ಬಿಸಿಯೂಟ ಸ್ಥಗಿತಗೊಳಿಸಲು ನಿರ್ಧಾರ


Team Udayavani, Feb 8, 2018, 1:09 PM IST

blore-4.jpg

ಬೆಂಗಳೂರು: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟ ನಡೆಸುತ್ತಿರುವ ಧರಣಿ ತೀವ್ರಸ್ವರೂಪ ಪಡೆದುಕೊಂಡಿದ್ದು, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದೆ. ಈ ಮೂಲಕ ಗುರುವಾರದಿಂದ ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಕಳೆದೆರಡು ದಿನಗಳಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿರುವ ಬಿಸಿಯೂಟ ತಯಾರಕರು, ಸರ್ಕಾರ ಇದುವರೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಘ ಕರೆ ನೀಡಿದೆ. ಅದರಂತೆ ರಾಜ್ಯದ ನಾನಾ ಭಾಗಗಳಿಂದ ಸುಮಾರು ಹತ್ತು ಸಾವಿರ ಬಿಸಿಯೂಟ ತಯಾರಕರು ನಗರಕ್ಕೆ ಆಗಮಿಸಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. 

ಒಕ್ಕೂಟದ ಕಾರ್ಯಕರ್ತರೆಲ್ಲರೂ ಮುಷ್ಕರದಲ್ಲಿ ಭಾಗವಹಿಸುವುದರಿಂದ ಬಿಸಿಯೂಟ ತಯಾರಿಕೆ ಕಾರ್ಯ ಸ್ಥಗಿತಗೊಳ್ಳಲಿದೆ. ಮಕ್ಕಳಿಗೆ ತೊಂದರೆ ಕೊಡುವುದು ಇದರ ಉದ್ದೇಶ ಅಲ್ಲ. ಸರ್ಕಾರದ ಗಮನಸೆಳೆಯಲು ಇದು ಅನಿವಾರ್ಯ. ಆದರೆ, ಶಾಲಾ ಆಡಳಿತ ಮಂಡಳಿಯು ಪರ್ಯಾಯವಾಗಿ ಬಿಸಿಯೂಟ ತಯಾರಿಸಿ, ಮಕ್ಕಳಿಗೆ ಪೂರೈಸಲು ನಮ್ಮ ತಕರಾರು ಇಲ್ಲ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತ “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ. 

ರಾಜ್ಯದ ಬೀದರ್‌, ಕಲುಬುರಗಿ, ಬೆಳಗಾವಿ, ಬಾಗಲಕೋಟೆ, ಗದಗ, ಮೈಸೂರು, ಚಾಮರಾಜನಗರ, ಬಳ್ಳಾರಿ, ಕೋಲಾರ,
ತುಮಕೂರು, ಕೊಡಗು, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಹೊಳಲ್ಕೆರೆ, ಹಿರಿಯೂರು ತಾಲೂಕುಗಳ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಖಾಸಗಿ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಬಂದ್‌ ಆಗಲಿದೆ. ಸುಮಾರು 10 ಸಾವಿರ ಮಂದಿ ಬಿಸಿಯೂಟ ನೌಕರರು ಬೆಂಗಳೂರು ಚಲೋದಲ್ಲಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ನಂತರ ಕಾಳಿದಾಸ ರಸ್ತೆಯಲ್ಲಿ ಮುಷ್ಕರ ಮುಂದುವರಿಯಲಿದೆ ಎಂದು ಹೇಳಿದರು. 

40 ಸಾವಿರ ಶಾಲೆಗಳಿಗೆ ತಟ್ಟಲಿದೆ ಬಿಸಿ?: ರಾಜ್ಯದಲ್ಲಿ  ಮಾರು 55 ಸಾವಿರ ಸರ್ಕಾರಿ ಶಾಲೆಗಳಿದ್ದು, ಈ ಪೈಕಿ ಅಂದಾಜು ಹತ್ತು ಸಾವಿರ ಶಾಲೆಗಳಲ್ಲಿ ಇಸ್ಕಾನ್‌, ಅದಮ್ಯ ಚೇತನದಂತಹ ಸರ್ಕಾರೇತರ ಸಂಘ- ಸಂಸ್ಥೆಗಳು ಬಿಸಿಯೂಟ ಪೂರೈಸುತ್ತಿವೆ. ಉಳಿದೆಡೆ ಬಿಸಿಯೂಟ ತಯಾರಕರಿದ್ದಾರೆ. ಅಲ್ಲೆಲ್ಲಾ ಮುಷ್ಕರದ ಬಿಸಿ ತಟ್ಟುವ ಸಾಧ್ಯತೆ ಇದೆ ಎಂದು ಮಾಲಿನಿ ಮೆಸ್ತ ತಿಳಿಸಿದರು. ಬೇಡಿಕೆ ಈಡೇರಿದರೆ ಮುಷ್ಕರ ಹಿಂಪಡೆಯಲಾಗುವುದು ಎಂದು ಹೇಳಿದರು.

ಆತಂಕದಲ್ಲೇ ರಾತ್ರಿ ಕಳೆದರು: ಈ ಮಧ್ಯೆ ಬುಧವಾರ ಕೂಡ ಧರಣಿನಿರತರು ಕೊರೆವ ಚಳಿಯಲ್ಲಿ ರಾತ್ರಿ ಕಳೆದರು. ಇನ್ನು
ಬುಧವಾರ ಸಂಜೆಯ ಅಕಾಲಿಕ ಮಳೆ ಮತ್ತಷ್ಟು ಕಿರಿಕಿರಿ ಉಂಟುಮಾಡಿತು. ಆದಾಗ್ಯೂ ಜಾಗಬಿಟ್ಟು ಕದಲದ ಮಹಿಳೆಯರು, ಉದ್ಯಾನದ ಅಕ್ಕಪಕ್ಕದ ರಸ್ತೆ, ಫ‌ುಟ್‌ಪಾತ್‌ಗಳಲ್ಲಿ, ರಸ್ತೆ ಯಲ್ಲಿ ಬಿದ್ದ ಕಸವನ್ನೇ ಪಕ್ಕಕ್ಕೆ ಸರಿಸಿ ಜಾಗ ಸಿಕ್ಕಲ್ಲಿ ಮಕ್ಕಳೊಂದಿಗೆ ಆತಂಕದಲ್ಲೇ ರಾತ್ರಿ ಕಳೆದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.