ಕಬ್ಬನ್ ಪಾರ್ಕ್ ನೂತನ ಪ್ರವೇಶ ದ್ವಾರ ಉದ್ಘಾಟನೆ


Team Udayavani, Jun 20, 2019, 3:06 AM IST

cubbon

ಬೆಂಗಳೂರು: ಕಬ್ಬನ್‌ ಉದ್ಯಾನಕ್ಕೆ ಹಡ್ಸನ್‌ ವೃತ್ತದ ಬಳಿ ತೋಟಗಾರಿಕೆ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸಿರುವ ಪ್ರವೇಶದ್ವಾರವನ್ನು ತೋಟಗಾರಿಕೆ ಇಲಾಖೆ ಸಚಿವ ಎಂ.ಸಿ.ಮನಗೂಳಿ ಬುಧವಾರ ಉದ್ಘಾಟಿಸಿದರು.

ಜತೆಗೆ ಉದ್ಯಾನದಲ್ಲಿ ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಹಮ್ಮಿಕೊಂಡಿರುವ ಸೈಕಲ್‌ ಪ್ರವಾಸೋದ್ಯಮ ಹಾಗೂ ಉದ್ಯಾನದಲ್ಲಿ 600 ಸಸಿ ನೆಡುವ ಕಾರ್ಯಕ್ರಮಕ್ಕೂ ಸಚಿವರು ಚಾಲನೆ ನೀಡಿದರು. ಮೇಯರ್‌ ಗಂಗಾಂಬಿಕೆ, ತೋಟಗಾರಿಕೆ ಇಲಾಖೆ ಆಯುಕ್ತ ವೆಂಕಟೇಶ್‌ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ತೋಟಗಾರಿಕೆ ಇಲಾಖೆ ಉಪ ನಿದೇಶಕರ ಮಹಾಂತೇಶ್‌ ಮುರುಗೋಡ ಅವರು, 1948ರಲ್ಲಿ ರಾಜ್ಯ ಸರ್ಕಾರ ಚಾಮರಾಜೇಂದ್ರ ಉದ್ಯಾನವನವೆಂದು ಆದೇಶ ಹೊರಡಿಸಿತು. ಕಬ್ಬನ್‌ ಉದ್ಯಾನದಲ್ಲಿ ಒಟ್ಟು 7 ಪ್ರವೇಶದ್ವಾರವಿದ್ದು, ಅವುಗಳಲ್ಲಿ ಎಲ್ಲೂ ಈ ಹೆಸರನ್ನು ನಮೂದಿಸಿರಲಿಲ್ಲ. ಹೀಗಾಗಿಯೇ, ಕಬ್ಬನ್‌ ಪಾರ್ಕ್‌ ಅಂತಲೇ ಪ್ರಸಿದ್ಧಿ ಪಡೆದಿದೆ.

ಇನ್ನು ಎರಡು ವರ್ಷಗಳ ಹಿಂದೆ ಹೈಕೋರ್ಟ್‌ ಬಳಿ ಒಂದು ಪ್ರವೇಶ ದ್ವಾರ ನಿರ್ಮಾಣ ಮಾಡಿ ಚಾಮರಾಜೇಂದ್ರ ಉದ್ಯಾನ ಎಂದು ಹೆಸರನ್ನು ಸೂಚಿಸಲಾಗಿತ್ತು. ಆ ಬಳಿಕ ಹಡ್ಸಸ್‌ ವೃತ್ತದ ಬಳಿ 40 ಲಕ್ಷ ರೂ. ವೆಚ್ಚದಲ್ಲಿ ಪ್ರವೇಶ ದ್ವಾರ ನಿರ್ಮಾಣ ಮಾಡಲಾಗಿದೆ ಎಂದರು.

ಇನ್ನು ಉದ್ಯಾನದಲ್ಲಿ ಸೈಕಲ್‌ ಪ್ರವಾಸೋದ್ಯಮ ಆರಂಭಿಸಲಾಗಿದೆ. ಡಿಸ್ಕವರಿ ವಿಲೇಜ್‌ ಸಹಯೋಗದೊಂದಿಗೆ ಉದ್ಯಾನವನಕ್ಕೆ ಭೇಟಿ ನೀಡುವ ಪ್ರವಾಸಿಗರ ಅನುಕೂಲಕ್ಕಾಗಿ ನಿಗದಿತ ದರದೊಂದಿಗೆ ಆ್ಯಪ್‌ ಒಂದರ ಮೂಲಕ ಸೈಕಲ್‌ ಸೇವೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಸೈಕಲ್‌ ದರಪಟ್ಟಿ
-500 ರೂ. ಭದ್ರತಾ ಠೇವಣಿ
-50 ರೂ. ಮೊಲದ 3 ಗಂಟೆಗೆ
-100 ರೂ. 3ರಿಂದ 6 ಗಂಟೆಗೆ

ನೋಂದಾಯಿತ ಸದಸ್ಯರಿಗೆ ದರಪಟ್ಟಿ
-25 ರೂ. ಮೊದಲ ಎರಡು ಗಂಟೆಗೆ
-50 ರೂ. 2-4 ಗಂಟೆಗೆ
-75 ರೂ. 4-6 ಗಂಟೆಗೆ
-100 ರೂ. 6 ಗಂಟೆ ಮೇಲ್ಪಟ್ಟು

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.