ಹಿಂದಿ ಹೇರಿಕೆ ಖಂಡಿಸಿ “ಕರಾಳ ದಿನ’
Team Udayavani, Sep 15, 2019, 3:04 AM IST
ಬೆಂಗಳೂರು: ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಕರವೇ ವತಿಯಿಂದ ನಗರದ ಆನಂದ್ರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಶನಿವಾರ “ಕರಾಳ ದಿನಾಚರಣೆ’ ಮೂಲಕ ಪ್ರತಿಭಟನೆ ನಡೆಸಿತು. ಕರವೇ ನೂರಾರು ಕಾರ್ಯಕರ್ತರು ಭಾಗವಹಿಸಿ, “ಹಿಂದಿ ಹೇರಿಕೆ ನಿಲ್ಲಲಿ, ಸಮಾನತೆ ಭಾಷಾ ನೀತಿ ಜಾರಿಗೆ ಬರಲಿ’, “ಹಿಂದಿ ವೈಭವೀಕರಣ ಕೊನೆಗೊಳ್ಳಲಿ’, ಹಿಂದಿ ದಿನ ಆಚರಣೆ ರದ್ದಾಗಲಿ ಎಂದು ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.
ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮಾತನಾಡಿ, ಕೇಂದ್ರ ಸರ್ಕಾರ ತನ್ನ ಅಧೀನದ ಬ್ಯಾಂಕ್, ರೈಲ್ವೆ, ಅಂಚೆ ಇಲಾಖೆ ಸೇರಿ ಇತರೆ ಇಲಾಖೆಗಳಲ್ಲಿ ಸೆ.14ರಂದು ಹಿಂದಿ ದಿನ ಆಚರಿಸುತ್ತದೆ. ಈ ಮೂಲಕ ದೇಶದ ಎಲ್ಲಾ ಭಾಷೆ ಜನರ ತೆರಿಗೆ ಹಣದಲ್ಲಿ ಹಿಂದಿ ಭಾಷೆ ಬೆಳವಣಿಗೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಾದೇಶಿಕ ಭಾಷೆ ಹಾಗೂ ಭಾಷಿಕರಿಗೆ ಅನ್ಯಾಯ ಮಾಡುತ್ತಿದೆ. ಈ ನಿಟ್ಟಿನಲ್ಲಿ ಹಿಂದಿ ದಿನ ರದ್ದು ಮಾಡಬೇಕು. ಸಂವಿಧಾನದ 343 ರಿಂದ 351 ವಿಧಿ ತಿದ್ದುಪಡಿ ಮಾಡಿ ಸಂವಿಧಾನದ 8ನೇ ಪರಿಚ್ಛೇದದಲ್ಲಿನ ಕನ್ನಡ ಸೇರಿ ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನಮಾನ ನೀಡಬೇಕೆಂದರು.
ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ಭಾರತ ಭಾಷಾ ವೈವಿಧ್ಯತೆಯಿಂದ ಕೂಡಿದ ರಾಜ್ಯಗಳ ಒಕ್ಕೂಟವಾಗಿದೆ. ಸಂವಿಧಾನ ಅಥವಾ ಯಾವುದೇ ಕಾನೂನು ಹಿಂದಿ ಭಾಷೆ ರಾಷ್ಟ್ರ ಭಾಷೆ ಎಂದು ಹೇಳಿಲ್ಲ. ಈ ಹಿಂದೆ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ 13 ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕ್ ಪರೀಕ್ಷೆ ಬರೆಯಬಹುದೆಂದು ಹೇಳಿದ್ದರು. ಆದರೆ, ಇಂದು ಇದಕ್ಕೆ ವಿರುದ್ಧದ ಮಾತುಗಳನ್ನಾಡುತ್ತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಭಾಷೆ ಒಂದು ರಾಷ್ಟ್ರ ಮಾದರಿಯಲ್ಲಿ ಹಿಂದಿ ಭಾಷೆಯನ್ನು ಎಲ್ಲರೂ ಒಪ್ಪಬೇಕು ಎಂದು ಹೇಳುವ ಮೂಲಕ ಒತ್ತಾಯವಾಗಿ ಹಿಂದಿ ಹೇರಿಕೆ ಮಾಡಿ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ