ಡಾ.ರಾಜ್‌ ವ್ಯಕ್ತಿತ್ವ ಸಾಗರದಂತೆ


Team Udayavani, Apr 25, 2019, 4:14 AM IST

dr-raj-vy

ಬೆಂಗಳೂರು: ಕನ್ನಡ ಕಲೆ ಮತ್ತು ಸಾಹಿತ್ಯ ಲೋಕದಲ್ಲಿ ಡಾ.ರಾಜಕುಮಾರ್‌ ಮತ್ತು ಕುವೆಂಪು ಶಾಶ್ವತ ರಾಯಭಾರಿಗಳು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಕೆ.ಎಸ್‌.ನಿಸಾರ್‌ ಅಹಮದ್‌ ಅಭಿಪ್ರಾಯಪಟ್ಟರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ಡಾ.ರಾಜಕುಮಾರ್‌ 91ನೇ ಜನ್ಮ ದಿನಾಚರಣೆಯಲ್ಲಿ ಅತಿಥಿಯಾಗಿ ಮಾತನಾಡಿದರು.

ಡಾ.ರಾಜಕುಮಾರ್‌ ಅವರ ವ್ಯಕ್ತಿತ್ವ ಆಕಾಶ, ಸಾಗರದಂತೆ. ಅದನ್ನು ಎಲ್ಲಿಂದ ಶುರುಮಾಡಿ, ಎಲ್ಲಿ ಮುಗಿಸಬೇಕು ಎಂಬುದು ಗೊತ್ತಾಗುವುದಿಲ್ಲ. ಅವರ ಜೊತೆ ಮಾತುಕತೆಗೆ ಕುಳಿತರೆ ಸಾಕು ಸುಮಾರು ಮೂರರಿಂದ ನಾಲ್ಕು ಗಂಟೆಯವರೆಗೆ ಸುದೀರ್ಘ‌ ಮಾತುಕತೆ ನಡೆಯುತ್ತಿತ್ತು.

ಹೊರ ರಾಜ್ಯದಲ್ಲಿ ರಾಜಕುಮಾರ್‌ ಅವರ ಚಿತ್ರವೊಂದರ ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಕೆಲವು ಭಾಷಾಂಧಕಾರರಿಂದ ಅವರ ಮೇಲೆ ಹಲ್ಲೆಯಾಗಿತ್ತು. ಅದನ್ನು ಖಂಡಿಸುವ ಸಲುವಾಗಿ ನಾವೆಲ್ಲ ಒಂದಾಗಿ ಧ್ವನಿಗೂಡಿಸಿದರೂ, ರಾಜಕುಮಾರ್‌ ಮಾತ್ರ, “ಯಾರೋ ಕೆಲವರಿಂದ ಆದ ಕೃತ್ಯಕ್ಕೆ ಇಡೀ ಭಾಷಾ ಸಮುದಾಯವನ್ನು ದ್ವೇಷಿಸುವುದು ತಪ್ಪು’ ಎಂದು ನಮ್ಮನ್ನು ತಡೆದಿದ್ದರು.

ಸಿನಿಮಾ ಮಾತ್ರವಲ್ಲ ಕನ್ನಡ ನಾಡು ನುಡಿ ಇರುವವರೆಗೂ ರಾಜಕುಮಾರ್‌ ಅವರ ಹೆಸರು ಚಿರಸ್ತಾಯಿ ಆಗಿರುತ್ತದೆ ಎಂದು ಹೇಳಿದ ಕೆ.ಎಸ್‌.ನಿಸಾರ್‌ ಅಹಮದ್‌, ತಮ್ಮ ಹಾಗು ರಾಜಕುಮಾರ್‌ ನಡುವಿನ ಒಡನಾಟವನ್ನು ಈ ಸಂದರ್ಭದಲ್ಲಿ ತೆರೆದಿಟ್ಟರು.

ರಾಜಕುಮಾರ್‌ ಜನ್ಮ ದಿನಾಚರಣೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ನಾಗತಿಹಳ್ಳಿ ಚಂದ್ರಶೇಖರ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಚಿನ್ನೇಗೌಡ, ರಾಜ್‌ ಪುತ್ರರಾದ ಶಿವರಾಜಕುಮಾರ್‌, ರಾಘವೇಂದ್ರರಾಜಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಂಕಜ್‌ ಕುಮಾರ್‌ ಪಾಂಡೆ, ರಿಜಿಸ್ಟ್ರಾರ್‌ ದಿನೇಶ್‌ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

ಇದೇ ಸಂದರ್ಭದಲ್ಲಿ ಮೋಹನ್‌ ಮತ್ತು ತಂಡ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟಿತು. ಶಿವರಾಜಕುಮಾರ್‌ ಅವರು ರಾಜಕುಮಾರ್‌ ಚಿತ್ರಗಳ ಎರಡು ಗೀತೆಗಳನ್ನು ಹಾಡಿ ರಂಜಿಸಿದರು. ಯೋಗರಾಜ್‌ಭಟ್‌ ಕಾರ್ಯಕ್ರಮ ಸಂಯೋಜಿಸಿದ್ದರು. ಸಾಹಿತಿ ಬರಗೂರು ರಾಮಚಂದ್ರಪ್ಪ, ನಾಗೇಂದ್ರಪ್ರಸಾದ್‌ ಸೇರಿದಂತೆ ಡಾ.ರಾಜಕುಮಾರ್‌ ಕುಟುಂಬ ವರ್ಗ ಹಾಗು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಹಾಜರಿದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.