ಜೆಡಿಎಸ್ಗೆ ಬೆಂಬಲ ನೀಡದಿರಲು ನಿರ್ಧಾರ
Team Udayavani, Mar 31, 2019, 12:23 PM IST
ಬೆಂಗಳೂರು: ಜೆಡಿಎಸ್ ಪಕ್ಷ ಹಿಂದುಳಿದ ಮತ್ತು ದಲಿತರ ವಿರೋಧಿ ನಿಲುವನ್ನು ಪ್ರದರ್ಶಿಸಿದೆ. ಇದನ್ನು ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ಗೆ ಮತನೀಡದಿರಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಮಾವಳ್ಳಿ ಶಂಕರ್ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ್ತಿ ಮೀಸಲಾತಿ ಕಾಯ್ದೆ, ಚಿನ್ನಪ್ಪರೆಡ್ಡಿ ಮತ್ತು ಮಂಡಲ್ ಆಯೋಗದ ವರದಿಗಳನ್ನು ಅನುಷ್ಠಾನ ಮಾಡುವಲ್ಲಿ ಜೆಡಿಎಸ್ ನಡೆದುಕೊಂಡ ರೀತಿ ದಲಿತ ವಿರೋಧಿ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ತಿಳಿಸಿದರು.
ಜೆಡಿಎಸ್ ಪಕ್ಷದ ನಾಯಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಯಾವುದೇ ಉನ್ನತ ಹುದ್ದೆ ಸಿಗದಂತೆ ನೋಡಿಕೊಂಡಿದ್ದಾರೆ. ರಾಜಕೀಯದಲ್ಲಿ ಸಹ ಸ್ವಜನಪಕ್ಷಪಾತ ನಿಲುವು ತೆಳೆದಿದ್ದಾರೆ. ಹೆಚ್.ಡಿ ದೇವೇಗೌಡ, ನಿಖೀಲ್ ಕುಮಾರ ಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವ ಮೂಲಕ ದಲಿತರ ಶಕ್ತಿಯನ್ನು ಪ್ರದರ್ಶಿಸಲಾಗುವುದು ಎಂದರು.
ರಾಜ್ಯ ದಲಿತ ಸಂಘರ್ಷ ಸಮಿತಿಯ ಡಾ.ಮೋಹನ್ ರಾಜ್, ಈ ಬಾರಿಯ ಚುನಾವಣೆಯಲಿ É ದಲಿತ ಒಕ್ಕೂಟ ಸಂಘಟನೆಗಳು ಜೆಡಿಎಸ್ ಪಕ್ಷವನ್ನು ಸೋಲಿಸುವ ಮೂಲಕ ಜೆಡಿಎಸ್ ಮುಕ್ತ ರಾಜ್ಯವನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು