ಬಿಜೆಪಿ ಸರ್ಕಾರ ರಚನೆ ವಿಳಂಬ


Team Udayavani, Jul 25, 2019, 3:08 AM IST

bjp-sarka

ಬೆಂಗಳೂರು: ಸಂಖ್ಯಾಬಲ ಕಳೆದುಕೊಂಡು ಮೈತ್ರಿ ಸರ್ಕಾರ ಅಂತ್ಯವಾದ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಸರ್ಕಾರ ರಚನೆಗೆ ಉತ್ಸುಕರಾಗಿದ್ದರೂ ಶಾಸಕರ ರಾಜೀನಾಮೆ ಸಂಬಂಧ ಸ್ಪೀಕರ್‌ ಕೈಗೊಳ್ಳುವ ನಿಲುವು ಆಧರಿಸಿ ಮುಂದುವರಿಯಲು ವರಿಷ್ಠರು ನಿರ್ಧರಿಸಿದಂತಿದೆ. ಹಾಗಾಗಿ ಬಿಜೆಪಿಯಿಂದ ಸರ್ಕಾರ ರಚನೆ ಪ್ರಯತ್ನ ತುಸು ವಿಳಂಬವಾಗುವ ಸಾಧ್ಯತೆ ಇದೆ.

ಈ ನಡುವೆ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಲು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ನೇತೃತ್ವದ ನಿಯೋಗ ಬುಧವಾರ ರಾತ್ರಿ ನವದೆಹಲಿಗೆ ತೆರಳಿದ್ದು, ಕುತೂಹಲ ಮೂಡಿಸಿದೆ. ಭಾವಿ ಮುಖ್ಯಮಂತ್ರಿಯೆಂದೇ ಬಿಂಬಿತರಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬುಧವಾರ ಇಡೀ ದಿನ ಪಕ್ಷದ ನಾಯಕರು, ಮುಖಂಡರು, ಬೆಂಬಲಿಗರು, ಅಭಿಮಾನಿಗಳು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಎಲ್ಲರಿಗೂ ಬಿಎಸ್‌ವೈ ಕೃತಜ್ಞತೆ ಸಲ್ಲಿಸಿದರು.

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಸೇರಿದಂತೆ ಪ್ರಮುಖರೊಂದಿಗೆ ತಮ್ಮ ಡಾಲರ್ ಕಾಲೋನಿ ನಿವಾಸದಲ್ಲಿ ಬುಧವಾರ ಬೆಳಗ್ಗೆ ಚರ್ಚೆ ನಡೆಸಿದ ಯಡಿಯೂರಪ್ಪ ವರಿಷ್ಠರ ಸೂಚನೆಯಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಮಾತುಕತೆ ನಡೆಸಿದರು. ಬಳಿಕ ಕೇಶವ ಕೃಪಾಗೆ ತೆರಳಿದ ಯಡಿಯೂರಪ್ಪ ಕೆಲಹೊತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕರೊಂದಿಗೆ ಚರ್ಚೆ ನಡೆಸಿದರು.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಬಿ.ಎಸ್‌.ಯಡಿಯೂರಪ್ಪ, ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಬೆಳೆದುಬಂದವನು. ತಾಲೂಕು ಮಟ್ಟದಿಂದ ಮುಖ್ಯಮಂತ್ರಿಯಾಗುವವರೆಗೆ ಸಂಘ ನನಗೆ ಪೂರ್ಣ ಸಹಕಾರ ಕೊಟ್ಟಿದೆ. ನಾನು ಮುಂದಿನ ಹೆಜ್ಜೆ ಇಡುವ ಮೊದಲು ಸಂಘ ಪರಿವಾರದ ಹಿರಿಯರ ಆಶೀರ್ವಾದ ಪಡೆದು ಕೆಲ ಹೊತ್ತು ಚರ್ಚಿಸಿದ್ದೇನೆ. ದೆಹಲಿ ವರಿಷ್ಠರ ಸೂಚನೆ ನಿರೀಕ್ಷೆಯಲ್ಲಿದ್ದು, ಅವರ ಸೂಚನೆಯಂತೆ ಮುಂದುವರಿಯುವೆ ಎಂದರು.

ವರಿಷ್ಠರಿಂದ ಎಚ್ಚರಿಕೆ ನಡೆ: ಕಾಂಗ್ರೆಸ್‌, ಜೆಡಿಎಸ್‌ನ 15 ಶಾಸಕರ ರಾಜೀನಾಮೆಯಿಂದಾಗಿ ಸಂಖ್ಯಾಬಲ ಇಳಿಕೆಯಾದ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ಪತನಗೊಂಡಿದೆ. ಆದರೆ 15 ಶಾಸಕರ ರಾಜೀನಾಮೆ ಅಂಗೀಕಾರ, ತಿರಸ್ಕಾರ ಇಲ್ಲವೇ ಅನರ್ಹತೆ ಬಗ್ಗೆ ಸ್ಪೀಕರ್‌ ಈವರೆಗೆ ಯಾವುದೇ ತೀರ್ಮಾನ ಕೈಗೊಳ್ಳದ ಕಾರಣ ಎಚ್ಚರಿಕೆಯಿಂದ ಮುಂದುವರಿಯುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ಅಂಗೀಕಾರವಾದರೆ ಇಲ್ಲವೇ ಅನರ್ಹತೆಗೊಳಿಸಿದರೆ ಸಮಸ್ಯೆ ತಲೆದೋರುವುದಿಲ್ಲ. ಒಂದೊಮ್ಮೆ ಕೆಲವರ ರಾಜೀನಾಮೆ ತಿರಸ್ಕರಿಸಿದರೆ ಅವರು ಕಾಂಗ್ರೆಸ್‌, ಜೆಡಿಎಸ್‌ ಶಾಸಕರಾಗಿಯೇ ಮುಂದುವರಿಯುವುದರಿಂದ ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ ಏರಿಳಿತವಾಗಲಿದೆ. ಹಾಗಾಗಿ ಸ್ಪೀಕರ್‌ ನಡೆ ಆಧರಿಸಿ ಮುಂದುವರಿಯುವುದು ಸೂಕ್ತ ಎಂದು ಹೇಳಲಾಗಿದೆ.

ಕಳೆದ ವಿಧಾನಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾದಾಗ ಕೇವಲ 104 ಶಾಸಕ ಬಲವಿದ್ದರೂ ಬಹುಮತ ಸಾಬೀತು ಪಡಿಸಲಾಗದೆ ಬಿಜೆಪಿ ಮುಜುಗರಕ್ಕೆ ಒಳಗಾಗಿತ್ತು. ಈ ಬಾರಿಯೂ ಆ ರೀತಿ ಆಗಬಾರದೆಂಬ ಸಲಹೆಗಳೂ ಕೇಳಿಬಂದಿವೆ. ಮುಖ್ಯವಾಗಿ ಮುಂಬೈನಲ್ಲಿರುವ ಅತೃಪ್ತರ ಪೈಕಿ ಅದರಲ್ಲೂ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿ ಬಳಿಕ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿರುವ ಶಾಸಕರ ಪೈಕಿ ಕೆಲವರು ರಾಜೀನಾಮೆ ಹಿಂಪಡೆದರೆ ವ್ಯತ್ಯಾಸಗಳಾಗಲಿವೆ. ಹೀಗಾಗಿ ತಾಳ್ಮೆ ಅಗತ್ಯವಿದೆ.

ಅಶೋಕ್‌, ಅಶ್ವತ್ಥ ನಾರಾಯಣ ಮುಂಬೈಗೆ?: ಮೈತ್ರಿ ಸರ್ಕಾರದ ಆಡಳಿತ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಶಾಸಕ ಡಾ.ಸಿ.ಎನ್‌ಅಶ್ವತ್ಥ ನಾರಾಯಣ ಬುಧವಾರ ಮುಂಬೈಗೆ ತೆರಳಿದ್ದು, ಅತೃಪ್ತರನ್ನು ಭೇಟಿಯಾಗಿ ಇಲ್ಲಿನ ವಿದ್ಯಮಾನಗಳ ಬಗ್ಗೆ ನೇರವಾಗಿ ಮಾಹಿತಿ ನೀಡಿದ್ದಾರೆ. ಜತೆಗೆ ರಾಜೀನಾಮೆ ಸಂಬಂಧಪಟ್ಟಂತೆ ಮುಂದಿನ ಪ್ರಕ್ರಿಯೆ, ಕಾನೂನು ನೆರವಿನ ಬಗ್ಗೆಯೂ ತಿಳಿಸಿಕೊಡಲಿದ್ದು, ಇನ್ನೂ ಕೆಲ ದಿನ ಒಗ್ಗಟ್ಟಾಗಿಯೇ ವಾಸ್ತವ್ಯ ಮುಂದುವರಿಸುವಂತೆ ಮನವೊಲಿಸಲಿದ್ದಾರೆ ಎನ್ನಲಾಗಿದೆ.

ವರಿಷ್ಠರ ಭೇಟಿಗೆ ನಿಯೋಗ ದೆಹಲಿಗೆ: ಬಿಜೆಪಿಗೆ ಸರ್ಕಾರ ರಚನೆ ಅವಕಾಶ ಒದಗಿ ಬಂದಿದ್ದರೂ ಸಂಸದೀಯ ಮಂಡಳಿ ಸಭೆ ನಡೆಸಿ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಕುರಿತು ಚರ್ಚೆ ನಡೆದಿಲ್ಲ. ಆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ನೇತೃತ್ವದ ನಿಯೋಗ ದೆಹಲಿಗೆ ತೆರಳಿದೆ. ವರಿಷ್ಠರನ್ನು ಭೇಟಿಯಾಗಿ ಸರ್ಕಾರ ರಚನೆಗಿರುವ ಅವಕಾಶ, ಕಾನೂನಾತ್ಮಕ ಅಡೆತಡೆ ಹಾಗೂ ನಿವಾರಣೆ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಿದೆ. ಜತೆಗೆ ಸಂಸದೀಯ ಮಂಡಳಿ ಸಭೆಯನ್ನು ತ್ವರಿತವಾಗಿ ನಡೆಸಿ ಮುಂದಿನ ಪ್ರಕ್ರಿಯೆಗಳಿಗೆ ಅನುವು ಮಾಡಿಕೊಡುವಂತೆ ಮನವಿ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಹೇಗೆ?: ಸಂಸದೀಯ ಮಂಡಳಿ ಸೂಚನೆಯಂತೆ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಬಳಿಕ ವೀಕ್ಷಕರ ಸಮ್ಮುಖದಲ್ಲಿ ಸಂಸದೀಯ ಮಂಡಳಿ ತೀರ್ಮಾನದಂತೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಸೂಚಕರು ಮತ್ತು ಅನುಮೋದಕರು ಅನುಮೋದಿಸಿದ ಬಳಿಕ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದವರು ಪತ್ರದೊಂದಿಗೆ ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದು.

ಬಹಳ ವರ್ಷಗಳ ಬಳಿಕ ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಬರುತ್ತಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ಸಿಗಲಿದೆ. ಜತೆಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅನುಕೂಲವಾಗಲಿದೆ. ವರಿಷ್ಠರ ಸೂಚನೆಗಾಗಿ ಕಾಯುತ್ತಿದ್ದು, ಅವರ ನಿರ್ದೇಶನದಂತೆ ಮುಂದುವರಿಯುತ್ತೇವೆ.
-ಆರ್‌.ಅಶೋಕ್‌, ಮಾಜಿ ಉಪಮುಖ್ಯಮಂತ್ರಿ

ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ನಾಯಕರು ಈ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಿದ್ದಾರೆ. ಅವರ ಸೂಚನೆಯಂತೆ ಎಲ್ಲ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತದೆ.
-ಬಸವರಾಜ ಬೊಮ್ಮಾಯಿ, ಮಾಜಿ ಸಚಿವ

ಬಿಜೆಪಿ ಸರ್ಕಾರ ರಚನೆಯ ಹೊಸ್ತಿಲಲ್ಲಿರುವುದು ರೈತ ಸಮೂಹಕ್ಕೆ ಸಂತಸದ ಸಂಗತಿ. ಮೈತ್ರಿ ಸರ್ಕಾರಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಬಹುಮತವಿಲ್ಲದ ಎಚ್‌ಡಿಕೆ ಸರ್ಕಾರ ಪತನವಾಗಿದೆ. ಕುಮಾರಸ್ವಾಮಿಯವರು ಬಹುಮತಕ್ಕೆ ಹಾಕಬಾರದಿತ್ತು. ವಿಶ್ವಾಸಮತ ಯಾಚನೆ ಪ್ರಸ್ತಾವವನ್ನು ಮತ ವಿಭಜನೆಗೆ ಹಾಕುವ ಮೂಲಕ ತಮಗಿದ್ದ ಅಲ್ಪಸ್ವಲ್ಪ ಗೌರವವನ್ನು ಕಳೆದುಕೊಂಡಿದ್ದಾರೆ.
-ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.