ಗ್ಯಾಸ್ ರಿಫೀಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟ: ಯುವಕ ಸಾವು
Team Udayavani, Jul 24, 2022, 11:00 PM IST
ಬೆಂಗಳೂರು: ಗ್ಯಾಸ್ ರಿಫೀಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡು ಯುವಕನೊಬ್ಬ ಮೃತಪಟ್ಟಿರುವ ಘಟನೆ ಎಚ್ಎಎಲ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಸ್ಲಾಂಪುರ ನಿವಾಸಿ ಕದೀರ್ (25) ಮೃತ ಯುವಕ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಕದೀರ್, ಇಸ್ಲಾಂಪುರದ ಇಸ್ತಾಕ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಬುಧವಾರ ಮಧ್ಯಾಹ್ನ ತನ್ನ ಮನೆಯ 15 ಕೆ.ಜಿ. ಸಿಲಿಂಡರ್ನಿಂದ 5 ಕೆ.ಜಿ. ಸಿಲಿಂಡರ್ಗೆ ಗ್ಯಾಸ್ ರಿಫೀಲ್ಲಿಂಗ್ ಮಾಡುತ್ತಿದ್ದ. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭಾನುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ದುರ್ಘಟನೆ ಸಂಬಂಧ ಮನೆ ಮಾಲೀಕ ಇಸ್ತಾಕ್ ಎಂಬವರ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ