ಮಲ್ಟಿಪ್ಲೆಕ್ಸ್‌ ದುಬಾರಿ ಟಿಕೆಟ್‌ಗೆ ಕಡಿವಾಣ


Team Udayavani, Mar 9, 2020, 3:07 AM IST

basavaraj-kfcc

ಬೆಂಗಳೂರು: ರಾಜ್ಯದ ವಿವಿಧ ಮಲ್ಟಿಪ್ಲೆಕ್ಸ್‌ ಗಳಲ್ಲಿ ಮನಬಂದಂತೆ ಟಿಕೆಟ್‌ ದರ ನಿಗದಿ ಮಾಡುತ್ತಿರುವುದು ಸಿನಿಪ್ರಿಯರ ಜೇಬಿಗೆ ಹಾಗೂ ಕನ್ನಡ ಚಿತ್ರರಂಗಕ್ಕೆ ಮಾರಕ ವಾಗಿದ್ದು, ಇದಕ್ಕೆ ಶೀಘ್ರ ಕಡಿವಾಣ ಹಾಕುವುದಾಗಿ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಭಾನುವಾರ ಆಯೋಜಿಸಿದ್ದ “ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 75ನೇ ವರ್ಷದ ಲಾಂಛನ ಬಿಡುಗಡೆ’ ಕಾರ್ಯಕ್ರಮದಲ್ಲಿ ಮಾತನಾಡಿ, ಟಿಕೇಟ್‌ ದರ ಹೆಚ್ಚಾಗಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಇದಕ್ಕೆ ಕಡಿವಾಣ ಹಾಕಲಾಗುವುದು ಎಂದರು.

ಕನ್ನಡದ ಸಿನಿಮಾಗಳಿಗೆ ಕಂಟಕವಾಗಿರುವ ಪೈರಸಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಾಲಿ ಇರುವ “ಪೈರೆಸಿ ಕಾಯ್ದೆ’ಗೆ ತಿದ್ದುಪಡಿ ತರಲು ಚರ್ಚೆ ನಡೆದಿದೆ. ಪೈರೆಸಿಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದರೂ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದರು.

ಚಿತ್ರಮಂದಿರಗಳಿಗೆ ಒಂದು ವರ್ಷದ ಬದಲು, ಐದು ವರ್ಷಗಳವರೆಗೆ ಪರವಾ ನಗಿ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳ ಲಾಗಿದೆ. ಚಿತ್ರಗಳಿಗೆ ವಿಧಿಸುತ್ತಿರುವ ಜಿಎಸ್‌ಟಿ ಪ್ರಮಾಣಕ್ಕೆ ಕಡಿವಾಣ ಹಾಕುವ ಬಗ್ಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ನಟ ಜಗ್ಗೇಶ್‌ ಮಾತನಾಡಿ, ಕನ್ನಡ ಚಿತ್ರರಂಗದ ಶ್ರೇಯೋಭಿವೃದ್ಧಿ ದೃಷ್ಟಿ ಯಿಂದ ಹಾಗೂ ಪರರಾಜ್ಯಗಳ ಮೇಲೆ ಅವಲಂಬನೆ ತಪ್ಪಿಸುವ ನಿಟ್ಟಿನಲ್ಲಿ “ಚಿತ್ರ ನಗರಿ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈ ಬಾರಿಯ ಆಯವ್ಯಯದಲ್ಲಿ 500 ಕೋಟಿ ರೂ. ಅನುದಾನ ಮೀಸಲಿರಿಸಿದೆ.

ಇದು ಒಬ್ಬ ವ್ಯಕ್ತಿಯಿಂದ ಚಿತ್ರರಂಗಕ್ಕೆ ಸಿಕ್ಕಿರುವು ದಲ್ಲ, ಇಡೀ ಚಿತ್ರರಂಗದ ಹಲವು ವರ್ಷ ಗಳ ಬೇಡಿಕೆ. ಈ ವಿಚಾರದಲ್ಲಿ ತಪ್ಪು ಸಂದೇಶ ಹೋಗುವುದು ಬೇಡ. ಚಿತ್ರ ರಂಗ ದಲ್ಲಿ ಸದ್ಯ ಕಳಸಕ್ಕೆ ಹೆಚ್ಚು ಪ್ರಾಮು ಖ್ಯತೆ ನೀಡಲಾಗುತ್ತಿದೆ. ಕಳಸದಷ್ಟೇ ಬುನಾದಿಗೂ ಪ್ರಾಮುಖ್ಯ ನೀಡಬೇಕು ಎಂದು ಮಾರ್ಮಿಕವಾಗಿ ನುಡಿದರು.

ನಟ ರವಿಚಂದ್ರನ್‌ ಮಾತನಾಡಿ, ಹೆಸರಘಟ್ಟ, ಮೈಸೂರು ಹಾಗೂ ರಾಮನಗರ ಎಂದು ಮಾತನಾಡುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಚಿತ್ರನಗರಿಯನ್ನು ಎಲ್ಲಿ ಬೇಕಾದರೂ ನಿರ್ಮಾಣ ಮಾಡಬಹುದು. ಇದರ ಉಪಯೋಗ ಕನ್ನಡ ಚಿತ್ರರಂಗಕ್ಕೆ ಆಗಲಿದೆ. ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕೋರಿದರು.

ಶಾಸಕ ಕುಮಾರ್‌ ಬಂಗಾರಪ್ಪ ಮಾತ ನಾಡಿದರು. ಕಾರ್ಯಕ್ರಮದಲ್ಲಿ ಕರ್ನಾ ಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್‌.ಜೈರಾಜ್‌, ನಿರ್ಮಾಪಕರ ಸಂಘದ ಅಧ್ಯಕ್ಷ ಡಿ.ಕೆ.ರಾಮಕೃಷ್ಣ, ನಟಿ ಜಯಮಾಲಾ, ನಟ ಉಪೇಂದ್ರ, ನಿರ್ಮಾಪಕ ಸಾರಾ ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಗುಪ್ತಾ ಸೇರಿ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.