ಪಟಾಕಿಯಿಂದ ನೂರು ಮಂದಿಗೆ ಹಾನಿ


Team Udayavani, Oct 30, 2019, 3:09 AM IST

pataki-inda

ಬೆಂಗಳೂರು: ನಗರದಲ್ಲಿ ಪಟಾಕಿಯಿಂದ ಹಾನಿ ಹೆಚ್ಚಾಗುತ್ತಿದ್ದು, ದೀಪಾವಳಿ ಹಬ್ಬದ ಕೊನೆಯ ದಿನವಾದ ಮಂಗಳವಾರ ಒಂದೇ ದಿನ 50ಕ್ಕೂ ಹೆಚ್ಚು ಮಂದಿಯು ಪಟಾಕಿಯಿಂದ ಕಣ್ಣು ಹಾಗೂ ಮುಖ ಕೈಕಾಲುಗಳಿಗೆ ಹಾನಿ ಮಾಡಿಕೊಂಡಿದ್ದಾರೆ. ಈ ಮೂಲಕ ಈ ಬಾರಿ ದೀಪಾವಳಿ ಪಟಾಕಿಯಿಂದ ಹಾನಿಗೊಳಗಾದವರ ಸಂಖ್ಯೆ ನೂರಕ್ಕೆ ಏರಿಕೆಯಾಗಿದೆ.

ಮಂಗಳವಾರ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 14 ಮಂದಿ, ನಾರಾಯಣ ನೇತ್ರಾಲಯ ವಿವಿಧ ಶಾಖೆಗಳಲ್ಲಿ 15, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 15 ಮಂದಿ, ನೇತ್ರದಾಮ ಆಸ್ಪತ್ರೆಯಲ್ಲಿ 3 ಮಂದಿ, ಶೇಖರ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆದಿದ್ದಾರೆ. ಸೋಮವಾರ ಒಬ್ಬರಿಗೆ ಹಾಗೂ ಮಂಗಳವಾರ ಮೂವರ ಕಣ್ಣಿಗೆ ತೀವ್ರ ಹಾನಿಯಾಗಿದೆ. ನಾಲ್ವರಲ್ಲಿ ಮೂರು ಮಂದಿ ಮಿಂಟೋದಲ್ಲಿ ದಾಖಲಾಗಿದ್ದು, ಒಬ್ಬ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ಮೂವರಿಗೂ ಕಣ್ಣಿಗೆ ಗಂಭೀರ ಗಾಯವಾಗಿರುವ ಪರಿಣಾಮ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆಗಳ ವೈದ್ಯರು ತಿಳಿಸಿದ್ದಾರೆ. ಪಟಾಕಿಯಿಂದ ಮುಖ ಮೈ ಕೈಕಾಲುಗಳಿಗೆ 10 ಮಂದಿ ವಿಕ್ಟೋರಿಯಾದ ಸುಟ್ಟಗಾಯಗಳ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಂಗಳವಾರವೂ ಹಾನಿಯಾದವರಲ್ಲಿ ಶೇ.80 ಮಕ್ಕಳೇ ಇದ್ದಾರೆ.

ಗೊಲ್ಲರ ಹಟ್ಟಿಯಲ್ಲಿ ಪವನ್‌ ಎಂಬುವವನು ಪೇಯಿಂಟ್‌ ಡಬ್ಬದ ಕೆಳಗೆ ಆಟಂಬಾಂಬ್‌ ಇಟ್ಟು ಸಿಡಿಸಲು ಮುಂದಾಗಿದ್ದು, ಏಕಾಏಕಿ ಪಟಾಕಿ ಜತೆ ಡಬ್ಬವೂ ಸಿಡಿದು ಬಲಗಣ್ಣಿಗೆ ಗಂಭೀರವಾದ ಗಾಯವಾಗಿದೆ. ಬಾಗಲೂರು ಬಳಿಯ 9 ವರ್ಷದ ಬಾಲಕ ಜೈರಾಮ್‌ ಮತ್ತು ಭುವನೇಶ್ವರಿ ನಗರದ 8 ವರ್ಷದ ಬಾಲಕ ಮನೋಜ್‌ ಎಂಬುವರು ಹೂಕುಂಡ ಹಚ್ಚುವಾಗ ಮುಖ ಸುಟ್ಟುಕೊಂಡಿದ್ದಾರೆ. ಈ ಇಬ್ಬರು ಮಕ್ಕಳು ಮುಖವನ್ನು ಸುಟ್ಟುಕೊಂಡು ವಿಕ್ಟೋರಿಯಾದ ಸುಟ್ಟಗಾಯಗಳ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಬಾರಿಗಿಂತ ಹೆಚ್ಚು: ಕಳೆದ ಬಾರಿ ದೀಪಾವಳಿ ಸಂದರ್ಭದಲ್ಲಿ ಪಟಾಕಿಯಿಂದ 85ಕ್ಕೂ ಹೆಚ್ಚು ಮಂದಿ ಹಾನಿಗೊಳಗಾಗಿದ್ದರು. ಈ ಬಾರಿ ಅದರ ಪ್ರಮಾಣ ಹೆಚ್ಚಾಗಿದ್ದು, 100 ದಾಟಿದೆ. ಅಂತೆಯೇ ಮಕ್ಕಳ ಸಂಖ್ಯೆಯೂ ಕಳೆದ ವರ್ಷಕ್ಕಿಂತ ಹೆಚ್ಚಿದೆ. ಇನ್ನು ಹಬ್ಬ ಮುಗಿದ ನಂತರವು ಕಿರು ದೀಪಾವಳಿ, ತುಳಸಿ ಹಬ್ಬ ಎಂದು ಪಟಾಕಿ ಸಿಡಿಸಲಾಗುತ್ತದೆ. ಈ ವೇಳೆ ಹಾನಿಗೊಳಗಾಗಿ ಆಸ್ಪತ್ರೆಗೆ ಬರುತ್ತಾರೆ ಎಂದು ವೈದ್ಯರು ತಿಳಿಸಿದರು.

ಇಬ್ಬರಿಗೆ ಶಾಶ್ವತ ಅಂಧತ್ವ: ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರು ವರ್ಷದ ವೆಂಕಟೇಶ್‌, 13 ವರ್ಷದ ಗಜೇಂದ್ರ ಎಂಬ ಬಾಲಕರ ಕಣ್ಣುಗಳಿಗೆ ಸಾಕಷ್ಟು ಹಾನಿಯಾಗಿದ್ದು, ದೃಷ್ಟಿ ಕಳೆದುಕೊಂಡಿದ್ದಾರೆ. 22 ವರ್ಷದ ಪವನ್‌ ಎಂಬ ಯುವಕನಿಗೂ ಸಾಕಷ್ಟು ಹಾನಿಯಾಗಿದ್ದು, ದೃಷ್ಟಿ ಮರಳುವ ಸಾಧ್ಯತೆ ತೀರಕಡಿಮೆ ಎಂದು ಹೇಳುತ್ತಿದ್ದಾರೆ.

ಪಟಾಕಿಯಿಂದ ಗಾಯ: ಚಿಕಿತ್ಸೆ ಪಡೆದವರ ಸಂಖ್ಯೆ
ಮಿಂಟೋ ಕಣ್ಣಿನ ಆಸ್ಪತ್ರೆ – 27
ನಾರಾಯಣ ನೇತ್ರಾಲಯ – 32
ಶಂಕರ ಕಣ್ಣಿನ ಆಸ್ಪತ್ರೆ – 16
ಶೇಖರ್‌ ಕಣ್ಣಿನ ಆಸ್ಪತ್ರೆ – 07
ಮೋದಿ ಕಣ್ಣಿನ ಆಸ್ಪತ್ರೆ – 4
ನೇತ್ರಧಾಮ – 3
ವಿಕ್ಟೋರಿಯಾದಲ್ಲಿನ ಸುಟ್ಟಗಾಯಗಳ ಕೇಂದ್ರ – 12

ಟಾಪ್ ನ್ಯೂಸ್

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.