ಸಿಎಂಗೆ ಎರಡು ಕ್ಷೇತ್ರದಲ್ಲೂ ಸೋಲು “ಡಬ್ಬಲ್ ಧಮಾಕಾ’
Team Udayavani, Apr 24, 2018, 6:15 AM IST
ಬೆಂಗಳೂರು: ಸುಮಾರು 30 ವರ್ಷಗಳಿಂದ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರವನ್ನು ಸಿಎಂ ಸಿದ್ದರಾಮಯ್ಯ ಆಯ್ಕೆ ಮಾಡಿಕೊಂಡಿರುವುದನ್ನು ನೋಡಿದರೆ ಅವರ ನೆಲವೇ ಅಲುಗಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೇಳಿದರು.
ಸೋಮವಾರ ವಿವಿಧ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದರು. ಹಾಗಾಗಿ ವಡೋದರದಿಂದ ಹಾಗೂ ಉತ್ತರ ಭಾರತದ ಜನರ ಒತ್ತಾಯದ ಮೇರೆಗೆ ವಾರಣಾಸಿಯಿಂದ ಸ್ಪರ್ಧಿಸಿದ್ದರು. ಆದರೆ 30 ವರ್ಷ ಪ್ರತಿನಿಧಿಸಿದ್ದ ಕ್ಷೇತ್ರದ ಬದಲಿಗೆ ಬೇರೆ ಕ್ಷೇತ್ರಕ್ಕೆ ಹೋಗುತ್ತಿರುವುದು ಸೋಲಿನ ಭೀತಿಯಿಂದ. ಇನ್ನಾದರೂ ಸಿದ್ದರಾಮಯ್ಯ ಅರೆಬೆಂದ ವಿಶ್ಲೇಷಣೆ ಮಾಡುವುದನ್ನು ಬಿಡಬೇಕೆಂದು ಕುಟುಕಿದರು. ಸೋಲಿನ ಭೀತಿಯಲ್ಲಿರುವ ಸಿದ್ದರಾಮಯ್ಯ ಬಾದಾಮಿಗೆ ಪಲಾಯನ ಮಾಡಿದ್ದಾರೆ. ಬಾದಾಮಿ ಜನರೂ ಅವರಿಗೆ ಪಾಠ ಕಲಿಸಲಿದ್ದಾರೆ. ಒಟ್ಟಾರೆ ಸಿದ್ದರಾಮಯ್ಯನವರಿಗೆ ಎರಡೂ ಕಡೆಯು ಸೋಲಾಗುವ ಮೂಲಕ ಡಬ್ಬಲ್ ಧಮಾಕ ಸಿಗಲಿದೆ ಎಂದು ವ್ಯಂಗ್ಯವಾಡಿದರು.
ರಕ್ಷಣೆ ಸರ್ಕಾರದ ಹೊಣೆ: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರಿಗೆ ಬೆದರಿಕೆ ಕರೆ ಕುರಿತಂತೆ ಪ್ರತಿಕ್ರಿಯಿಸಿದ ಅನಂತಕುಮಾರ್, ರಾಜ್ಯದ ಜನತೆ ಸೇರಿ ಜನಪ್ರತಿನಿಧಿಗಳ ರಕ್ಷಣೆಯು ರಾಜ್ಯ ಸರ್ಕಾರದ ಜವಾಬ್ದಾರಿ. ಅದರಂತೆ ಕೇಂದ್ರ ಸಚಿವರಿಗೂ ಸೂಕ್ತ ರಕ್ಷಣೆ ಕಲ್ಪಿಸಬೇಕಾದುದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಜವಾಬ್ದಾರಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ