ಸಾರ್ವಜನಿಕರ ದೂರು ನಿರ್ವಹಣಾ ವ್ಯವಸ್ಥೆಗೆ ನಿರ್ಧಾರ


Team Udayavani, Dec 1, 2017, 7:10 AM IST

K-Ratna-Prabha,-Karnataka-C.jpg

ಬೆಂಗಳೂರು: ರಾಜ್ಯಾಡಳಿತದ ಮುಖ್ಯಸ್ಥರ ಜವಾಬ್ದಾರಿ ಜತೆಗೆ ಜನ ಸಾಮಾನ್ಯರ ಸಮಸ್ಯೆಗಳಿಗೂ ಸ್ಪಂದಿಸಲು ಮುಂದಾಗಿರುವ ನೂತನ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಅದಕ್ಕಾಗಿ ಸಾರ್ವಜನಿಕ ದೂರು ನಿರ್ವಹಣಾ ವ್ಯವಸ್ಥೆ ಆರಂಭಿಸುವುದಾಗಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ನಿರ್ಗಮಿತ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ಅವರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯ ಕಾರ್ಯದರ್ಶಿಯಾಗಿ ನನ್ನ ಆದ್ಯತೆ ಸರ್ಕಾರದ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ. ಇದರೊಂದಿಗೆ ನನಗೆ ಅತ್ಯಂತ ನೆಚ್ಚಿನ ವಿಷಯ ಜನರಿಗೆ ಸ್ಪಂದಿಸುವುದು, ಅವರೊಂದಿಗೆ ಸಂಪರ್ಕ ಮತ್ತು ಅವರ ಕುಂದುಕೊರತೆಗಳ ನಿವಾರಣೆ. ಯಾರಾದರು ಕಷ್ಟ ಹೇಳಿಕೊಂಡು ಕಚೇರಿಗೆ ಬಂದಾಗ ಅದಕ್ಕೆ ಪರಿಹಾರ ಕಲ್ಪಿಸುವಾಗ ಸಿಗುವ ಸಂತೋಷ ಬೇರೆ ಯಾವುದರಲ್ಲೂ ನನಗೆ ಸಿಗುವುದಿಲ್ಲ. ಹೀಗಾಗಿ ಎಷ್ಟೇ ಕಾರ್ಯದೊತ್ತಡ ಇದ್ದರೂ ಸಾರ್ವಜನಿಕರ ದೂರಿಗೆ ಸ್ಪಂದಿಸಲು ಸಮಯ ಮೀಸಲಿಡುತ್ತೇನೆ. ಅದಕ್ಕಾಗಿ ಸಾರ್ವಜನಿಕ ದೂರು ನಿವಾರಣಾ ವ್ಯವಸ್ಥೆ ಆರಂಭಿಸಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ದೂರು ನಿರ್ವಹಣಾ ವ್ಯವಸ್ಥೆ ಜಾರಿಗೆ ತರಲಾಗುವುದು. ಅದಕ್ಕೆ ಪ್ರತ್ಯೇಕ ಅಧಿಕಾರಿಗಳ ನೇಮಕ, ಪ್ರತ್ಯೇಕ ಆ್ಯಪ್‌ ಸಿದ್ಧಪಡಿಸುವುದು ಮುಂತಾದ ಕಾರ್ಯಗಳನ್ನು ಮಾಡಲಾಗುವುದು ಎಂದರು.

ಮಹಿಳೆಯರ ಸುರಕ್ಷತೆಗೆ ಕ್ರಮ:
ಈಗಾಗಲೇ ರಾಜ್ಯ ಪೊಲೀಸ್‌ ನಿರ್ದೇಶಕರಾಗಿ ಮಹಿಳೆ ನೇಮಕಗೊಂಡಿದ್ದಾರೆ. ಇದೀಗ ಮುಖ್ಯ ಕಾರ್ಯದರ್ಶಿ ಜವಾಬ್ದಾರಿ ನನಗೆ ಸಿಕ್ಕಿದೆ. ಎರಡು ಪ್ರಮುಖ ಹುದ್ದೆಗಳು ಮಹಿಳೆಯರ ಪಾಲಾಗಿರುವುದರಿಂದ ಮುಂದಿನ ದಿನಗಳಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಸಾಕಷ್ಟು ಬದಲಾವಣೆಗಳಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮಹಿಳಾ ಸುರಕ್ಷತೆ ವಿಚಾರದಲ್ಲಿ ಏನು ಆಗುತ್ತಿದೆ? ಮುಂದೇನು ಆಗಬೇಕು? ಇರುವ ಲೋಪಗಳೇನು? ಅದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬ ಬಗ್ಗೆ ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಮುಖ್ಯ ಕಾರ್ಯದರ್ಶಿ ಹುದ್ದೆಯ ಅವಧಿ ಕೇವಲ ನಾಲ್ಕು ತಿಂಗಳಾದರು ಮುಖ್ಯ ಕಾರ್ಯದರ್ಶಿ ಹುದ್ದೆಯ ಧನಾತ್ಮಕ ಶಕ್ತಿ ಏನು? ಈ ಶಕ್ತಿ ಬಳಸಿ ಏನು ಬದಲಾವಣೆ ತರಬಹುದು ಎಂಬುದನ್ನು ಸಾಧಿಸಿ ತೋರಿಸುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಸರ್ಕಾರ ಹೆಮ್ಮೆ ಪಡುವ ಜವಾಬ್ದಾರಿ ನೀಡಿದೆ. ಹೀಗಾಗಿ ಸರ್ಕಾರದ ನಿರೀಕ್ಷೆಗಳನ್ನು ತಲುಪುವುದು ನನ್ನ ಜವಾಬ್ದಾರಿ. ಆ ನಿಟ್ಟಿನಲ್ಲಿ ಪ್ರಮಾಣಿಕ ಕೆಲಸ ಮಾಡುತ್ತೇನೆ. ಆದರೆ, ಯಾವತ್ತೂ ಸರ್ಕಾರಕ್ಕೆ ಕೆಟ್ಟ ಹೆಸರು ಬರಲು ಅವಕಾಶ ನೀಡುವುದಿಲ್ಲ ಎಂದರು.

ಭಾವುಕರಾಗಿದ್ದ ರತ್ನಪ್ರಭ
ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮತ್ತು ಸುದ್ದಿಗೋಷ್ಠಿಯ ವೇಳೆ ರತ್ನಪ್ರಭ ಅವರು ಭಾವುಕರಾಗಿದ್ದರು. ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೆ ಯಾವ ಮುಖ್ಯ ಕಾರ್ಯದರ್ಶಿಗೂ ಸಿಗದ ಜನಬೆಂಬಲ ನನಗೆ ಸಿಕ್ಕಿದೆ. ನಾನು ಮುಖ್ಯ ಕಾರ್ಯದರ್ಶಿಯಾಗುವುದನ್ನು ಜನ ಕಾಯುತ್ತಿದ್ದರು ಎನ್ನುವಷ್ಟರ ಮಟ್ಟಿಗೆ ಇಂದು ಜನ ಸೇರಿದ್ದರು. ಇದರಿಂದ ಭಾವುಕಳಾಗುವುದು ಸಹಜ ಎಂದರು.

ಅಷ್ಟೇ ಅಲ್ಲ, ಭಾವುಕತೆ ಇದ್ದರೆ ಉತ್ತಮವಾಗಿ ಕೆಲಸ ಮಾಡಬಹುದು. ಬೇರೆಯವರ ಭಾವನೆಗಳನ್ನು ತಿಳಿದುಕೊಳ್ಳಬೇಕಾದರೆ ಭಾವುಕತೆ ಇರಬೇಕು. ಮೊದಲಿನಿಂದಲೂ ನಾನು ಇದೇ ರೀತಿ ಇದ್ದೆ ಎಂದು ಹೇಳಿದರು. ವಿಶೇಷವೆಂದರೆ ಇದೇ ಮೊದಲ ಬಾರಿ ಜೈಕಾರ, ಘೋಷಣೆಗಳೊಂದಿಗೆ ರತ್ನಪ್ರಭ ಅವರು ಅಧಿಕಾರ ಸ್ವೀಕರಿಸಿದರು. ಸಹಜವಾಗಿಯೇ ಇದರಿಂದ ಅವರು ಭಾವುಕರಾಗಿದ್ದರು.

ನಿನಗ್ಯಾಕೆ ದೂರದ ಜಿಲ್ಲೆ ಸಿಕ್ಕಿದೆ ಎಂದು ಕೇಳಿದ್ದರು
ನಾನು ಐಎಎಸ್‌ ಮುಗಿಸಿ ಬಂದ ಆರಂಭದಲ್ಲಿ (1983) ನನಗೆ ಪ್ರಥಮವಾಗಿ ಸಿಕ್ಕಿದ್ದು ಬೀದರ್‌ ಉಪವಿಭಾಗಾಧಿಕಾರಿ ಹುದ್ದೆ. ಆ ಸಂದರ್ಭದಲ್ಲಿ ನನ್ನ ಬ್ಯಾಚ್‌ಮೆಟ್‌ಗಳೆಲ್ಲಾ, ನಮಗೆಲ್ಲಾ ಒಳ್ಳೆಯ ಜಿಲ್ಲೆ ಸಿಕ್ಕಿದೆ. ನಿನಗೊಬ್ಬಳಿಗೆ ಏಕೆ ದೂರದ ಜಿಲ್ಲೆ ಸಿಕ್ಕಿದೆ ಎಂದು ಪ್ರಶ್ನಿಸಿದ್ದರು. ಅದಕ್ಕೆ ನಾನು, ಇದು ಒಳ್ಳೆಯ ಕಾಣಿಕೆ ಎಂದು ತಿಳಿದುಕೊಳ್ಳುತ್ತೇನೆ ಎಂದಷ್ಟೇ ಹೇಳಿದೆ. ಆದರೆ, ಬೀದರ್‌ ಜಿಲ್ಲೆಯಲ್ಲಿ ಹೆಚ್ಚಿನ ಸಮಸ್ಯೆ ಇದ್ದುದರಿಂದ ಅದನ್ನು ಬಗೆಹರಿಸಲು ಉಪವಿಭಾಗಾಧಿಕಾರಿ ಹುದ್ದೆಗೆ ಐಎಎಸ್‌ ಅಧಿಕಾರಿಯನ್ನು ನೇಮಿಸಬೇಕು ಎಂದು ಆಗ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ನಿರ್ಧರಿಸಿದ್ದರು. ಅದರಂತೆ ನನ್ನನ್ನು ಆಯ್ಕೆ ಮಾಡಿದ್ದರು ಎಂಬುದು ನಂತರ ನನಗೆ ಗೊತ್ತಾಯಿತು. ಈಗಲೂ ಬೀದರ್‌ನ ಜನ ನನ್ನನ್ನು ಹೆಚ್ಚು ಪ್ರೀತಿಸುತ್ತಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ರತ್ನಪ್ರಭ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ರತ್ನಪ್ರಭ ಅವರನ್ನು ಕಾಣಲು ಬಂದ ರತ್ನಪ್ರಭ ಪಾಟೀಲ್‌
ನೂತನ ಮುಖ್ಯ ಕಾರ್ಯದರ್ಶಿಯಾಗಿ ಕೆ.ರತ್ನಪ್ರಭ ಅವರು ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ವಿಶೇಷ ಅತಿಥಿಯೊಬ್ಬರು ಹಾಜರಿದ್ದರು. ಅವರ ಹೆಸರು ರತ್ನಪ್ರಭ ಪಾಟೀಲ್‌.

ಹೌದು, ವಿಶೇಷವೆಂದರೆ ರತ್ನಪ್ರಭ ಪಾಟೀಲ್‌ ಅವರಿಗೆ ಆ ಹೆಸರು ಇಡಲು ಕಾರಣರಾಗಿದ್ದೇ ಮುಖ್ಯ ಕಾರ್ಯದರ್ಶಿ ರತ್ನಪ್ರಭ. ಐಎಎಸ್‌ ಮುಗಿಸಿ ಪ್ರೊಬೆಷನರಿ ಅವಧಿ ಮುಗಿಸಿದ ಬಳಿಕ ಅವರಿಗೆ ಪ್ರಥಮವಾಗಿ ಸಿಕ್ಕಿದ್ದು ಬೀದರ್‌ ಉಪವಿಭಾಗಾಧಿಕಾರಿ ಹುದ್ದೆ. ಅಲ್ಲದೆ, ಬೀದರ್‌ನಲ್ಲಿ ಆ ಹುದ್ದೆಯನ್ನು ಐಎಎಸ್‌ ಅಧಿಕಾರಿಯೊಬ್ಬರು ಅಲಂಕರಿಸಿದ್ದು ಅದೇ ಪ್ರಥಮ.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಾಟೀಲ್‌ ಎಂಬ ಸಿಬ್ಬಂದಿಯೊಬ್ಬರು, ತಮ್ಮ ಮಗಳೂ ಐಎಎಸ್‌ ತೇರ್ಗಡೆಯಾಗಿ ರತ್ನಪ್ರಭ ಅವರಂತೆ ಆಗಬೇಕು ಎಂದು ತಮ್ಮ ಪುತ್ರಿಗೆ ರತ್ನಪ್ರಭ ಪಾಟೀಲ್‌ ಎಂದು ಹೆಸರಿಟ್ಟಿದ್ದರು. ಹೀಗಾಗಿ ರತ್ನಪ್ರಭ ಪಾಟೀಲ್‌ ಅವರು ಗುರುವಾರ ವಿಧಾನಸೌಧಕ್ಕೆ ಆಗಮಿಸಿ ನೂತನ ಮುಖ್ಯ ಕಾರ್ಯದರ್ಶಿಗೆ ಶುಭ ಕೋರಿದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.