ಆ್ಯಂಬುಲೆನ್ಸ್ನಲ್ಲಿ ಮನೆ ವಸ್ತು ಸ್ಥಳಾಂತರಿಸಿದ ಡಿಸಿಪಿ
Team Udayavani, Oct 3, 2019, 3:04 AM IST
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಮ್ಮ ಮನೆಯ ವಸ್ತುಗಳನ್ನು ಸ್ಥಳಾಂತರಿಸಲು ಆ್ಯಂಬುಲೆನ್ಸ್ ಬಳಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಇತ್ತೀಚೆಗಷ್ಟೇ ನಗರ ಕೇಂದ್ರ ಅಪರಾಧ ವಿಭಾಗಕ್ಕೆ ವರ್ಗಾವಣೆಯಾಗಿರುವ ಕುಲದೀಪ್ ಕುಮಾರ್ ಜೈನ್ ಅವರಿಗೆ ಶಿವಾಜಿನಗರದ ಮಸೀದಿ ಪಕ್ಕದಲ್ಲಿರುವ ಸರ್ಕಾರಿ ಬಂಗಲೆ ನೀಡಲಾಗಿದೆ. ಹೀಗಾಗಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ಮನೆ ವಸ್ತುಗಳನ್ನು ಸರ್ಕಾರಿ ಬಂಗಲೆಗೆ ಸ್ಥಳಾಂತರಿಸಿದ್ದಾರೆ.
ಪ್ರಮುಖವಾಗಿ ಜೀವರಕ್ಷಕ ಆ್ಯಂಬುಲೆನ್ಸ್ ಅನ್ನು ಮನೆಯ ವಸ್ತುಗಳನ್ನು ಸ್ಥಳಾಂತರಿಸಲು ಬಳಸಿಕೊಂಡಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕುಲದೀಪ್ ಕುಮಾರ್ ಜೈನ್, ಈ ಹಿಂದೆ ಕೆಎಸ್ಆರ್ಪಿ ಡಿಸಿಪಿಯಾಗಿದ್ದು, ಪರಿಚಿತ ಮೂವರು ಕೆಎಸ್ಆರ್ಪಿ ಸಿಬ್ಬಂದಿ ಮನೆ ವಸ್ತುಗಳನ್ನು ಸ್ಥಳಾಂತರ ಮಾಡಲು ನೆರವು ನೀಡಲು ಬಂದಿದ್ದರು.
ಅದೇ ವೇಳೆ ಆ್ಯಂಬುಲೆನ್ಸ್ ಸಿಬ್ಬಂದಿ ಘಟನೆಯೊಂದರ ಸಂಬಂಧ ತಮ್ಮ ಸಹಿ ಪಡೆಯಲು ಮನೆ ಬಳಿ ಬಂದಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಈ ಹೇಳಿಕೆ ಗೊಂದಲ ಉಂಟು ಮಾಡಿದ್ದು, ಆ್ಯಂಬುಲೆನ್ಸ್ ಮತ್ತು ಕೆಎಸ್ಆರ್ಪಿ ವಾಹನ ಬಳಕೆ ಫೋಟೋಗಳು ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ