ಡಿ-ಫಾರ್ಮ್ ಸೀಟು ಹೆಸರಲ್ಲಿ ವಂಚನೆ


Team Udayavani, Mar 23, 2019, 6:55 AM IST

d-farma.jpg

ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಮೆಡಿಕಲ್‌ ಕಾಲೇಜಿನಲ್ಲಿ “ಡಿ-ಫಾರ್ಮ್’ ಕೋರ್ಸ್‌ಗೆ ಸೀಟು ಕೊಡಿಸುವುದಾಗಿ ಇರಾನಿ ಪ್ರಜೆಯೊಬ್ಬನಿಂದು 8.5 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯನ್ನು ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ಸೈಯದ್‌ ಮೊಹಮ್ಮದ್‌ ಹುಸೈನಿ (56) ಬಂಧಿತ. ಆರೋಪಿ ಇರಾನ್‌ ಮೂಲದ ಸೈಯ್ಯದ್‌ ಎಸ್ತಕಿ (20) ಎಂಬಾತನಿಗೆ ವಂಚಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ಮೈಸೂರಿನ ವಿಜಯನಗರ ಮೂಲದ ಆರೋಪಿ ಹುಸೈನಿ ಕೆಲ ವರ್ಷಗಳಿಂದ ಬೆಂಗಳೂರಿನ ಬಾಗಲೂರಿನಲ್ಲಿ ವಾಸವಾಗಿದ್ದಾನೆ. ಭೂಪಸಂದ್ರದ ಆರ್‌ಎಂವಿ 2ನೇ ಹಂತದಲ್ಲಿರುವ ವಿನಾಯಕ ಲೇಔಟ್‌ನಲ್ಲಿ “ಬಾಕ್ಯೂರ್‌ ಎಕ್ಸಾಮ್‌’ ಹೆಸರಿನಲ್ಲಿ ಮೆಡಿಕಲ್‌ ಸೀಟ್‌ ಕನ್ಸಲ್ಟೆಂಟ್‌ ಕಚೇರಿ ತೆರೆದಿದ್ದ. ತನ್ನ ಪರಿಚಯಸ್ಥರಿಗೆ ಬೆಂಗಳೂರು ಹಾಗೂ ಇತರೆಡೆ “ಡಿ-ಫಾರ್ಮ್’ ಸೀಟು ಕೊಡಿಸುವುದಾಗಿ ಹೇಳಿಕೊಂಡಿದ್ದ.

ಈ ಮಧ್ಯೆ ಎರಡು ವರ್ಷಗಳ ಹಿಂದೆ ಹೆಚ್ಚಿನ ವ್ಯಾಸಂಗ ಮಾಡಲು ಆಂಧ್ರಪ್ರದೇಶಕ್ಕೆ ಬಂದಿದ್ದ ಸೈಯ್ಯದ್‌ ಎಸ್ತಕಿಯನ್ನು ಆರೋಪಿ ಹುಸೈನಿ ಸ್ನೇಹಿತರೊಬ್ಬರ ಮೂಲಕ 2018ರ ಫೆಬ್ರವರಿಯಲ್ಲಿ ಪರಿಚಯಿಸಿಕೊಂಡಿದ್ದ.  ಈ ವೇಳೆ ಎಸ್ತಕಿ ಆಂಧ್ರಪ್ರದೇಶದ ಯಾವುದಾದರೂ ಮೆಡಿಕಲ್‌ ಕಾಲೇಜಿನಲ್ಲಿ ಡಿ-ಫಾರ್ಮ್ ಕೋರ್ಸ್‌ಗೆ ಸೀಟು ಕೊಡಿಸುವಂತೆ ಕೇಳಿಕೊಂಡಿದ್ದು, ಈ ವೇಳೆ ಆರೋಪಿ ಸೀಟು ಕೊಡಿಸಲು 23 ಲಕ್ಷ ರೂ. ಕೊಡಬೇಕಾಗುತ್ತದೆ.

ಹಣ ನೀಡಿದರೆ ಆಂಧ್ರಪ್ರದೇಶದ ವೈಜಾಕ್‌ನಲ್ಲಿರುವ ಶ್ರೀನಿವಾಸ ರಾವ್‌ ಕಾಲೇಜ್‌ ಆಫ್ ಫಾರ್ಮಸಿ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ಭರವಸೆ ನೀಡಿದ್ದ. ಇದನ್ನು ನಂಬಿದ ವಿದ್ಯಾರ್ಥಿ ಎಸ್ತಕಿ ಮುಂಗಡವಾಗಿ ಆರೋಪಿಗೆ ಹಂತ-ಹಂತವಾಗಿ 8.50 ಲಕ್ಷ ರೂ. ಅನ್ನು ವರ್ಗಾವಣೆ ಮಾಡಿದ್ದಾನೆ. ಆದರೆ, ಆರೋಪಿ ಸೀಟು ಕೊಡಿಸಿಲ್ಲ. ಈ ಬಗ್ಗೆ ಹಲವಾರು ಬಾರಿ ಪ್ರಶ್ನಿಸಿದರೆ ಇಲ್ಲದ ಸಬೂಬು ಹೇಳುತ್ತಿದ್ದ.

ಇದರಿಂದ ಬೇಸತ್ತ ವಿದ್ಯಾರ್ಥಿ ಆಂಧ್ರಪ್ರದೇಶದ ವೆಂಕಟೇಶ್ವರ ಕಾಲೇಜ್‌ ಆಫ್ ಫಾರ್ಮಸಿಯಲ್ಲಿ “ಡಿ-ಫಾರ್ಮ್’ ಕೋರ್ಸ್‌ಗೆ ಸೇರಿಕೊಂಡಿದ್ದ ಎಂದು ಪೊಲೀಸರು ಹೇಳಿದರು. ಬಳಿಕ ಆರೋಪಿ ಹುಸೈನಿಗೆ ಕರೆ ಮಾಡಿದ ವಿದ್ಯಾರ್ಥಿ ಎಸ್ತಕಿ, ಹಣ ಹಿಂದಿರುಗಿಸುವಂತೆ ಕೇಳಿಕೊಂಡಿದ್ದಾನೆ. 2018ರ ಆಗಸ್ಟ್‌ನಲ್ಲಿ ಕೊಡುವುದಾಗಿ ಹೇಳಿದ್ದ ಆರೋಪಿ, ಬಳಿಕ ಮೊಬೈಲ್‌ ಸಂಖ್ಯೆ ಬದಲಾಯಿಸಿದ್ದ.

ಹೀಗಾಗಿ 2018ರ ಡಿ.6ರಂದು ವಿದ್ಯಾರ್ಥಿ ನೇರವಾಗಿ ಭೂಪಸಂದ್ರದಲ್ಲಿರುವ ಕಚೇರಿಗೆ ಬಂದು ಹಣ ಕೇಳಿದಾಗ, ಆರೋಪಿ ಕಚೇರಿ ಸಿಬ್ಬಂದಿಯಿಂದ ವಿದ್ಯಾರ್ಥಿಯನ್ನು ಹೊರಗಟ್ಟಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದ. ಈ ಸಂಬಂಧ ವಿದ್ಯಾರ್ಥಿ ಸಂಜಯ್‌ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ.ಈ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.