ಮದಗಜಗಳ ಕಾದಾಟದಲ್ಲಿ ಸಲಗ ಸಾವು
Team Udayavani, Apr 10, 2018, 6:50 AM IST
ಹುಣಸೂರು: ಮದಗಜಗಳ ಕಾದಾಟದಲ್ಲಿ ಸಲಗವೊಂದು ಮೃತಪಟ್ಟಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆ ಚೌಕೂರು(ಮತ್ತಿಗೋಡು) ವಲಯದಲ್ಲಿ ಮದಗಜಗಳ ಕಾದಾಟದಲ್ಲಿ ಸುಮಾರು 40 ವರ್ಷದ ಸಲಗವೊಂದು ಮೃತಪಟ್ಟಿದೆ. ವಲಯದ ಮತ್ತಿಗೋಡು ಬೀಟ್ನ ಹೊಸಗದ್ದೆ ಬಳಿ ಘಟನೆ ನಡೆದಿದ್ದು, ಕಾದಾಟದ ವೇಳೆ ಮೃತ ಆನೆಯ ಹೊಟ್ಟೆಗೆ ಮತ್ತೂಂದು ಸಲಗ ದಂತದಿಂದ ತಿವಿದಿದ್ದು, ಹೊಟ್ಟೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವವಾಗಿ ಸ್ಪಲ್ಪ ದೂರ ನಡೆದು ನಿತ್ರಾಣಗೊಂಡು ಮೃತಪಟ್ಟಿದೆ ಎಂದು ಎಸಿಎಫ್ ಪ್ರಸನ್ನಕುಮಾರ್ ತಿಳಿಸಿದ್ದಾರೆ.
ಬೀಟ್ನಲ್ಲಿದ್ದ ಸಿಬ್ಬಂದಿ ಗಾಯಗೊಂಡಿದ್ದ ಆನೆಯನ್ನು ಕಂಡು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಅಧಿಕಾರಿಗಳು ಹಾಗೂ ವೈದ್ಯರು ತೆರಳುವ ವೇಳೆಗೆ ಆನೆ ಮೃತಪಟ್ಟಿತ್ತು. ಸ್ಥಳಕ್ಕೆ ಎಸಿಎಫ್ ಪ್ರಸನ್ನಕುಮಾರ್, ಆರ್ಎಫ್ಒ ಕಿರಣ್ಕುಮಾರ್ ಹಾಗೂ ವನ್ಯಜೀವಿ ಮಂಡಳಿಯ ಸದಸ್ಯ ಸುಬ್ಬೂರು ಭೇಟಿ ನೀಡಿ ಪರಿಶೀಲಿಸಿದರು. ನಾಗರಹೊಳೆ ಪಶು ವೈದ್ಯ ಡಾ.ಮುಜೀಬ್ ರೆಹಮಾನ್ ಮರಣೋತ್ತರ ಪರೀಕ್ಷೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ