನೆ ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಎಸಿಬಿ, ಬಿಎಂಟಿಎಫ್, ಲೋಕಾ ಯುಕ್ತಕ್ಕೆ
ದೂರು ನೀಡಿರುವುದಾಗಿ ರಮೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ