ಸಾಲಮನ್ನಾ ಕಮಿಷನ್‌ ದಂಧೆಗೆ ಹೆಲ್ಪ್ ಲೈನ್‌ ಕಡಿವಾಣ


Team Udayavani, Aug 21, 2018, 6:00 AM IST

help-line.jpg

ಬೆಂಗಳೂರು: ರಾಜ್ಯ ಸರ್ಕಾರದ ಸಾಲ ಮನ್ನಾ ಯೋಜನೆಯ ಲಾಭ ಪಡೆದ ರೈತರಿಗೆ ಪುನಃ ಸಾಲ ವಿತರಿಸಲು ಕೆಲವು ಸಹಕಾರ ಸಂಘಗಳ ಕಾರ್ಯದರ್ಶಿಗಳು ಕಮಿಷನ್‌ ಕೇಳುತ್ತಿದ್ದಾರೆ!

ಹೌದು, ಸರ್ಕಾರವೇ ಇದನ್ನು ಅಧಿಕೃತವಾಗಿ ಒಪ್ಪಿಕೊಂಡಿದೆ. ಅಷ್ಟೇ ಅಲ್ಲ, ಈ ರೀತಿ ಕಮಿಷನ್‌ ದಂಧೆಗೆ ಕಡಿವಾಣ ಹಾಕಲು ಹೆಲ್ಪ್ಲೈನ್‌ ಆರಂಭಿಸಲು ನಿರ್ಧರಿಸಿದೆ.

ಸಹಕಾರ ಇಲಾಖೆ ಶೀಘ್ರದಲ್ಲೇ ಹೆಲ್ಪ್ಲೈನ್‌ ಸಂಖ್ಯೆಯನ್ನು ಪ್ರಕಟಿಸಲಿದ್ದು, ಸಾಲ ಮನ್ನಾ ವಿಚಾರದಲ್ಲಿ ಸಂಘದ ಕಾರ್ಯದರ್ಶಿ ಸೇರಿದಂತೆ ಯಾರಾದರೂ ಕಮಿಷನ್‌ ಕೇಳಿದಲ್ಲಿ ರೈತರು ಈ ಸಂಖ್ಯೆಗೆ ನೇರವಾಗಿ ದೂರು ಸಲ್ಲಿಬಹುದು. ಈ ದೂರುಗಳ ಬಗ್ಗೆ ತನಿಖೆ ನಡೆಸಿ ಅದು ಸಾಬೀತಾದರೆ ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಕೂಡ ತೀರ್ಮಾನಿಸಲಾಗಿದೆ.

ಈ ಕುರಿತು ಸಹಕಾರ ಸಂಘಗಳ ನಿಬಂಧಕ ಎಂ.ಕೆ.ಅಯ್ಯಪ್ಪ ಸುತ್ತೋಲೆ ಕಳುಹಿಸಿದ್ದು, ಸಹಕಾರಿ ಕ್ಷೇತ್ರದ ಹಣಕಾಸು ಸಂಸ್ಥೆಗಳ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದ್ದಾರೆ.

ಸಿದ್ದರಾಮಯ್ಯ  ಅವಧಿಯಲ್ಲಿ ರೈತರು ಸಹಕಾರ ಸಂಘಗಳಲ್ಲಿ ಮಾಡಿದ್ದ ಸಾಲದ ಪೈಕಿ 50 ಸಾವಿರ ರೂ.ವರೆಗಿನ ಸಾಲ ಮನ್ನಾ ಮಾಡಿತ್ತು. ಇದರ ಲಾಭ ಪಡೆದ ರೈತರಿಗೆ ಪುನಃ ಸಾಲ ವಿತರಿಸುವ ಸಂದರ್ಭದಲ್ಲಿ ಸಹಕಾರ ಸಂಘಗಳ ಕಾರ್ಯದರ್ಶಿಗಳು ಕಮಿಷನ್‌ ಕೇಳುತ್ತಿದ್ದರು ಎಂಬ ಬಗ್ಗೆ  ದೂರು ಬಂದಿದ್ದವು.ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊ ಳ್ಳ ಲಾ ಗಿದೆ. ಈ ಹೆಲ್ಪ್ಲೈನ್‌ ಮುಂದಿನ ದಿನಗಳಲ್ಲಿ ಹಾಲಿ ಸರ್ಕಾರದ ಸಾಲ ಮನ್ನಾ ಯೋಜನೆಗೂ ಇರುತ್ತದೆ. ಬೇನಾಮಿ ರೈತರ ಹೆಸರಿನಲ್ಲಿ ಸಾಲ ಮನ್ನಾ ಯೋಜನೆಯ ದುರುಪಯೋಗ ಮಾಡಿಕೊಳ್ಳುವುದು, ಲೆಕ್ಕ ಪುಸ್ತಕದಲ್ಲಿ ಹೊಂದಾಣಿಕೆ ಮಾಡಿ ರೈತರಿಗೆ ವಂಚನೆ ಮಾಡುವುದು ಮುಂತಾದ ಸಮಸ್ಯೆಗಳ ಬಗ್ಗೆ ಹಾಗೂ ಸಾಲ ಮನ್ನಾ ಮತ್ತು ಹೊಸ ಸಾಲದ ವಿಚಾರದಲ್ಲಿ ರೈತರಿಗೆ ತೊಂದರೆಯಾದಾಗಲೂ ದೂರು ದಾಖಲಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಾಲ ಮನ್ನಾ ಆಗಿ ಹೊಸ ಸಾಲ ವಿತರಿಸುವಾಗ ಡಿಸಿಸಿ ಬ್ಯಾಂಕ್‌ ಸೇರಿ ಇತರೆ ಯಾವುದೇ ಬ್ಯಾಂಕಿನಲ್ಲಿ ರೈತರು ರುಪೇ ಕಾರ್ಡ್‌ ಪಡೆಯಲು ಹೊಂದಿರುವ ಉಳಿತಾಯ ಖಾತೆ ಮೂಲಕವೇ ಸಾಲ ವಿತರಿಸಬೇಕು. ರೈತರ ಸಾಲ ಮರುಪಾವತಿಗೆ ನಿಗದಿಪಡಿಸಿದ ಗಡುವಿನೊಳಗೆ ಸರ್ಕಾರದಿಂದ ಸಾಲ ಮನ್ನಾ ಮೊತ್ತ ಬಿಡುಗಡೆ ಆಗದೇ ಇದ್ದರೂ ಮರುಪಾವತಿ ಅವಧಿಯಿಂದ ಸರ್ಕಾರದಿಂದ ಹಣ ಬರುವವರೆಗಿನ ಅವಧಿಗೆ ಯಾವುದೇ ಬಡ್ಡಿ ವಿಧಿಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಬೆಳೆ ವಿಮೆ ಕಡ್ಡಾಯ
ಸಾಲ ಮನ್ನಾ ಸೌಲಭ್ಯ ಪಡೆಯುವ ರೈತರು ಮತ್ತೆ ಸಾಲ ಪಡೆಯುವಾಗ ಬೆಳೆ ವಿಮೆ ಮಾಡಿಕೊಳ್ಳುವುದು ಕಡ್ಡಾಯ. ವರ್ಷದ ಯಾವುದೇ ತಿಂಗಳಲ್ಲಿ ಹೊಸ ಸಾಲ ವಿತರಿಸಿದರೂ ಆ ವರ್ಷದ ಆರಂಭದಲ್ಲಿಯೇ ರೈತರು ಬೆಳೆಯುವ ಬೆಳೆಯ ವಿವರ ಪಡೆದು ರೈತರನ್ನು ಕಡ್ಡಾಯವಾಗಿ ಬೆಳೆ ವಿಮೆ ವ್ಯಾಪ್ತಿಗೆ ತರಬೇಕು ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ರೈತರ ಸಾಲದ ಖಾತೆಯಿಂದ ಬೆಳೆ ವಿಮೆಗೆ ಹಣ ಪಡೆದುಕೊಳ್ಳಬಹುದು. ಆದರೆ, ಅದನ್ನು ಹೊರತುಪಡಿಸಿ ಒತ್ತಾಯ ಪೂರ್ವಕವಾಗಿ ಇತರೆ ಯಾವುದೇ ವೆಚ್ಚ ಅಥವಾ ಠೇವಣಿಯನ್ನು ವಸೂಲಿ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

– ಪ್ರದೀಪ್‌ಕುಮಾರ್‌ ಎಂ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.