ಸೈಕಲ್‌ ರವಿ ಆಸ್ತಿ ಮುಟ್ಟುಗೋಲು


Team Udayavani, Mar 31, 2019, 12:23 PM IST

cycle-rav

ಬೆಂಗಳೂರು: ಕುಖ್ಯಾತ ರೌಡಿಶೀಟರ್‌ ರವಿ ಅಲಿಯಾಸ್‌ ಸೈಕಲ್‌ ರವಿ ಹಾಗೂ ಆತನ ಕುಟುಂಬ ಸದಸ್ಯರ ಹೆಸರಿನಲ್ಲಿದ್ದ 25 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಜಾರಿನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ರೌಡಿಶೀಟರ್‌ ರವಿ ವಿರುದ್ಧ ಹಣ ದುರ್ಬಳಕೆ ತಡೆ ಕಾಯಿದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು ಆತ 25 ಲಕ್ಷ ರೂ. ಮೌಲ್ಯದ ಬೇನಾಮಿ ಆಸ್ತಿ ಹೊಂದಿರುವುದು ಪತ್ತೆಯಾಗಿತ್ತು.

ಅಪರಾಧ ಕೃತ್ಯಗಳಿಂದಲೇ ಗಳಿಸಿದ ಹಣದಲ್ಲೇ ಸೈಕಲ್‌ ರವಿ ಕಾನೂನುಬಾಹಿರವಾಗಿ ಆಸ್ತಿ ಸಂಪಾದಿಸಿದ್ದ. ಯಶವಂತಪುರದ ಮಂಗನಹಳ್ಳಿ ಹಾಗೂ ಬಿ.ಎಂ ಕಾವಲ್‌ನಲ್ಲಿ ತನ್ನ ಪತ್ನಿ ರಮ್ಯಾ ಹೆಸರಿನಲ್ಲಿ ಮೂರು ಫ್ಲಾಟ್‌, ತಾಯಿ ಲಕ್ಷ್ಮಮ್ಮ ಹೆಸರಿನಲ್ಲಿ ಒಂದು ನಿವೇಶನ ಹೊಂದಿದ್ದಾನೆ.

ಈ ಸ್ಥಿರಾಸ್ತಿಗಳ ಮೌಲ್ಯ 25 ಲಕ್ಷ ರೂ. ಎಂದು ಆಂದಾಜಿಸಲಾಗಿದೆ ಎಂದು ಜಾರಿನಿರ್ದೇಶನಾಲಯದ ಬೆಂಗಳೂರು ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಎಂಟು ಕೊಲೆ, ಕಿಡ್ನಾಪ್‌, ಸುಲಿಗೆ, ದರೋಡೆ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಸೈಕಲ್‌ ರವಿ ಆರೋಪಿಯಾಗಿದ್ದಾನೆ.

ಈ ಪೈಕಿ ಹಲವು ಪ್ರಕರಣಗಳು ತನಿಖಾ ಹಂತದಲ್ಲಿದ್ದು, ಕೆಲವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ಇ.ಡಿ ತಿಳಿಸಿದೆ. ಅಪರಾಧ ಕೃತ್ಯಗಳಲ್ಲಿ ನಟೋರಿಯಸ್‌ ಎನಿಸಿಕೊಂಡಿದ್ದ ಸೈಕಲ್‌ ರವಿಯನ್ನು ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಆತನ ಕಾಲಿಗೆ ಗುಂಡು ಹೊಡೆದು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಬಳಿಕ ತನಿಖೆಯಲ್ಲಿ ಆತ ಬೇನಾಮಿ ಹೆಸರಿನಲ್ಲಿ ಆಸ್ತಿ ಸಂಪಾದಿಸಿದ್ದಾನೆ ಎಂದು ಖಚಿತಪಟ್ಟ ಮೇಲೆ ಇ.ಡಿ ಆಧಿಕಾರಿಗಳಿಗೆ ಮಾಹಿತಿ ಒದಗಿಸಿದ್ದರು. ಈ ಹಿನ್ನೆಲೆಯಲ್ಲಿ ರವಿ ವಿರುದ್ಧ ಪಿಎಂಎಲ್‌ಎ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದ ಇ.ಡಿ ಇದೀಗ ಆತನ ಅಕ್ರಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.