ಸಂಚಾರ ನಿಯಮ ಉಲ್ಲಂಘನೆ ಇಳಿಮುಖ


Team Udayavani, Dec 21, 2019, 10:39 AM IST

bng-tdy-2

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದರೆ ಹೆಚ್ಚಿನ ದಂಡ ವಿಧಿಸುವ ಕಾನೂನು ಜಾರಿಗೆ ಬಂದ ಮೂರು ತಿಂಗಳಲ್ಲಿಯೇ ನಿಯಮ ಉಲ್ಲಂಘನೆ ಮಾಡುವವರ ಸಂಖ್ಯೆ ಇಳಿಮುಖವಾಗಿದ್ದು, ದಂಡ ಸಂಗ್ರಹಣೆಯಲ್ಲಿ ಹೆಚ್ಚಳ ಕಂಡಿದೆ.

ಅಸುರಕ್ಷಿತ ಮತ್ತು ಅಜಾಗರೂಕ ವಾಹನ ಚಾಲನೆಯಿಂದ ಸಾವು, ನೋವು, ನಷ್ಟವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಮೋಟಾರು ವಾಹನ ಕಾನೂನು ತಿದ್ದುಪಡಿ ತರಲಾಗಿದ್ದು, ಇದೀಗ ನಗರದಲ್ಲಿ ಪರಿಣಾಮ ಬೀರುತ್ತಿದೆ. ನಿಯಮ ಉಲ್ಲಂಘನೆಯಲ್ಲಿ ಶೇ. 30 ಇಳಿಕೆ ಕಂಡಿದೆ. ದೇಶದಲ್ಲಿ ಸೆ. 3ರಂದು ಕಾನೂನು ಜಾರಿ ಬಂದಿದ್ದು, ರಾಜ್ಯ ಸರ್ಕಾರ ಸೆ. 21ರಂದು ದಂಡದ ಮೊತ್ತವನ್ನು ಪರಿಷ್ಕರಿಸಿ ಗೆಜೆಟ್‌ ಅಧಿಸೂಚನೆ ಹೊರಡಿಸಿತು. ಅಂದಿನಿಂದಲೇ ಹೊಸ ಕಾನೂನು ಜಾರಿಗೆ ಬಂದಿತು. ಅನಧಿಕೃತ ವ್ಯಕ್ತಿಗಳಿಗೆ ವಾಹನ ನೀಡಿದ ಮಾಲೀಕನಿಗೆ ದ್ವಿಚಕ್ರ ( ಸಾವಿರ ರೂ.), ಇತರೆ (3 ಸಾವಿರ), ನೋಂದಣಿ ಸಂಖ್ಯೆ ತಿರುಚುವುದು (ಒಂದು ಲಕ್ಷ ), ಅತಿವೇಗ ಚಾಲನೆ (1ರಿಂದ 2 ಸಾವಿರ), ಅಪಾಯಕಾರಿ ಚಾಲನೆ (1500-2000 ರೂ.), ಎರಡನೇ ಬಾರಿಗೆ (10 ಸಾವಿರ ರೂ.), ರೇಸಿಂಗ್‌ (5 ಸಾವಿರ) ಎರಡನೇ ಬಾರಿಗೆ (10 ಸಾವಿರ ರೂ.), ನೋಂದಣಿ ಮಾಡಿಸದೆ ಚಾಲನೆ (2 ಸಾವಿರ ರೂ.), ಹೆಲ್ಮೆಟ್‌ ರಹಿತ ಚಾಲನೆ (500 ರೂ.), ತುರ್ತು ವಾಹನಗಳಿಗೆ ದಾರಿ ಬಿಡದಿರುವುದು (ಸಾವಿರ ರೂ.) ಸೇರಿದಂತೆ 24 ನಿಯಮ ಉಲ್ಲಂಘನೆಗಳಿಗೆ ಸಂಚಾರಿ ಪೊಲೀಸರು ದಂಡ ವಿಧಿಸಬಹುದು.

ಬೆಂಗಳೂರಿನಲ್ಲಿ ಆಗಸ್ಟ್‌ ತಿಂಗಳಲ್ಲಿ 8.45 ಲಕ್ಷ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸಿದ್ದು, ಸೆಪ್ಟೆಂಬರ್‌ನಲ್ಲಿ ಈ ಪ್ರಮಾಣ 5.96 ಲಕ್ಷ, ಅ. 4.93 ಲಕ್ಷ, ನವೆಂಬರ್‌ ತಿಂಗಳಲ್ಲಿ 4.79 ಲಕ್ಷ ಸವಾರರು ನಿಯಮ ಉಲ್ಲಂಘಿಸಿದ್ದಾರೆ. ತಿಂಗಳಿಂದತಿಂಗಳಿಗೆ ಈ ಸಂಖ್ಯೆ ಕಡಿಮೆಯಾಗುತ್ತಿದ್ದು, ದಂಡ ಸಂಗ್ರಹಣೆ ತಿಂಗಳಿಗೆ ಬರೋಬರಿ 10 ಕೋಟಿ ರೂ. ದಾಟುತ್ತಿದೆ.

ಹಿಂದಿನ ವರ್ಷಕ್ಕಿಂತ ಪ್ರಸಕ್ತ ವರ್ಷ ಸಂಚಾರ ನಿಯಮ ಉಲ್ಲಂಘನೆ ಪ್ರಮಾಣ ಕಡಿಮೆಯಾಗಿದೆ ಎಂದು ಪೊಲೀಸರ ವರದಿ ತಿಳಿಸಿದೆ.  2018ರಲ್ಲಿ 83.89 ಪ್ರಕರಣದಿಂದ 81.25 ಕೋಟಿ ರೂ. ಸಂಗ್ರಹಣೆಯಾಗಿದ್ದು, 2019 ಜನವರಿಯಿಂದ ನವೆಂಬರ್‌ವರೆಗೆ 75. 19 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ 77.73 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ.

ಹೊಸ ಕಾನೂನು ಜಾರಿಯಾದಾಗಿನಿಂದ ಸಂಚಾರ ನಿಯಮ ಉಲ್ಲಂಘನೆ ಪ್ರಮಾಣ ಕಡಿಮೆಯಾಗಿದೆ. ವಾಹನ ಸವಾರರು ಸಿಗ್ನಲ್‌ ಜಂಪ್‌, ಹೆಲ್ಮೆಟ್‌ ಹಾಕಿ ವಾಹನ ಚಾಲನೆ, ಅಗತ್ಯ ದಾಖಲೆ ಇಟ್ಟುಕೊಂಡು ಚಾಲನೆ ಮಾಡುತ್ತಿದ್ದಾರೆ. ಆದ್ದರಿಂದ ನಿಯಮ ಉಲ್ಲಂಘನೆ ಕಡಿಮೆಯಾಗಿವೆ. ಹಂತ -ಹಂತವಾಗಿ ಸವಾರರು ಜಾಗರೂ.ಕರಾಗುತ್ತಿದ್ದಾರೆ. ಇದರಿಂದ ಸಾವು- ನೋವು ಪ್ರಮಾಣ ಕಡಿಮೆಯಾಗಲಿವೆ. –ಡಾ.ಬಿ.ಆರ್‌.ರವಿಕಾಂತೇಗೌಡ, ನಗರ ಜಂಟಿ ಪೊಲೀಸ್‌ ಆಯುಕ್ತರು (ಸಂಚಾರ).

 

-ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.