ಶೀಘ್ರ ಸೈಬರ್‌ ನಿಯಂತ್ರಣ ಕೊಠಡಿ : ಕಮಲ್‌ ಪಂತ್‌


Team Udayavani, Nov 27, 2020, 3:53 PM IST

ಶೀಘ್ರ ಸೈಬರ್‌ ನಿಯಂತ್ರಣ ಕೊಠಡಿ : ಕಮಲ್‌ ಪಂತ್‌

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ “ಸೈಬರ್‌ ನಿಯಂತ್ರಣ ಕೊಠಡಿ (ಕಂಟ್ರೋಲ್‌ ರೂಂ)’ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದ್ದು, ಶೀಘ್ರ ಲೋಕಾರ್ಪಣೆಯಾಗಲಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿದರು.

ಆಗ್ನೇಯ ವಿಭಾಗ ಎಚ್‌ಎಸ್‌ಆರ್‌ ಪೊಲೀಸ್‌ ಠಾಣೆ ಆವರಣದಲ್ಲಿನ ನೂತನ ಸಿಇಎನ್‌ ಪೊಲೀಸ್‌ ಠಾಣೆಯನ್ನು ಗುರುವಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸೈಬರ್‌ ವಂಚನೆ ನಿಯಂತ್ರಣ ಮಾಡುವ ಸಲುವಾಗಿ ಯೋಜನೆ ಮಾಡಿಕೊಳ್ಳಲಾ ಗಿದ್ದು. ಈ ಕಾರ್ಯಕ್ಕೆ ಆರ್‌ಬಿಐ ಕೂಡ ಸಹಕಾರ ನೀಡುತ್ತಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಕುರಿತ ದೂರುಗಳಿಗಾಗಿ ನಮ್ಮ-100 ಇರು ವಂತೆಯೂ ಇನ್ಮುಂದೆ ಸೈಬರ್‌ ಕ್ರೈಂ ನಿಯಂತ್ರಣ ಕೊಠಡಿಗೆ ದೂರುಗಳನ್ನು ಸಹಾಯವಾಣಿ ಮೂಲಕ ನೆರವು ನೀಡಲಾಗುವುದು. ನೇರವಾಗಿ ನಮ್ಮ-100ಕ್ಕೆ ಕರೆ ಮಾಡಿದಾಗ ಅವುಗಳಲ್ಲಿ 1,2,3,4 ಆಯ್ಕೆ ಬರುತ್ತವೆ. ಈ ಪೈಕಿ ಸೈಬರ್‌ ಸಹಾಯವಾಣಿ ಸಂಪರ್ಕಕ್ಕೆ ನಂಬರ್‌ವೊಂದನ್ನು ಆಯ್ಕೆ ಮಾಡಿಕೊಂಡು ಸಿಬ್ಬಂದಿ ಜತೆ ನೇರವಾಗಿ ದೂರು ನೀಡಿ ಸಹಾಯ ಪಡೆದು ಕೊಳ್ಳಬಹುದು. ಅಗತ್ಯವಿದ್ದಲ್ಲಿ ಮಾತ್ರ ಸೆನ್‌ ಪೊಲೀಸ್‌ ಠಾಣೆಗೆ ತೆರಳಿ ನೇರವಾಗಿ ದೂರು ನೀಡಬಹುದು. ಅದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಅಲ್ಲದೆ,ಎಸ್‌ಎಂಎಸ್‌ಮೂಲಕವು ದೂರು ನೀಡಬಹುದು. ಕೆಲ ಸಂದರ್ಭದಲ್ಲಿ ಬ್ಯಾಂಕ್‌ ಅಧಿಕಾರಿಗಳು ಪೊಲೀಸರಿಗೆ ದೂರು ನೀಡದೆ ಖಾತೆ ಸ್ಥಗಿತಗೊಳಿಸಲು ಹಿಂದೇಟು ಹಾಕುತ್ತಾರೆ. ಆಗ,ಠಾಣೆಗೆಹೋಗಬೇಕಾಗುತ್ತದೆ.ಆದರೆ,ಸಾಧ್ಯವಾಗುವದಿಲ್ಲ.ಅಥವಾಕಳ್ಳರುಇನ್ನಷ್ಟುಹಣದೋಚಬಹುದು.  ಈ ರೀತಿಯ ಸಮಸ್ಯೆಗಳ ನಿವಾರಣೆಗಾಗಿಯೇ ಸೈಬರ್‌ಕ್ರೈಂ ನಿಯಂತ್ರಣ ಕೊಠಡಿ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ಹೀಗಾಗಿ ತಮ್ಮ ಅನುಮತಿ ಇಲ್ಲದೆ ಹಣ ಡ್ರಾಮಾಡಿದ ಕೂಡಲೇ ಪೊಲೀಸರಿಗೆ ಎಸ್‌ಎಂಎಸ್‌ ಮೂಲಕ ದೂರು ನೀಡಬಹುದು. ಆಗ ಸಹಾಯ ವಾಣಿ ಸಿಬ್ಬಂದಿ ಬ್ಯಾಂಕ್‌ ಅಧಿಕಾರಿಗಳ ಗಮನಕ್ಕೆ ತಂದು ಖಾತೆ ಸ್ಥಗಿತಗೊಳಿಸುತ್ತಾರೆ. ಅನಂತರ ಗ್ರಾಹಕ ನಿಂದ ಲಿಖೀತ ದೂರು ಪಡೆದುಕೊಳ್ಳಲಿದ್ದಾರೆ. ಅದಕ್ಕಾಗಿ ಖಾಸಗಿ ಕಂಪನಿ ಪ್ರತ್ಯೇಕ ಸಾಫ್ಟ್ವೇರ್‌ ಅಭಿವೃದ್ಧಿ ಪಡಿಸುತ್ತಿದೆ. ಅದಕ್ಕೆ ಆರ್‌ಬಿಐ ಕೂಡ ಸಹಾಯ ಮಾಡಲು ಮುಂದಾಗಿದೆ ಎಂದು ಹೇಳಿದರು.

ಪೇಪರ್‌ ವರ್ಕ್‌ ಕಡಿಮೆ ಮಾಡಿ: ಉದ್ಘಾಟನೆ ಬಳಿಕ ಠಾಣಾಧಿಕಾರಿ ರಾಜೇಶ್‌ ಹಾಗೂ ಅಧಿಕಾರಿ- ಸಿಬ್ಬಂದಿಗೆ ಜತೆ ಸಮಾಲೋಚನೆ ನಡೆಸಿದ ಪೊಲೀಸ್‌ ಆಯುಕ್ತರು, ಆದಷ್ಟು ಪೇಪರ್‌ ವರ್ಕ್‌ ಕಡಿಮೆ ಮಾಡಿ. ಡಿಜಿಟಲ್‌ಗೆ ಆದ್ಯತೆ ನೀಡಿ. ಅದರಿಂದ ಪೊಲೀಸ್‌ ಹಾಗೂ ಸಾರ್ವಜನಿಕರಿಗೆ ಅನುಕೂಲ ಎಂದರು.

ಹೆಚ್ಚುವರಿ ಪೊಲೀಸ್‌ ಆಯುಕ್ತ ಎಸ್‌. ಮುರುಗನ್‌, ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್‌ ಜೋಷಿ, ಎಸಿಪಿ ಕರಿಬಸನಗೌಡ, ಸೆನ್‌ ಠಾಣಾಧಿಕಾರಿ ರಾಜೇಶ್‌, ಅಧಿಕಾರಿ-ಸಿಬ್ಬಂದಿ ಇದ್ದರು.

ಸೆನ್‌ ಪೊಲೀಸ್‌ ಠಾಣೆಗಳಿಗೆ ತಜ್ಞರ ನೇಮಕ :  ನಗರದಲ್ಲಿರುವ 8 ಸಿಇಎನ್‌(ಸೈಬರ್‌, ಆರ್ಥಿಕ ಅಪರಾಧಗಳು ಮತ್ತು ನಾರ್ಕೋಟಿಕ್ಸ್‌)(ಸೆನ್‌) ಪೊಲೀಸ್‌ ಠಾಣೆಗಳಿಗೆ ನುರಿತ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗುವುದು. ಸಿಇಎನ್‌ ಠಾಣೆಗಳಲ್ಲಿ ಸಿಬ್ಬಂದಿ ಕೊರತೆಯಿದ್ದು, ಹಂತ-ಹಂತವಾಗಿ ಭರ್ತಿ ಮಾಡಲಾಗುವುದು. ಜತೆಗೆ ನಗರದ ಸೆನ್‌ ಪೊಲೀಸ್‌ ಠಾಣೆಗಳಲ್ಲಿ ನುರಿತ ತಜ್ಞರಕೊರತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಪ್ರತಿ ಸೆನ್‌ ಪೊಲೀಸ್‌ ಠಾಣೆಗೆ ಮೂವರು ತಂತ್ರಜ್ಞಾನ ಮತ್ತು ತಾಂತ್ರಿಕ ತಜ್ಞರನ್ನು ಹೊರಗುತ್ತಿಗೆ ಮೂಲಕ ನೇಮಿಸಿಕೊಳ್ಳಲಾಗುವುದು. ಈ ಮೂಲಕ ಪ್ರಕರಣಗಳ ಇತ್ಯರ್ಥ ಹಾಗೂ ದೂರುದಾರರಿಗೆ ಪರಿಹಾರಕೊಡಿಸಲಾಗುವುದು. ಇದೊಂದು ಮಾದರಿ ಸೆನ್‌ ಪೊಲೀಸ್‌ ಠಾಣೆಯಾಗಿದ್ದು, ನಗರದ ಬೇರೆ ಠಾಣೆಗಿಂತ ಭಿನ್ನವಾಗಿದೆ. ಕಾರ್ಪೋರೇಟ್‌ ಮಾದರಿಯಲ್ಲಿ ವಿನ್ಯಾಸ ಮಾಡಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತಕಮಲ್‌ ಪಂತ್‌ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.