ಡೇಟಾ ಸೈನ್ಸ್, ಸೆಮಿ ಕಂಡಕ್ಟರ್ ವಿಸ್ತರಣೆ ಸೇರಿ 8 ಒಪ್ಪಂದಕ್ಕೆ ಸಹಿ: ಡಿಸಿಎಂ ಅಶ್ವತ್ಥನಾರಾಯಣ
Team Udayavani, Nov 20, 2020, 3:02 PM IST
ಬೆಂಗಳೂರು: ಸೈಬರ್ ಭದ್ರತೆ, ದತ್ತಾಂಶ ವಿಜ್ಞಾನ, ಸೆಮಿಕಂಡಕ್ಟರ್ ಗಳ ಬಗ್ಗೆ ಅಧ್ಯಯನ, ಕೃತಕ ಬುದ್ಧಿಮತ್ತೆ ಸೇರಿ ಸುಮಾರು 8 ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ದೇಶಗಳೊಂದಿಗೆ ಒಡಂಬಡಿಕೆ ಮಾಡಿದ್ದೇವೆ ಎಂದು ಐಟಿ-ಬಿಟಿ ಸಚಿವರು ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಟೆಕ್ ಸೆಮ್ಮಿಟ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದೇ ದಿನ 8 ಒಡಂಬಡಿಕೆಗೆ ಸಹಿ ಹಾಕಿದ್ದೇವೆ. ಯಾವ ದೇಶದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೋ ಆ ದೇಶದ ಸಂಬಂಧಪಟ್ಟ ಸಂಸ್ಥೆ ಮತ್ತುನಮ್ಮ ಸಂಸ್ಥೆಗಳ ಸಮನ್ವಯದೊಂದಿಗೆ ಒಪ್ಪಂದ ನಡೆಯಲಿದೆ ಎಂದರು.
ಡೇಟಾ ಸೈನ್ಸ್ ಮತ್ತು ಕೃತಕ ಬುದ್ಧಿಮತ್ತೆಗೆ ಫಿನ್ ಲ್ಯಾಂಡ್ ಜತೆ ಒಪ್ಪಂದ ಮಾಡಿಕೊಂಡಿದ್ದೇವೆ. ಸ್ಕಿಲ್ ಅಪ್ರೇಡೇಷನ್ ಆಗುತ್ತಿರಬೇಕು. ಸದ್ಯದಲ್ಲೇ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಕೇಂದ್ರ ಆರಂಭ ಮಾಡಲಿದ್ದೇವೆ. ಕೃಷಿ, ಸಾರಿಗೆ, ಸೇವಾ ವಿಭಾಗ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಅನುಕೂಲ ಆಗಲಿದೆ ಎಂದು ಹೇಳಿದರು.
ಇದನ್ನೂ ಓದಿ:Unlock 5.0: ಕೋವಿಡ್ 19-ಮಹಾರಾಷ್ಟ್ರದಲ್ಲಿ ಡಿ.31ರವರೆಗೂ ಎಲ್ಲಾ ಶಾಲೆಗಳು ಬಂದ್
ಸ್ವೀಡನ್ ಜೊತೆ ಇಂಟರ್ ನೆಟ್ ಆಫ್ ಥಿಂಗ್ಸ್ (ಐಒಟಿ) ಗಾಗಿ ಒಪ್ಪಂದ ಮಾಡುತ್ತಿದ್ದೇವೆ. ಸ್ಮಾರ್ಟ್ ಸಿಟಿ, ಹೆಲ್ತ್, ಉತ್ಪಾದನಾ ವಲಯ ಹಾಗೂ ಕೃಷಿಗೆ ಸಹಕಾರಿ ಆಗಲಿದೆ. ಸೆಮಿಕಂಡಕ್ಟರ್ ಕುರಿತು ಜರ್ಮನಿ ಮತ್ತು ಯುನೈಟೆಡ್ ಕಿಂಗ್ ಡಮ್ ಜತೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದರು.
ಸೆಮಿ ಕಂಡಕ್ಟರ್ ರಾಷ್ಟ್ರ ಮಟ್ಟದಲ್ಲಿ ವಿಸ್ತರಿಸಲು ಸೂಚನೆ ಬಂದಿದೆ. ರಕ್ಷಣೆ ಸಹಿತವಾಗಿ ಎಲ್ಲ ಕ್ಷೇತ್ರಕ್ಕೂ ಅಗತ್ಯವಿದೆ ಎಂದು ಡಿಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್